ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 8ನೇ ಸ್ಥಾನ ಪಡೆದ ಯರುಕೋಣೆ ಸಂತೋಷ್ ಶೆಟ್ಟಿ ಮತ್ತು ಜನ್ನಾಲು ಚಂದ್ರಾವತಿ ಶೆಟ್ಟಿ ದಂಪತಿಗಳ ಪುತ್ರ ಚಿತ್ತೂರು ಪ್ರೌಢಶಾಲೆಯ ವಿದ್ಯಾರ್ಥಿ ರವಿತೇಜ ಶೆಟ್ಟಿ ಇವರನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೈಂದೂರು ಬಂಟರ ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರ್ ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಯ ಮನೆಗೆ ತೆರಳಿದ ತಂಡದಲ್ಲಿ ಸಂಘದ ಕಾರ್ಯಕಾರಿ ಸದಸ್ಯ ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ ವಂಡವಳ್ಳಿ ಜಯರಾಮ ಶೆಟ್ಟಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುದ್ರುಕೋಡು ಜಗದೀಶ ಶೆಟ್ಟಿ ನಗದು ಪುರಸ್ಕಾರ ವಿತರಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಜನ್ನಾಲು ಶೇಷು ಶೆಟ್ಟಿ ಹಾಗೂ ಸಾಧಕ ವಿದ್ಯಾರ್ಥಿ ರವಿತೇಜ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.