ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಖ್ಯಾತ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕ ಬೆಳ್ಳಾಡಿ ಅಶೋಕ್ ಶೆಟ್ಟಿಯವರು ಪಟ್ಲ ದಶಮ ಸಂಭ್ರಮಕ್ಕೆ 25 ಲಕ್ಷ ದೇಣಿಗೆಯನ್ನು ನೀಡಿದ್ದಾರೆ.

ಅಶೋಕ್ ಶೆಟ್ಟಿ ಹಾಗೂ ಅವರ ಕುಟುಂಬಕ್ಕೆ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾದ ಡಾ| ಕನ್ಯಾನ ಸದಾಶಿವ ಶೆಟ್ಟಿ, ಡಾ| ಕೆ ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಮತ್ತು ಪಟ್ಲ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಸಂಭ್ರಮ ದಶಮಾನೋತ್ಸವ ಸಮಿತಿಯ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.