ಮೈಸೂರಿನ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ (ನಿ.) ವತಿಯಿಂದ ರಜತ ಮಹೋತ್ಸವ ವರ್ಷದ ಪ್ರಯುಕ್ತ ಹಮ್ಮಿಕೊಂಡಿದ್ದ ಬೆಳ್ಳಿಚಪ್ಪರ, ಸಾಧಕರಿಗೆ ಸನ್ಮಾನ, ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ಸ್ಮರಣ ಸಂಚಿಕೆಗೆ ಜಾಹೀರಾತು ಮತ್ತು ಲೇಖನಗಳು ಹಾಗೂ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಪ್ರೋತ್ಸಾಹಿಸಿ ಯಶಸ್ವಿಗೊಳಿಸಿದ್ದಕ್ಕಾಗಿ ಮೈಸೂರಿನ ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ ಅವರನ್ನು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಪರವಾಗಿ ಅಧ್ಯಕ್ಷರಾದ ನಾರಾಯಣ ವಿ ಹೆಗ್ಡೆ ಅವರು ಅಭಿನಂದಿಸಿದರು.






































































































