ಬಂಟರ ಯಾನೆ ನಾಡವರ ಮಾತೃ ಸಂಘ ಕಾರ್ಕಳ ತಾಲೂಕು ಸಮಿತಿ, ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘ ಹಾಗೂ ಯುವ ಬಂಟರ ಸಂಘ ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ದಿನಾಂಕ ಜೂನ್ 13 ರಂದು ನಡೆಯುವ ಆಟಿಡೊಂಜಿ ಬಂಟ ಕೂಟದ ಪೂರ್ವಭಾವಿ ಸಭೆಯು ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಕಳ ತಾಲೂಕಿನ ಸಂಚಾಲಕರಾದ ವಿಜಯ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳದ ಪ್ರಕಾಶ್ ಹೋಟೆಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಕಾರ್ಕಳ ತಾಲೂಕು ಬಂಟರ ಸಂಘದ ಸಂಚಾಲಕರಾದ ವಿಜಯ ಶೆಟ್ಟಿ, ಮಹಿಳಾ ಬಂಟ ಸಂಘದ ಅಧ್ಯಕ್ಷೆ ಪೂರ್ಣಿಮಾ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು, ಕೃಷ್ಣರಾಜ ಶೆಟ್ಟಿ, ಅವಿನಾಶ್ ಶೆಟ್ಟಿ, ಚೇತನ್ ಶೆಟ್ಟಿ ಹಾಗೂ ಮತ್ತಿತರ ಸಂಘದ ಸದಸ್ಯರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.