
ಮಂಗಳೂರು: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ನ ‘ವಿಕೆಟ್ಸ್ ಫಾರ್ ವೆಲ್ಫೇರ್’ (Wickets for Welfare) ಅಂತರ
ಕಾಲೇಜು ಕ್ರಿಕೆಟ್ ಪಂದ್ಯಾವಳಿಯನ್ನು ಏಪ್ರಿಲ್ 20 ಹಾಗೂ 21ರಂದು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನ ಕ್ಷೇಮ ಗ್ರೌಂಡ್ಸ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.


ಈ ಪಂದ್ಯಾವಳಿಯನ್ನು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ವಿದ್ಯಾರ್ಥಿಗಳೇ ಏರ್ಪಡಿಸಿದ್ದು, ಈ ಕಾರ್ಯಕ್ರಮವನ್ನು ಎಚ್ಐವಿ ಸೋಂಕಿತ ಮಕ್ಕಳಿಗೆ ನೆರವು ಒದಗಿಸುತ್ತಿರುವ ಸ್ನೇಹಸದನ ಸೇಂಟ್ ಕ್ಯಾಮಿಲ್ಲಾಸ್ ಕೇರ್ ಹೋಮ್, ಗುರುಪುರ (Snehasadan St. Camillus Care Home) ಎಂಬ ಸಂಸ್ಥೆ ನೆರವಿಗಾಗಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಏಪ್ರಿಲ್ 20, 2024 ರಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಐಎಸ್ಆರ್) ಹಾಗೂ ಕೇಂದ್ರೀಯ ಸಂಶೋಧನಾ ಪ್ರಯೋಗಾಲಯ (ಸಿಆರ್ಎಲ್) ಉಪಾಧ್ಯಕ್ಷ ಪ್ರೊ.ಡಾ. ಸತೀಶ ಕುಮಾರ ಭಂಡಾರಿ ಮುಖ್ಯ ಅತಿಥಿಯಾಗಿ ಮತ್ತು ನಗರದ ಸ್ನೇಹಸದನ ಸಂಸ್ಥೆಯ ನಿರ್ದೇಶಕ ಸಿಬಿ ಕೈತರನ್ ಗೌರವ ಅತಿಥಿಯಾಗಿ ಭಾಗವಹಿಸಿ ಉದ್ಘಾಟಿಸಿದರು.
ಏಪ್ರಿಲ್ 21ರಂದು ಅಂತಿಮ ಘಟ್ಟದ ಪಂದ್ಯಗಳು ನಡೆದಿದ್ದು ಕೆ ಎಸ್ ಹೆಗ್ಡೆ ವೈದ್ಯಕೀಯ ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆದು ಎ ಬೀ ಶೆಟ್ಟಿ ಸ್ಮರಣಾರ್ಥ ದಂತ ವಿಜ್ಞಾನ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು ಹಾಗು ಕೆ ಎಸ್ ಹೆಗ್ಡೆ ವೈದ್ಯಕೀಯ ಕಾಲೇಜಿನ ಸೋಫಿ ಸರಣಿಶ್ರೇಷ್ಟರಾಗಿ, ಎ ಬೀ ಶೆಟ್ಟಿ ಸ್ಮರಣಾರ್ಥ ದಂತ ವಿಜ್ಞಾನ ಕಾಲೇಜಿನ ಡಾ. ಅಂಶುಮಾನ್ ಶೆಟ್ಟಿ ಉತ್ತಮ ದಾಂಡುಗಾರರಾಗಿ ಅದೇ ಕಾಲೇಜಿನ ಡಾ. ಮೂರ್ತಜಾ ಉತ್ತಮ ಎಸೆತಗಾರರಾಗಿ ಹೊರಹೊಮ್ಮಿದರು. ಸಮಾರೋಪ ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವ್ಯವಹಾರಗಳು ವಿಭಾಗದ ಸಹ ನಿರ್ದೇಶಕ ಕರ್ನಲ್ ಬಿ.ಎಸ್. ಘಿವಾರಿ ಗೌರವ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳ ಕ್ರೀಡಾ ಮನೋಭಾವವನ್ನು ಪ್ರಶಂಸಿಸಿದರು ಹಾಗು ಮುಂದಿನ ವರ್ಷದ ಪಂದ್ಯಾವಳಿಯಲ್ಲಿ ಹೆಣ್ಣುಮಕ್ಕಳು ಮೈದಾನದಲ್ಲಿ ಆಟವಾಡುವುದನ್ನು ನೋಡಲು ಇಚ್ಛಿಸುತ್ತಾರೆಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನುಡಿಗಳನ್ನು ನುಡಿದರು. ಕ್ರಿಕೆಟ್ ತರಬೇತುದಾರ ಸ್ಯಾಮ್ಯುಯೆಲ್ ಜಯರಾಜ್ ಮುತ್ತು ಮುಖ್ಯ ಅತಿಥಿಯಾಗಿ ಭಾಗವಹಿಸಿ ತಮ್ಮ ಅನುಭವದ ಮಾತುಗಳನ್ನಾಡಿ, ಕೆ ಎಸ್ ಹೆಗ್ಡೆ ವೈದ್ಯಕೀಯ ಕಾಲೇಜಿನ ಹಸಿರಾದ ಕ್ಷೇಮ ಮೈದಾನವನ್ನು ನೋಡಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು ಜೊತೆಗೆ ಸ್ಪರ್ಧಿಗಳಿಗೆ ಅಭಿನಂದಿಸಿ, ಉತ್ತಮ ಸಲಹೆಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.
ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಕಿಣಿ, ವಿಕೆಟ್ಸ್ ಫಾರ್ ವೆಲ್ಫೇರ್ ನ ಬೋಧಕ ವರ್ಗದ ಸಂಯೋಜಕರಾದ ಅಂಜಲಿ ರೈ ರವರು, ಪಂದ್ಯಾವಳಿಯ ವಿದ್ಯಾರ್ಥಿ ಸಂಯೋಜಕರಾದ ಅರ್ಫಾನ್ ಅಹ್ಮದ್ ಮತ್ತು ಶಾಂತಿ ನಿಕಿತಾ ಬಿಜು ಹಾಗೂ ವಿಧ್ಯಾರ್ಥಿ ಕ್ರೀಡಾ ಸಂಯೋಜಕ ಜಾನ್ಸನ್ ಡಿಸೋಜ ಅವರು ಈ ಕಾರ್ಯಕ್ರಮದ ಯಶಸ್ಸಿನಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು.
ಮೇಲ್ಕಂಡ ಪತ್ರಿಕಾ ಹೇಳಿಕೆಯನ್ನು ತಮ್ಮ ಪ್ರಸಿದ್ಧ ಪತ್ರಿಕೆಗಳಲ್ಲಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಕಟಿಸಬೇಕೆಂದು ವಿನಂತಿಸುತ್ತಿದ್ದೇವೆ.
ಸಂಪರ್ಕ:
ಜಾನ್ಸನ್ ಡಿಸೋಜ, ವಿದ್ಯಾರ್ಥಿ ಕ್ರೀಡಾ ಸಂಯೋಜಕ,
ಮೊಬೈಲ್ ಸಂಖ್ಯೆ: 91110438506
ಈ-ಮೇಲ್: johnsonmelroydsouza2003@gmail.com
ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಬಗ್ಗೆ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ GODOX ಫೋಟೋ ಎಕ್ವಿಪ್ಮೆಂಟ್ ಸಂಸ್ಥೆಯಿಂದ ಮಾನ್ಯತೆ ಪಡೆದ ಏಕಮಾತ್ರ ಸಂಸ್ಥೆಯಾಗಿದೆ. 2012ರಲ್ಲಿ ಸ್ಥಾಪಿತವಾದ ಈ ವಿದ್ಯಾಸಂಸ್ಥೆಯು ಅದ್ಭುತವಾದ ಸಕಲ ಸೌಲಭ್ಯಗಳು ಹಾಗೂ ಆಕರ್ಷಕ ಪಠ್ಯಕ್ರಮವನ್ನು ಒಳಗೊಂಡಿದೆ. ನಿಟ್ಟೆ ವಿಶ್ವವಿದ್ಯಾನಿಲಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದು ವಿದ್ಯಾರ್ಥಿಗಳಿಗೆ ಶ್ರೇಷ್ಠ ಮಟ್ಟದ ವಿದ್ಯಾಭ್ಯಾಸವನ್ನು ನೀಡಿ ಕುಶಲಮತಿಗಳಾಗುವಂತೆ ಮಾಡಲು ಶ್ರಮಿಸುತ್ತಿದೆ.
ಫಲಾನುಭವಿ ಸಂಸ್ಥೆ: ಸ್ನೇಹ ಚಾರಿಟಬಲ್ ಟ್ರಸ್ಟ್ ನ ಅಡಿಯಲ್ಲಿ ಸ್ನೇಹಸದನವು ಕಾರ್ಯನಿರ್ವಹಿಸುತ್ತಿದ್ದು, ಎಚ್ಐವಿ ಸೋಂಕಿತ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. 60 ಸೋಂಕಿತ ಮಕ್ಕಳನ್ನು ಪಾಲಿಸುವ ಸೌಲಭ್ಯಗಳನ್ನೊಳಗೊಂಡಿದ್ದು, 2001 ರಿಂದ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಜವಾಬ್ದಾರಿಯುತ ಮೂರನೆಯ ಪ್ರಧಾನ ಅಂಗಸಂಸ್ಥೆಯಾಗಿದೆ. ಸೋಂಕಿತ ಮಕ್ಕಳಲ್ಲಿ ಆಶಾಭಾವನೆಯನ್ನು ಮೂಡಿಸಿ ಮುಖ್ಯವಾಹಿನಿಗೆ ಕರೆತರುವ ಗುರುತರ ಜವಾಬ್ದಾರಿಯನ್ನು ಈ ಸಂಸ್ಥೆ ಹೊಂದಿದೆ.

























































































































