ಯಕ್ಷಗಾನ ಕಲೆಯು ನಮ್ಮ ದೇಶದ ಬಹುದೊಡ್ಡ ಕಲೆಯಾಗಿದೆ. ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಯಕ್ಷಗಾನವನ್ನು ನಾನು ವೀಕ್ಷಿಸಿದ್ದೇನೆ. ಈ ರಾಜ್ಯಗಳಲ್ಲಿ ಯಕ್ಷಗಾನ ಕಲೆ ಆರಾಧನಾ ಕಲೆಯಾಗಿದೆ. ಈ ಕಲೆಯು ಪ್ರಪಂಚದಾದ್ಯಂತ ಪಸರಿಸಿದೆ. ಈ ಪ್ರಾಚೀನ ಕಲೆಯನ್ನು ಹೊರ ರಾಜ್ಯ ಗೋವಾದಲ್ಲಿಯೂ ಮುಂದುವರೆಸಿಕೊಂಡು ಹೋಗುವ ಕಾರ್ಯವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಭಾರತ ಪ್ರವಾಸೋದ್ಯಮ ಮತ್ತು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯ್ಕ ನುಡಿದರು. ಜೂನ್ 22ರಂದು ಭಾನುವಾರ ಸಂಜೆ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಯಕ್ಷಗಾನ ಕಲೆಯ ನಮ್ಮ ಸಂಸ್ಕೃತಿ ಈ ಕಲೆಯನ್ನು ಮುಂದಿನ ಪೀಳಿಗೆಗೆ ಈ ಸಂಸ್ಕಾರವನ್ನು ಮುಂದುವರಿಸಿಕೊಂಡು ಹೋಗಬೇಕಿದೆ. ಮಕ್ಕಳಿಗೆ ಶಿಕ್ಷಣದೊಂದಿಗೆ ಇಂತಹ ಕಲೆಯನ್ನು ಕೂಡಾ ಮುಂದುವರೆಸಿಕೊಂಡು ಹೋಗುವ ಅಗತ್ಯವಿದೆ. ನಾವು ಭಾರತದ ಬೇರೆ ಬೇರೆ ರಾಜ್ಯದವರಾಗಿದ್ದರೂ ಕೂಡ ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಎಲ್ಲಾ ಭಾಷೆಗಳನ್ನೂ ಕಲಿಯಬೇಕು ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ನುಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗೋವಾ ವಿಧಾನಸಭೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಟಿ.ಎನ್. ಧ್ರುವಕುಮಾರ್ ಮಾತನಾಡಿ, ಯಕ್ಷಗಾನ ಕಲೆಯು ನಮ್ಮ ಪ್ರಾಚೀನ ಕಲೆಯಾಗಿದೆ. ಹಿಂದಿನ ಕಾಲದಿಂದಲೂ ಕೂಡಾ ಈ ಯಕ್ಷಗಾನ ಕಲೆಯು ಪ್ರಸಿದ್ಧಿ ಪಡೆದಿದೆ. ಈ ಕಲೆಯು 11ನೇಯ ಶತಮಾನದಲ್ಲಿ ಆರಂಭಗೊಂಡಿರುವ ದಾಖಲೆಯಿದೆ. ಯಕ್ಷಗಾನ ಕಲೆ ಶ್ರೀ ಕೃಷ್ಣದೇವರಾಯರವರ ಕಾಲದಲ್ಲಿ ಇತ್ತು ಎಂಬ ದಾಖಲೆ 15ನೇ ಶತಮಾನದ ಶಿಲಾಶಾಸನ ಬಳ್ಳಾರಿಯ ಕುರುಗೋಡಿಯಲ್ಲಿ ಸಿಕ್ಕಿದೆ. ಇದರ ಸಾಕ್ಷ ಮದ್ರಾಸ ವಿಶ್ವವಿದ್ಯಾಲಯದಲ್ಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಸತೀಶ ಶೆಟ್ಟಿ ಪಟ್ಲ ಮಾತನಾಡಿ, ಯಕ್ಷಧ್ರುವ ಫೌಂಡೇಶನ್ ಯಕ್ಷಗಾನ, ನಾಟಕ, ರಂಗಭೂಮಿ, ದೈವಾರಾಧನೆ ಹಾಗೂ ಕಂಬಳ ಕ್ಷೇತ್ರದಲ್ಲಿ ದುಡಿಯುವಂತಹ ಎಲ್ಲಾ ಕಲಾವಿದರುಗಳಿಗೆ ಸುಮಾರು 15 ಕೋಟಿ ರೂ. ಗಳವರೆಗೆ ನಾವು ಬೇರೆ ಬೇರೆ ರೂಪದಲ್ಲಿ ಕಳೆದ 10 ವರ್ಷದಲ್ಲಿ ನೀಡಿದ್ದೇವೆ. ಯಕ್ಷಗಾನದ ಇತಿಹಾಸದಲ್ಲಿ ಇದು ಪ್ರಪ್ರಥಮ ಎಂದರು. ಈ ಸಂದರ್ಭದಲ್ಲಿ ಗೌರವ ಉಪಸ್ಥಿತಿಯಿದ್ದ ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್ ಮಾತನಾಡಿ, ಗೋವಾದ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತೆಂಕುತಿಟ್ಟಿನ ಕಲಾವಿದರ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯುತ್ತಿದೆ. ಈ ಯಕ್ಷಗಾನ ಪ್ರದರ್ಶನಕ್ಕೆ ಪಾವಂಜೆ ಮೇಳವೇ ಇಲ್ಲಿ ಬಂದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ಅಧ್ಯಕ್ಷ ಗಣೇಶ ಶೆಟ್ಟಿ ಇರ್ವತ್ತೂರುರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಪ್ರಾಸ್ತಾವಿಕ ಮಾತನಾಡಿದರು. ಗೌರವ ಉಪಸ್ಥಿತಿಯಾಗಿ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಬೆಳುವಾಯಿ, ಗೋವಾ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಅಮೀನ್ ಬಂಟ್ವಾಳ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ಗೌರವಾಧ್ಯಕ್ಷ ವಿಜಯೇಂದ್ರ ಶೆಟ್ಟಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಯಕ್ಷದ್ರುವ ಪಟ್ಲ ಪೌಂಡೇಶನ್ ಪಳ್ಳಿ ಘಟಕದ ಅಧ್ಯಕ್ಷ ಸುನಿಲ್ ಶೆಟ್ಟಿ ಪಳ್ಳಿ, ಉದ್ಯಮಿ ಭರತ್ ಹೆಗ್ಡೆ, ಗೋವಾ ಬಂಟರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ, ಗೋವಾ ಶ್ರೀನಾರಾಯಣ ಗುರು ಟ್ರಸ್ಟ್ ಅಧ್ಯಕ್ಷ ಪ್ರಕಾಶ ಪೂಜಾರಿ, ಮ್ಯಾಥ್ಯೂಸ್ ಗ್ರೂಪ್ ಗೋವಾ ಸಿ.ಇ.ಓ ಮಲ್ಲಿಕಾರ್ಜುನ ಬಾದಾಮಿ, ಗೋವಾ ಯಕ್ಷಕಲಾ ಮಿತ್ರಕೂಟ ಅಧ್ಯಕ್ಷ ವಿನಾಯಕ ಅವಧಾನಿ, ಗೋವಾ ಬಿಲ್ಲವ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ, ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷ ಶಶಿಧರ ನಾಯ್ಕ, ಗೋವಾ ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಪ್ರಶಾಂತ್ ಜೈನ್ (ಸಿ.ಎ), ಗೋವಾ ಸರ್ಕಾರದಿಂದ ಗೋವಾ ಸರಕಾರದಿಂದ ಅತ್ಯುತ್ತಮ ಸಾಮಾಜಿಕ ಸೇವಾ ಪ್ರಶಸ್ತಿ ಪುರಸ್ಕೃತರತರಾದ ಅಶೋಕ ಶೆಟ್ಟಿ, ಗೋವಾ ಯಕ್ಷಧ್ರುವ ಪಟ್ಲ ಪೌಂಡೇಶನ್ ಘಟಕದ ಕಾರ್ಯದರ್ಶಿ ರಾಘವೇಂದ್ರ ಉಡುಪ, ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ, ಉಪಾಧ್ಯಕ್ಷ ಜಗದೀಶ ಶೆಟ್ಟಿ ಪಳ್ಳಿ, ಉಪಾಧ್ಯಕ್ಷ ಅನಿಲ್ ವಿ. ಪೂಜಾರಿ, ಗೋವಾ ತುಳುಕೂಟದ ಉಪಾಧ್ಯಕ್ಷ ಶಶಿಧರ್ ರೈ, ಗೋವಾ ಸಂಸ್ಕೃತ ವಿದ್ವಾನ್ ಮತ್ತು ಯಕ್ಷಗಾನ ಅರ್ಥಧಾರಿಗಳಾದ ಮಹಾಬಲ ಭಟ್ ರವರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಾನ್ವಿತ ವಿದ್ಯಾರ್ಥಿ ದಕ್ಷ ಶೆಟ್ಟಿರವರಿಗೆ ಪಟ್ಲ ಫೌಂಡೇಶನ್ ಗೋವಾ ಘಟಕದ ಅಧ್ಯಕ್ಷ ಗಣೇಶ ಶೆಟ್ಟಿರವರು ವಿದ್ಯಾನಿಧಿ ವಿತರಿಸಿದರು. ಸಭಾ ಕಾರ್ಯಕ್ರಮದ ನಂತರ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ರವರ ಸಾರಥ್ಯದಲ್ಲಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯೊಂದಿಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆರವರಿಂದ ಶ್ರೀದೇವಿ ಮಹಾತ್ಮೆ ಸಂಪೂರ್ಣ ಯಕ್ಷಗಾನ ಪ್ರದರ್ಶನ ನಡೆಯಿತು. ಯಕ್ಷಗಾನ ವೀಕ್ಷಣೆಗೆ ಗೋವಾ ರಾಜ್ಯದ ಮೂಲೆ ಮೂಲೆಯಿಂದ ಯಕ್ಷಗಾನ ಪ್ರೇಮಿಗಳು ಆಗಮಿಸಿದ್ದು, ಸಭಾಗೃಹ ಸಂಪೂರ್ಣ ಭರ್ತಿಯಾಗಿತ್ತು.