ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಅಭಿಯಾನ 2025 – 26 ಯೋಜನೆಯ ಮೂಲಕ ಕಲಿಕಾಸಕ್ತ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ತರಗತಿ ಆರಂಭ ಮಾಡಲಾಯಿತು. ಕಾಂತವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ ಕುಲಾಲ್ ಬೇಲಾಡಿ ಇವರು ದೀಪ ಬೆಳಗಿಸಿ ನಾಟ್ಯ ತರಬೇತಿ ತರಗತಿಯನ್ನು ಉದ್ಘಾಟಿಸಿ, ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯಪೂರ್ಣ ಕಲೆ ಯಕ್ಷಗಾನ ಎಂದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಯಕ್ಷ ಕಲಾರಂಗ (ರಿ) ಕಾರ್ಕಳ ಇದರ ಕಾರ್ಯದರ್ಶಿ ಶ್ರೀ ಮಹಾವೀರ ಪಾಂಡಿ ಈ ಯಕ್ಷ ಶಿಕ್ಷಣ ಅಭಿಯಾನದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಯಕ್ಷಗಾನ ಮಹತ್ವದ ಬಗ್ಗೆ ಹೇಳಿದರು.

ಯಕ್ಷಕಲಾರಂಗ ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಉದ್ಯಮಿ ಇವರು ಈ ಸಂದರ್ಭದಲ್ಲಿ ಮಕ್ಕಳಿಗೆ ಶುಭ ಹಾರೈಸಿ ಯೋಜನೆಯ ಸದುಪಯೋಗ ಮಾಡಿಕೊಳ್ಳಿ ಎಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಶ್ರೀ ಕೆ ಶ್ರೀಪತಿ ರಾವ್ ಅದ್ಯಕ್ಷತೆ ವಹಿಸಿದ್ದರು. ಸಂಚಾಲಕರು,ಯಕ್ಷಗಾನ ನಾಟ್ಯ ಗುರುಗಳಾದ ಕೆ. ಧರ್ಮರಾಜ ಕಂಬಳಿ, ನಿವೃತ್ತ ಮುಖ್ಯ ಶಿಕ್ಷಕಿ ಶ್ಯಾಮಲಾ ಕುಮಾರಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಕರ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಹರಿಣಿ, ಲಿಂಗಪ್ಪ ದೇವಾಡಿಗ, ನಾರಾಯಣ ಭಟ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು.
ಶಾಲಾ ಆಡಳಿತ ಮಂಡಳಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಶಾಲಾಭಿಮಾನಿಗಳು ಹಿತೈಷಿಗಳು ಪೋಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಜ್ಯೋತಿ ಕಾರ್ಯಕ್ರಮದ ನಿರ್ವಹಣೆ ಮಾಡಿದರು. ಕು. ಗೀತಾ ದೇವಾಡಿಗ ಸ್ವಾಗತಿಸಿದರು. ಶ್ರೀಮತಿ ಚೇತನಾ ವಂದಿಸಿದರು. ನಂತರ ಯಕ್ಷ ಗುರು ಧರ್ಮರಾಜ ಕಂಬಳಿ ಯಕ್ಷಗಾನ ತರಗತಿ ನಡೆಸಿದರು.