
ಕೇಂದ್ರ ಹಣಕಾಸು ಸಚಿವರಾದ ಗೌರವಾನ್ವಿತ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಭೇಟಿ ಮಾಡಿದರು. ಈ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಕಾಸಿತ್ ಭಾರತ್ 2047 ಕನಸಿನ ಭಾಗವಾಗಿ, 2026ರ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ‘ಸಿಟಿ ಎಕನಾಮಿಕ್ ರೀಜನ್’ (CER) ಯೋಜನೆಯ ವ್ಯಾಪ್ತಿಗೆ ಮಂಗಳೂರನ್ನು ಸೇರಿಸುವಂತೆ ಮನವಿ ಸಲ್ಲಿಸಲಾಯಿತು. ಈ CER ಯೋಜನೆಯು ಕರಾವಳಿ ಕರ್ನಾಟಕದ ಆರ್ಥಿಕ ಶಕ್ತಿಯನ್ನು ವೃದ್ಧಿಸಲು ಒಂದು ಉತ್ತಮ ಅವಕಾಶವಾಗಿದೆ.




























































































































