ಮಂಗಳೂರಿನ ಪ್ರತಿಷ್ಟಿತ ಸಹಕಾರಿ ಸಂಸ್ಥೆಯಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ದಿನಾಂಕ 18.06.2025ರ ಬುಧವಾರ ಮಂಗಳೂರಿನ ಪಡೀಲ್ನಲ್ಲಿ ತನ್ನ 29ನೇ ಶಾಖೆಯನ್ನು ಸಿಟಡೆಲ್ ಪ್ಯಾರೆಡೈಸ್ನ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈರವರು ಉದ್ಘಾಟಿಸುವುದರೊಂದಿಗೆ ಶುಭಾರಂಭಗೊಂಡಿತು. ಉಪಾಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ಜಯಪಾಲ ಶೆಟ್ಟಿಯವರ ಶುಭ ಸಂದೇಶವನ್ನು ವಾಚಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಕೆ. ಸೀತಾರಾಮ ರೈ ಸವಣೂರು, ಡಾ| ಕೆ. ಸುಭಾಶ್ಚಂದ್ರ ಶೆಟ್ಟಿ. ಶ್ರೀ ಎಂ. ರಾಮಯ ಶೆಟ್ಟಿ, ಶ್ರೀ ಕುಂಬ್ರ ದಯಾಕರ ಆಳ್ವ, ಶ್ರೀ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಡಾ| ಬಿ. ಸಂಜೀವ ರೈ ಹಾಗೂ ಸಂಘದ ಸದಸ್ಯ ಗ್ರಾಹಕರು ಉಪಸ್ಥಿತರಿದ್ದು ಶಾಖೆಗೆ ಶುಭ ಹಾರೈಸಿದರು. ಸಭೆಯ ಆರಂಭದಲ್ಲಿ ಸಿಬ್ಬಂದಿ ಶ್ರೀಮತಿ ಸನಿಹ ಶೆಟ್ಟಿ ಪ್ರಾರ್ಥಿಸಿದರು. ಮಹಾಪ್ರಬಂಧಕರಾದ ಶ್ರೀ ಗಣೇಶ್ ಜಿ.ಕೆ ರವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಅಶ್ವಿನಿ ಎಸ್. ಶೆಟ್ಟಿ ವಂದಿಸಿದರು. ಸಿಬ್ಬಂದಿ ಶ್ರೀ ಶಮಂತ್ ಟಿ. ರೈ ಕಾರ್ಯಕ್ರಮವನ್ನು ನಿರೂಪಿಸಿದರು.