ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕೃಷಿ ವಿಜ್ಞಾನ ವಿಭಾಗದಲ್ಲಿ ಪ್ರಸ್ತುತಿ ಶೆಟ್ಟಿ 222ನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾಳೆ. ಕುಂದಾಪುರದ ಸುಣ್ಣಾರಿಯಲ್ಲಿರುವ ಎಕ್ಸಲೆಂಟ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರಸ್ತುತಿ ಶೆಟ್ಟಿ 222ನೇ ರ್ಯಾಂಕ್ ಪಡೆಯುವ ಮೂಲಕ ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾಳೆ.

ಬೈಂದೂರು ತಾಲೂಕಿನ ಗುಡ್ಡೆಯಂಗಡಿ ಆಲೂರು ಶ್ರೀ ಮೂಕಾಂಬಿಕ ಹಳ್ಳಿ ಜನ್ಮನೆ ನಿವಾಸಿ ಹಾಗೂ ಅಮವಾಸ್ಯೆಬೈಲಿನ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ್ ಶೆಟ್ಟಿ ಹಾಗೂ ಪ್ರತಿಮಾ ಶೆಟ್ಟಿ ದಂಪತಿಯ ಪುತ್ರಿಯಾದ ಪ್ರಸ್ತುತಿ ಶೆಟ್ಟಿಯ ಸಾಧನೆಗೆ ಎಕ್ಸಲೆಂಟ್ ಪಿ.ಯು ಕಾಲೇಜಿನ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿ ಕಾಲೇಜಿನಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಂ.ಎಂ ಹೆಗ್ಡೆ ಎಜ್ಯುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಮೊಳಹಳ್ಳಿ ಮಹೇಶ್ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.