ಯಕ್ಷಧ್ರುವ ಪಟ್ಲ ಫೌಂಡೇಶನ್, ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜೂನ್ 22 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಪಣಜಿಯ ಮಿನೇಜಸ್ ಬೃಗಾನ್ಸ ಸಭಾಗೃಹದಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಭಾರತದ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ ನಾಯಕ್ ಉದ್ಘಾಟಿಸಲಿದ್ದಾರೆ. ಪರ್ವರಿಯ ಸಿದ್ಧಾರೂಢ ಮಠದ ಶ್ರೀ ಗಣೇಶಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಗೋವಾ ಇದರ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋವಾ ರಾಜ್ಯದ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ಗೋವಾ ವಿಧಾನಸಭೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕದ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಟಿಎಂ ಧ್ರುವ ಕುಮಾರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲರವರು ಉಪಸ್ಥಿತರಿರುವರು.

ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಬೆಳವಾಯಿ, ಗೋವಾ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಅಮೀನ್ ಬಂಟ್ವಾಳ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಇದರ ಗೌರವಾಧ್ಯಕ್ಷ ವಿಜಯೇಂದ್ರ ಶೆಟ್ಟಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಪಳ್ಳಿ ಘಟಕದ ಅಧ್ಯಕ್ಷ ಸುನಿಲ್ ಶೆಟ್ಟಿ ಪಳ್ಳಿ, ಉದ್ಯಮಿ ಭರತ್ ಹೆಗ್ಡೆ, ಗೋವಾ ಬಂಟರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ, ಗೋವಾ ಶ್ರೀ ನಾರಾಯಣ ಗುರು ಟ್ರಸ್ಟ್ ಇದರ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗೋವಾ ಯಕ್ಷಕಲಾ ಮಿತ್ರಕೂಟದ ಅಧ್ಯಕ್ಷ ವಿನಾಯಕ ಅವಧಾನಿ, ಗೋವಾ ಬಿಲ್ಲವ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ, ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷ ಶಶಿಧರ ನಾಯ್ಕ್, ಗೋವಾ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಪ್ರಶಾಂತ ಜೈನ್, ಗೋವಾ ಸರ್ಕಾರದಿಂದ ಅತ್ಯುತ್ತಮ ಸಾಮಾಜ ಸೇವಾ ಪ್ರಶಸ್ತಿ ಪುರಸ್ಕೃತರಾದ ಅಶೋಕ ಶೆಟ್ಟಿ, ಗೋವಾ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕಾರ್ಯದರ್ಶಿ ರಾಘವೇಂದ್ರ ಉಡುಪ, ಕೋಶಾಧಿಕಾರಿ ಮೋಹನದಾಸ ಶೆಟ್ಟಿ, ಉಪಾಧ್ಯಕ್ಷ ಜಗದೀಶ ಶೆಟ್ಟಿ ಪಳ್ಳಿ, ಅನಿಲ್ ಪೂಜಾರಿ, ಗೋವಾ ತುಳುಕೂಟದ ಉಪಾಧ್ಯಕ್ಷ ಶಶಿಧರ ರೈ, ಗೋವಾ ಸಂಸ್ಕೃತ ವಿದ್ವಾನ್ ಮತ್ತು ಯಕ್ಷಗಾನ ಅರ್ಥದಾರಿಗಳಾದ ಮಹಾಬಲ ಭಟ್ ಇವರುಗಳು ಉಪಸ್ಥಿತರಿರುವರು. ಅಂತರಾಷ್ಟ್ರೀಯ ನಿರೂಪಕರಾದ ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಲಿದ್ದಾರೆ.