ಪುಣೆ ಬಂಟರ ಸಂಘದ ನೂತನ ಸಮಿತಿಯ ಪ್ರಥಮ ಸಭೆಯು ಮೇ 27ರಂದು ಪುಣೆ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಸುಲತಾ ಎ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳಾದ ಮೋಹನ್ ಶೆಟ್ಟಿ, ಸತೀಶ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ ಎರ್ಮಾಳ್, ಪ್ರಭಾಕರ್ ಶೆಟ್ಟಿ, ಗಣೇಶ್ ಶೆಟ್ಟಿ, ಮಾಧವ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ನಿಟ್ಟೆ, ವಿವೇಕಾನಂದ ಶೆಟ್ಟಿ, ಶೇಖರ್ ಶೆಟ್ಟಿ, ಗಣೇಶ್ ಪೂಂಜಾ, ರವಿ ಶೆಟ್ಟಿ ಕಾಪು, ಉದಯ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ಮಹಿಳಾ ವಿಭಾಗದ ಪ್ರಮುಖರಾದ ನೀನಾ ಬಿ ಶೆಟ್ಟಿ, ವೀಣಾ ಪಿ ಶೆಟ್ಟಿ, ಗೀತಾ ಅರ್ ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ವಿನೋದಾ ಶೆಟ್ಟಿ ಹಾಗೂ ಪ್ರಾದೇಶಿಕ ಸಮಿತಿಯ ಉತ್ತರ ವಲಯದ ಕಾರ್ಯಾಧ್ಯಕ್ಷ ನಾರಾಯಣ ಹೆಗ್ಡೆ, ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ್ ಶೆಟ್ಟಿ, ಪೂರ್ವ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸಂದೇಶ್ ಶೆಟ್ಟಿ, ಪ್ರಮುಖರಾದ ಉದಯ್ ಶೆಟ್ಟಿ ಕಳತ್ತೂರು, ವಸಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಭೆಯ ಮೊದಲಿಗೆ ಬಂಟರ ಭವನದ ಚಾವಡಿಯ ಶಕ್ತಿಗಳಿಗೆ ಪೂಜೆ, ಆರತಿ, ಬೆಳಗಿ ಪ್ರಾರ್ಥನೆ ಸಲ್ಲಿಸಿ ದೇವರ ಅನುಗ್ರಹ ಪಡೆಯಲಾಯಿತು. ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು ಸ್ವಾಗತಿಸಿದರು. ನಂತರ ಸಭೆಯಲ್ಲಿ 2025 -27 ಸಾಲಿಗೆ ಆಯ್ಕೆಯಾದ ಬಂಟರ ಸಂಘದ ನೂತನ ಸದಸ್ಯರನ್ನು ಸ್ವಾಗತಿಸಲಾಯಿತು ಹಾಗೂ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಂಟರ ಭವನದ ರೂವಾರಿ ಪುಣೆ ಬಂಟರ ಸಂಘಕ್ಕೆ ಅಸಾಧರಣ ಕೊಡುಗೆ ನೀಡಿದ ಬಂಟ ಸೇನಾನಿ, ಅನುಭವಿ ಸಂಘಟನಾ ಚತುರ, ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿಯವರನ್ನು ಜೀವಮಾನದವರೆಗೆ ಸಂಘದ ಗೌರವಾಧ್ಯಕ್ಷರನ್ನಾಗಿ ಮಾಡುವ ಬಗ್ಗೆ ಸಭೆಯಲ್ಲಿ ಅನುಮೋದನೆ ಮಾಡಿ ಸರ್ವ ಸದಸ್ಯರ ಒಮ್ಮತದಂತೆ ಅಂಗೀಕರಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಶೆಟ್ಟಿಯವರನ್ನು ಅಧ್ಯಕ್ಷರಾದ ಅಜಿತ್ ಹೆಗ್ಡೆಯವರು ಶಾಲು ಪುಷ್ಪಗುಚ್ಚ ನೀಡಿ ಸತ್ಕರಿಸಿದರು ಹಾಗೂ ಮಹಿಳಾ ವಿಭಾಗದ ವತಿಯಿಂದ ನಿಕಟಪೂರ್ವ ಕಾರ್ಯಾಧ್ಯಕ್ಷೆ ಸುಲತಾ ಎಸ್ ಶೆಟ್ಟಿಯವರು ಸಂಘಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಕಾರ್ಯಾಧ್ಯಕ್ಷೆ ಶಮ್ಮಿ ಹೆಗ್ಡೆಯವರು ಶಾಲು ಪುಷ್ಪಗುಚ್ಛ ನೀಡಿ ಸತ್ಕರಿಸಿದರು. ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಪ್ರಾದೇಶಿಕ ಸಮಿತಿಗಳ ಕೂಡುವಿಕೆಯಲ್ಲಿ ನಡೆದ ಸಭೆಯಲ್ಲಿ ಪುಣೆ ಬಂಟರ ಸಂಘದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಅಧ್ಯಕ್ಷ ಕೆ ಅಜಿತ್ ಹೆಗ್ಡೆಯವರು ಮಾತನಾಡಿ, ನಮ್ಮ ಅಧಿಕಾರವದಿಯಲ್ಲಿ ಸಂಘದ ಸರ್ವತೋಮುಖ ಪ್ರಗತಿಗೆ ಎಲ್ಲರ ಸಹಕಾರ ಬಹಳ ಮುಖ್ಯ. ನಮ್ಮ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗ, ಪ್ರಾದೇಶಿಕ ಸಮಿತಿಗಳ ಹೊಂದಾಣಿಕೆಯೊಂದಿಗೆ ಸಮಾಜದ ಅಭಿವೃದ್ದಿಗೆ ಶ್ರಮಿಸಿ ಹೊಸ ಯೋಜನೆಗಳ ಮೂಲಕ ನಾವು ನಮ್ಮ ಯಶಸ್ಸಿನ ಹಾದಿಯಲ್ಲಿ ಮುಂದುವರಿಯಬೇಕು. ನಮ್ಮ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿಯವರ ಅನುಭವ ಸಲಹೆ ನಮಗೆ ಸದಾ ಸಿಗಲಿದೆ. ಸಕಾರಾತ್ಮಕ ಚಿಂತನೆಯೊಂದಿಗೆ ಸಮಾಜಕ್ಕೆ ಪರಿಣಾಮಕಾರಿಯಾಗುವ ರೀತಿಯಲ್ಲಿ ನಮ್ಮ ಕಾರ್ಯ ಯೋಜನೆಗಳು ನಡೆಯಲಿ ಹಾಗೂ ನಾವು ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದರಾಗಿ ದುಡಿಯೋಣ ಎಂದರು.
ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿಯವರು ಸಂಘದ ಮುಂದಿನ ಕಾರ್ಯಕ್ರಮಗಳ ಬಗ್ಗೆ ರೂಪುರೇಷಗೆಳನ್ನು ಸಭೆಯಲ್ಲಿ ತಿಳಿಸಿದರು ಹಾಗೂ ನಮ್ಮ ಸಂಘದ ಪ್ರಗತಿಗೆ ಸರ್ವರ ಸಹಕಾರವನ್ನು ಬಯಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ವರದಿ, ಚಿತ್ರ: ಹರೀಶ್ ಮೂಡಬಿದಿರೆ ಪುಣೆ