ಎಂಪಿಎಂಎಲ್ಎ ನ್ಯೂಸ್ ವತಿಯಿಂದ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00 ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್ಹಾಲ್) ದಲ್ಲಿ ನಡೆಯಿತು. ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು, ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಸೌಹಾರ್ದತೆಯಲ್ಲಿ ಕೊರತೆಯಿದೆ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜ ಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಡಾ. ಅಣ್ಣಯ್ಯ ಕುಲಾಲ್ರವರು ಹೇಳಿದರು. ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ ಸಲ್ಡಾನ ಅವರು ಸೌಹಾರ್ದ ಸಂಗಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಮನುಷ್ಯ ಮನುಷ್ಯರ ನಡುವೆ ಸೌಹಾರ್ದತೆ, ಭಾೃತತ್ವ ಅತ್ಯಗತ್ಯವಾಗಿದ್ದು ಜಾತಿ, ಮತ, ಪಕ್ಷ ಭೇದವಿಲ್ಲದೆ ಸಾಧಕರುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸೌಹಾರ್ದ ಸಂಗಮ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಇಲ್ಲಿ ಸಂಘಟಕರ ಪ್ರಯತ್ನ ಮೆಚ್ಚತಕ್ಕದ್ದು ಎಂದು ಸೌಹಾರ್ದ ಸಂಗಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈಯವರು ತಿಳಿಸಿದರು.
ಸಮಾರಂಭದಲ್ಲಿ ವಾರ್ತಾ ಇಲಾಖೆಯ ದಿವ್ಯ ಆರ್. ಶೆಟ್ಟಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ, ಎಂ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ ಅನಿಲ್ ಲೋಬೊ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂಚಲಾಕ್ಷಿ ತೇಜೋಮಯ ಮೊದಲಾದವರು ಉಪಸ್ಥಿತರಿದ್ದರು. ನರೇಶ್ ಕುಮಾರ್ ಸಸಿಹಿತ್ಲು ಇವರು ಸ್ವಾಗತಿಸಿ, ಎಸ್.ಆರ್. ಪ್ರದೀಪ್ ವಂದಿಸಿದರು, ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ| ಅಶೋಕ್ ಶೆಟ್ಟಿ ಬಿ.ಎನ್ ರವರು ಪ್ರಸ್ತಾವನೆಗೈದರು. ದಿನಕರ ಡಿ. ಬಂಗೇರ ಸನ್ಮಾನ ಪತ್ರ ವಾಚಿಸಿದರು. ಕನ್ನಡ ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಬಳಗದವರಿಂದ ರಾಗ್ ರಂಗ್ ಸೌಹಾರ್ದ ಸುಗಮ ಸಂಗೀತ ರಸಮಂಜರಿ ಮತ್ತು ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗ ಚಲನ ಕಲಾವಿದರು ಮಂಗಳೂರು ಇವರಿಂದ ಯುವ ಜಾಗೃತಿ ಹಾಡುಗಳ ಮಿಶ್ರಣ ನಾಟಕ ವಿನೂತನ ಕಾರ್ಯಕ್ರಮ ನಡೆಯಿತು. ಈ ಸೌಹಾರ್ದ ಸಂಗಮದಲ್ಲಿ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ಸೌಹಾರ್ದ ರತ್ನ ಪ್ರಶಸ್ತಿ, ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿಯವರಿಗೆ ‘ಸಮಾಜ ರತ್ನ’ ಪ್ರಶಸ್ತಿ, ಡಾ. ರೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ ಪ್ರಶಸ್ತಿ, ಡಾ. ಶ್ರೀರಾಮ್ ಭಟ್ ಅವರಿಗೆ ವೈದ್ಯರತ್ನ ಪ್ರಶಸ್ತಿ, ಡಾ. ಅನುರಾಗ್ ಜೆ. ಶೆಟ್ಟಿಯವರಿಗೆ ಬೆಸ್ಟ್ ಡಾಕ್ಟರ್ಸ್ ಅವಾರ್ಡ್, ಬಂಟ್ವಾಳ ಅನಂತಾಡಿಯ ವೈದ್ಯರತ್ನ ನಾಟಿ ವೈದ್ಯ ಗಂಗಾಧರ ಕರಿಯ ಪಂಡಿತ್ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ಸೇರಿದಂತೆ ಆರು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.