ಚೇಳ್ಯಾರ್ ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವ ಮೇ 14 ಮತ್ತು ಮೇ 15 ರಂದು ಜರಗಲಿದೆ. ಮೇ 14 ರಂದು ಬೆಳಿಗ್ಗೆ 7-00 ಗಂಟೆಗೆ ಮೀನು ಹಿಡಿಯುವಿಕೆ, ನಂತರ ಮೂಲಸ್ಥಾನದಲ್ಲಿ ಗಣಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 5-00 ರಿಂದ ಯಕ್ಷಗಾನ ಬಯಲಾಟ, ರಾತ್ರಿ 9-00 ಕ್ಕೆ ಬ್ರಹ್ಮಸ್ಥಾನದಲ್ಲಿ ತಂಬಿಲ, ಕುಮಾರ ಸಿರಿಗಳ ದರ್ಶನ, ದೈವಗಳ ಭಂಡಾರ ಮೂಲಸ್ಥಾನಕ್ಕೆ ಹೋಗುವುದು.

ಮೇ 15 ರಂದು ಬೆಳಿಗ್ಗೆ 5-00 ಕ್ಕೆ ಧರ್ಮರಸು ಉಳ್ಳಾಯ, ಇಷ್ಟದೇವತೆ, ಬಬ್ಬರ್ಯ, ಪರಿವಾರ ದೈವಗಳಿಗೆ ನೇಮೋತ್ಸವ, ನಂತರ ನಾಗದೇವರಿಗೆ ತಂಬಿಲ, ಜಾರಂದಾಯ ಕೊಡಮಣಿತ್ತಾಯ ದೈವಗಳಿಗೆ ಜೋಡಿ ನೇಮೋತ್ಸವ, ಕೋರ್ದಬ್ಬು ದೈವದ ಭೇಟಿ, ದೈವಗಳಿಗೆ ಸಾಮೂಹಿಕ ಹೂವಿನ ಪೂಜೆ, ಅನ್ನಸಂತರ್ಪಣೆ, ರಾತ್ರಿ 8-00 ಕ್ಕೆ ಪ್ರಸನ್ನ ಶೆಟ್ಟಿ ಬೈಲೂರು ರಚಿಸಿ ನಿರ್ದೇಶಿಸಿದ “ಅಷ್ಟಮಿ” ನಾಟಕ ಪ್ರದರ್ಶನ ನಡೆಯಲಿದೆ. ವಿಶೇಷವಾಗಿ “ತುಳುನಾಡ ಸಂತೆ” ಎರಡು ದಿನ ಜರಗಲಿದೆ ಎಂದು ದೈವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ತೋಕೂರುಗುತ್ತು ಪ್ರಕಟನೆಯಲ್ಲಿ ತಿಳಿಸಿದ್ದಾರೆ.