
ದಕ್ಷಿಣ ಕನ್ನಡ ಫಿಸಿಯೋಥೆರಪಿ ಟೀಚರ್ಸ್ ಅಸೋಸಿಯೇಷನ್ ಆಯೋಜಿಸಿದ ಫಿಸಿಯೋ ವೀಕ್ ನ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ ನೀರುಮಾರ್ಗದ ಮಂಗಳಾ ಕಾಲೇಜ್ ಆಫ್ ಫಿಸಿಯೋಥೆರಪಿ ಸಭಾಭವನದಲ್ಲಿ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಕಾರ್ಯಕ್ರಮ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತರಾಮ್ ಶೆಟ್ಟಿ, ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ| ಯು.ಟಿ ಇಫ್ತಿಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳಾ ಸಮೂಹ ವಿದ್ಯಾ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ| ಗಣಪತಿ ಪಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಅನಿತಾ ಉಪಸ್ಥಿತರಿದ್ದರು. ಒಂದು ವಾರ ನಡೆಯಲಿರುವ ಫಿಸಿಯೋ ವೀಕ್ ನ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಮೊದಲ ದಿನ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.




























































































































