ಸಿಕ್ಕಿದ ಅವಕಾಶವನ್ನು ನೈಜರೂಪಕ್ಕೆ ತಂದು ಅದನ್ನು ಯಶಸ್ವಿ ಮಾಡಬೇಕು. ಇಲ್ಲಿ ನಮ್ಮ ಜಾಣ್ಮೆ, ನಿರಂತರ ಪ್ರಯತ್ನ ಮತ್ತು ಬುದ್ಧಿವಂತಿಕೆ ಮುಖ್ಯ. ವ್ಯಕ್ತಿ ಬಿದ್ದಾಗ ಸೋಲಲ್ಲ. ಮತ್ತೊಮ್ಮೆ ಪುಟಿದೇಳಲು ಮರೆತಾಗ ಸೋಲೋದು. ಸೋಲು, ಹಿನ್ನಡೆಗಳು ಬದುಕಿನ ಒಂದು ಭಾಗ. ಬದುಕು ಬಹಳ ಮುಂದಿದೆ, ಹತಾಶರಾಗಬಾರದು. ಜೀವನದಲ್ಲಿ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ. ಇಲ್ಲೇನದರೂ ಎರಡು ವಿಚಾರಗಳು ಇದ್ದರೇ ಸಾಧ್ಯತೆಗಳು ಮತ್ತು ಅವಕಾಶಗಳು ಮಾತ್ರ ಎಂದು ರೋ. ಪಿ.ಎಚ್.ಎಫ್ ಅಭಿನಂದನ್ ಶೆಟ್ಟಿ ನುಡಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ- ೫೧ರಲ್ಲಿ ಭವಿಷ್ಯದ ನಿರೀಕ್ಷೆ ಮತ್ತು ಸವಾಲುಗಳು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.




ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿಗಳಾದಂತಹ ಅನಿಲ್ ಕುಮಾರ್ ಜೈನ್, ಉಪ ಪ್ರಾಂಶುಪಾಲರಾದ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಸಂಸ್ಥೆಯ ಹಿತೈಷಿ ರೋ. ಉಪೇಂದ್ರ ವಾಗ್ಲೆ ಉಪಸ್ಥಿತರಿದ್ದರು. ವಿದ್ಯಾರ್ಥಿ ಶಶಾಂಕ್ ಗೌಡರ್ ಪ್ರಾರ್ಥಿಸಿ, ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.















































































































