ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಪದವಿ ಪ್ರಧಾನ ಕಾರ್ಯಕ್ರಮವನ್ನು ಇತ್ತೀಚಿಗೆ ವಿಶೇಷವಾಗಿ ನಡೆಸಲಾಯಿತು. ಕಾಲೇಜಿನ ವಿವಿಧ ವಿಭಾಗದ ಪದವಿ ಪಡೆದ ನೂರಾರು ವಿದ್ಯಾರ್ಥಿಗಳನ್ನು ಮಹತ್ವದ ಶೈಕ್ಷಣಿಕ ಮೈಲಿಗಲ್ಲಾಗಿ ಗುರುತಿಸಲಾಯಿತು. ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನಾರಾಯಣ ಸ್ವಾಮಿಯವರು ಸ್ವಂತ ಜೀವನ ಮಾದರಿ ಮತ್ತು ಸಾರ್ವಜನಿಕ ಸೇವೆಗಳ ಬಗ್ಗೆ ಉದಾಹರಣೆ ನೀಡುವ ಮೂಲಕ ಸಮಗ್ರತೆ, ಪರಿಶ್ರಮದ ಮೌಲ್ಯದ ಬಗ್ಗೆ ಒತ್ತಿ ಹೇಳಿದರು.

ಸಂಸ್ಥೆಯ ಅಧ್ಯಕ್ಷರಾದ ಆರ್ ಉಪೇಂದ್ರ ಶೆಟ್ಟಿಯವರು ಶಿಸ್ತಿನ ಮಹತ್ವ, ಸಮಗ್ರ ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಂಸ್ಥೆಯ ಬದ್ಧತೆ ಬಗ್ಗೆ ಮಾತನಾಡಿದರು. ಪದವೀಧರರು ಜವಾಬ್ದಾರಿ ನಮ್ರತೆಯಿಂದ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ಜಪ್ತಿ ಸಂತೋಷ ಶೆಟ್ಟಿ ಅವರು ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು. ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಶೈಕ್ಷಣಿಕ ಶ್ರೇಷ್ಠತೆ, ಸಹಪಠ್ಯ ಕೊಡುಗೆಗಳಿಗಾಗಿ ಅತ್ಯುತ್ತಮ ಸಾಧಕರಿಗೆ ಪದಕ, ವಿಶೇಷ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು.
ಯುಸಿಸಿ ಸ್ಪರ್ಧಾತ್ಮಕ ಕಪ್ ವಿಜೇತರನ್ನು ಸನ್ಮಾನಿಸಲಾಯಿತು. ಚೆಡಿ ತಂಡವು 50,000 ರೂ. ಪ್ರಥಮ ಬಹುಮಾನ ನಗದು ಬಹುಮಾನ ಪಡೆದರೆ, ಕುರು ತಂಡವು 30 ಸಾವಿರ ರೂಪಾಯಿಯೊಂದಿಗೆ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಪಾಲಕರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.