ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಫಾರ್ಚೂನ್ ಹೋಟೆಲಿನಲ್ಲಿ ಕೇರಳ ರಾಜ್ಯದ ನಾಡಹಬ್ಬ ‘ಓಣಂ’ ಅನ್ನು ಅಗಸ್ಟ್ 26 ರಂದು ಅಲ್ ಗಿಸಾಸ್ ನ ಫಾರ್ಚೂನ್ ಗ್ರಾಂಡ್ ಹೋಟೆಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ನಿರೂಪಕ, ಚಿತ್ರನಟ ಆರ್.ಜೆ. ಮಿಥುನುರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಎಲ್ಲಾರು ಒಟ್ಟುಗೂಡಿ ನಾಡಹಬ್ಬ ಓಣಂ ಆಚರಿಸಿದಾಗ ಶಾಂತಿ ಮತ್ತು ಸಹೋದರತೆಯ ಸಂತೋಷದ ವಾತಾವರಣ ಪಸರಿಸುತ್ತದೆ ಎಂದು ಮಾತನಾಡುತ್ತಾ ಎಲ್ಲಾರಿಗೂ ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು.




ಪ್ರವೀಣ್ ಕುಮಾರ್ ಶೆಟ್ಟಿಯವರು ಮಾತನಾಡುತ್ತಾ, ಕೇರಳದ ಸಂಸ್ಕೃತಿ, ಪರಂಪರೆ ಮತ್ತು ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪ್ರಮುಖ ಹಬ್ಬವೇ ಓಣಂ. ನಮ್ಮ ಸಂಸ್ಥೆಯ ಸಿಬ್ಬಂದಿಗಳು ಮತ್ತು ಗ್ರಾಹಕರೊಂದಿಗೆ ಒಟ್ಟುಗೂಡಿ ಓಣಂ ಹಬ್ಬವನ್ನು ಆಚರಿಸಲು ಸಂತೋಷವಾಗುತ್ತದೆ ಎಂದು ಹೇಳುತ್ತಾ ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ದುಬೈ ಮುನ್ಸಿಪಾಲಿಟಿ ಉದ್ಯೋಗಿ ಮಿಸ್ಟರ್ ಬೋಬಿ ಮತ್ತು ಪ್ರವೀಣ್ ಕುಮಾರ್ ಶೆಟ್ಟಿಯವರ ಪುತ್ರಿ ಪ್ರಾಂಚಿ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಪೂಕಳಂ (ಹೂವಿನ ರಂಗೋಲಿ) ಹಾಕಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರನ್ನೂ ಮಾವೆಲ್ಲಿ (ಬಲಿ ಚಕ್ರವರ್ತಿ) ಮತ್ತು ಕೇರಳದ ಚೆಂಡೆ ವಾದನದಲ್ಲಿ ಸ್ವಾಗತಿಸಲಾಯಿತು. ನಂತರ ಓಣಂ ಸದ್ಯ (ಭೋಜನ) ವಿತರಿಸಲಾಯಿತು.
ಚಿತ್ರ, ವರದಿ : ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)















































































































