ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಯುಷ್ ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ತನ್ನ ಉತ್ತಮ ಸಾಧನೆಯಿಂದ ಸಂತಸಗೊಂಡಿರುವ ವಿದ್ಯಾರ್ಥಿ ಮಾತನಾಡುತ್ತಾ, ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಉತ್ತಮ ಬೋಧನೆ, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ ವಿಶೇಷ ಕಾರ್ಯಗಾರಗಳು, ಪೂರ್ವ ತಯಾರಿ ಪರೀಕ್ಷೆಗಳು, ಫಲಿತಾಂಶ ಆಧಾರಿತ ವಿಶೇಷ ಗಮನ ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು ಎಂದನು. ಮುಂಬೈ ಉದ್ಯಮಿ ಉದಯ್ ಶೆಟ್ಟಿಯವರ ಸುಪುತ್ರ ಆಯುಷ್ ಯು ಶೆಟ್ಟಿ ಮುಂದೆ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ವೈದ್ಯನಾಗುವ ಕನಸನ್ನು ಹೊಂದಿದ್ದಾನೆ.
