ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿ ಹಿಡಿದ ಸುಧಾಕರ್ ಬನ್ನಂಜೆಯವರು ಕತೆ, ಚಿತ್ರಕತೆ, ಸಂಭಾಷಣೆ ಹಾಡು ಬರೆದು ನಿರ್ದೇಶನ ಮಾಡಿದ್ದಾರೆ.

ತುಳು ಮೂಲದ ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ವಿ ಮನೋಹರ್ ಇದಕ್ಕೆ ಸಂಗೀತ ನೀಡಿದ್ದಾರೆ. ತುಳುನಾಡಿನ ಅಪ್ಪಟ ಪ್ರತಿಭೆ ತಮ್ಮ ಲಕ್ಷ್ಮಣ ಕಲಾ ನಿರ್ದೇಶನ, ಕೆ. ಗಿರೀಶ್ ಕುಮಾರ್ ಸಂಕಲನ, ಶಂಕರ್ ರವಿಕಿಶೋರ್ ಛಾಯಾಗ್ರಹಣ. ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ಲು ಸಹ ನಿರ್ದೇಶಕರಾಗಿ ದುಡಿದಿದ್ದಾರೆ.
ಸ್ನೇಹಕೃಪಾ ಲಾಂಚನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸಿ ಗಿರೀಶ್ ಪೂಜಾರಿ ಸಹಕಾರದೊಂದಿಗೆ ಸುಧಾಕರ ಬನ್ನಂಜೆ ನಿರ್ಮಿಸಿರುವ ಈ ಚಿತ್ರದ ಇತರ ಸಹ ನಿರ್ಮಾಪಕರು ಮಮತಾ ಎಸ್ ಬನ್ನಂಜೆ, ಕೃತಿ ಆರ್ ಶೆಟ್ಟಿ, ಪ್ರಾರ್ಥನ್ ಬನ್ನಂಜೆ .ಪ್ರೇರಣ್ ಬನ್ನಂಜೆ. ಪ್ರಚಾರ ಬಾಳ ಜಗನ್ನಾಥ ಶೆಟ್ಟಿ, ಚೀಫ್ ಕೋರ್ಡಿನೆಟರ್ ಸುಧಾಕರ ಕುದ್ರೋಳಿ, ಸಹಾಯ ಸಂತೋಷ ಇವರದ್ದು.ತಾರಾಗಣದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಆರ್ಯನ್ ಶೆಟ್ಟಿ, ಸ್ಮಿತಾ ಸುವರ್ಣ, ಭೋಜರಾಜ್ ವಾಮಂಜೂರು, ಸುಧೀರ್ ಕೊಠಾರಿ, ಉಮೇಶ್ ಮಿಜಾರು, ಸುಂದರ ರೈ ಮಂದಾರ, ಸಂದೀಪ ಶೆಟ್ಟಿ ಮಾಣಿಬೆಟ್ಟು, ಗಿರೀಶ್ ಶೆಟ್ಟಿ ಕಟೀಲು, ನಾಗೇಶ್ ಡಿ ಶೆಟ್ಟಿ, ಕ್ಲಾಡಿ ಡಿಲೀಮಾ, ಸಂಪತ್, ರವಿ ಸುರತ್ಕಲ್, ವಸಂತ ಮುನಿಯಾಲ್, ಯಾದವ ಮಣ್ಣಗುಡ್ಡೆ, ಪ್ರದೀಪ್ ಆಳ್ವ, ತಮ್ಮ ಲಕ್ಷಣ, ಪ್ರಶಾಂತ್ ಎಳ್ಳಂಪಳ್ಳಿ, ರಣವೀರ್, ಶೇಖರ ಪಾಂಗಾಳ, ರಾಕೇಶ್ ಆಚಾರ್ಯ, ಮಂಗೇಶ್ ಭಟ್ ವಿಟ್ಲ, ಜೀವನ್ ಉಲ್ಲಾಲ್, ಚೇತಕ್ ಪೂಜಾರಿ, ಮೋಹನ್ ಕೊಪ್ಪಳ, ಅರುಣ್ ಸತೀಶ್ ಕಲ್ಯಾಣಪುರ ಸುರೇಶ್ ಪಾಂಗಾಳ, ಸಂಚಿತ, ಮೈತ್ರಿ, ದಿಶಾ, ನಮಿತಾ, ಸಿಂಚನಾ, ಉಷಾ ಫೆರ್ನಾಂಡಿಸ್, ಮೋನಿಕಾ ಅಂದ್ರಾದೆ, ಶಾಂತಿ ಶೆಣೈ, ಸುಮಾಲಿನಿ, ರಮಾನಂದ ಕರ್ಪೆ, ಧನಂಜಯ ವಿಟ್ಲ, ಅಶೋಕ, ನಿಧಿ , ಸಮೃದ್ದಿ ಮೊದಲಾದ ತುಳುನಾಡ ಅನೇಕ ಪ್ರತಿಭಾವಂತ ನಟ ನಟಿಯರು ಅಭಿನಯಿಸಿದ್ದಾರೆ.ಪ್ರತಿಭಾವಂತ ನಾಯಕ ನಟರಾದ ಅಥರ್ವ ಪ್ರಕಾಶ್, ಶ್ರೀಕಾಂತ ರೈ, ಪ್ರಣವ್ ಹೆಗ್ಡೆ, ಶೈಲೇಶ್ ಕೋಟ್ಯಾನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಉಮೇಶ್ ಮಿಜಾರ್, ರಾಕೇಶ್ ಆಚಾರ್ಯ, ಆರ್ಯನ್ ಶೆಟ್ಟಿ, ಸುಧಾಕರ ಕುದ್ರೋಳಿ, ಪ್ರಶಾಂತ್ ಆಚಾರ್ಯ, ನಾಗೇಶ್ ಡಿ ಶೆಟ್ಟಿ, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.