ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ ಒಂದು ಹೊಸ ಛಾಪು ಮೂಡಿಸಿ, ಹಲವು ದಶಕಗಳಿಂದ ಹೋಟೆಲ್ ಉದ್ಯಮಿಯಾಗಿದ್ದು, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸರಳ ಸಜ್ಜನ ವ್ಯಕ್ತಿಯಾಗಿ ದುಡಿದು ನ್ಯಾಯ ಎಂದೆಂದಿಗೂ ಜಯದ ಮೂಲ ಎಂದು ಪರಿಗಣಿಸಿ ನಡೆಯುವ ವ್ಯಕ್ತಿ ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ರಾಜೇಂದ್ರ ವಿ ಶೆಟ್ಟಿಯವರು ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ರಿ.) ಇವರ ವತಿಯಿಂದ 5 ವರ್ಷಗಳಿಗೊಮ್ಮೆ ಕೊಡುವ ಹೋಟೆಲ್ ಉದ್ಯಮದ ಶ್ರೇಷ್ಠ ಪ್ರಶಸ್ತಿಯಾದ “ಆತಿಥ್ಯ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಯು ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಪುಣೆಯಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾ ಪೋಷಕರಾಗಿರುವ ರಾಜೇಂದ್ರ ಶೆಟ್ಟಿಯವರಿಗೆ 2024 ರ ಸಾಲಿನ ಬಂಟ ವಿಭೂಷಣ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ ಪುರಸ್ಕಾರಗಳು ಸಂದಿವೆ. ಇವರು ಹೋಟೆಲ್ ಉದ್ಯಮದಲ್ಲಿ ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ನಾವೆಲ್ಲರೂ ಹಾರೈಸೋಣ.