ಬೆಂಗಳೂರಿನ ಎಂ.ವಿ ಆಡಿಟೋರಿಯಂನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ 70 ನೇ ವಾರ್ಷಿಕೋತ್ಸವದಲ್ಲಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಪುಣೆಗಳಲ್ಲಿ ಹೋಟೆಲ್ ಉದ್ಯಮ ಸ್ಥಾಪಿಸಿರುವ ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ರಾಜೇಂದ್ರ ವಿ ಶೆಟ್ಟಿ ಅವರಿಗೆ ಪ್ರತಿಷ್ಠಿತ ಹೋಟೆಲ್ ಉದ್ಯಮದ ಶ್ರೇಷ್ಠ ಪ್ರಶಸ್ತಿಯಾದ ಆತಿಥ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ| ನಿರ್ಮಲಾನಂದನಾಥ ಶ್ರೀ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಶಾಸಕ ಡಾ. ಅಶ್ವಥ್ ನಾರಾಯಣ, ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಮಧುಕರ್ ಶೆಟ್ಟಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
