ಮುನಿಯಾಲು ಬಂಟರ ಸಂಘದ ವತಿಯಿಂದ ಹದಿನೆಂಟನೇ ವರ್ಷದ ವಿದ್ಯಾರ್ಥಿ ವೇತನ, ಆಶಕ್ತರಿಗೆ ಸಹಾಯಧನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವು ಮುನಿಯಾಲು ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಮುನಿಯಾಲಿನ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಚವಟಿ ಶಂಕರ್ ಶೆಟ್ಟಿ ಹಾಗೂ ಜೂನಿಯರ್ ಕಬಡ್ಡಿ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿಪುಲ್ ಶೆಟ್ಟಿ ಮುಟ್ಲುಪಾಡಿ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮುನಿಯಾಲು ಬಂಟರ ಸಂಘದ ಗೌರವಾಧ್ಯಕ್ಷರಾದ ದಿವಾಕರ್ ವೈ ಶೆಟ್ಟಿ, ಸಂಘದ ಅಧ್ಯಕ್ಷರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ರಾಜ್ ಶೆಟ್ಟಿ ಮತ್ತು ನವೀನ್ ರಾಜ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗಣ್ಯರಾದ ಸೀತಾರಾಮ್ ಕಡಂಬ, ಅಶೋಕ್ ಶೆಟ್ಟಿ, ಭುಜಂಗ ಶೆಟ್ಟಿ, ಸುಜಯ್ ಶೆಟ್ಟಿ, ಸುಂದರ್ ಶೆಟ್ಟಿ, ಸುರೇಶ್ ರೈ, ಸಮೃದ್ಧಿ ಪ್ರಕಾಶ್ ಶೆಟ್ಟಿ ಹಾಗೂ ಪ್ರಸನ್ನ ಶೆಟ್ಟಿ ಮತ್ತು ದಯಾನಂದ ಶೆಟ್ಟಿ ಮುಟ್ಲುಪಾಡಿಯವರು ಆಗಮಿಸಿದ್ದರು. ಅಲ್ಲದೇ ವಿದ್ಯಾರ್ಥಿಗಳು, ಪೋಷಕರು ಹಾಗೂ ಬಂಟ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

















































































































