ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರು ತಾಲೂಕು ವ್ಯಾಪ್ತಿಯ ಬಂಟ ಸಮಾಜದ 2024-25ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡ 95 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಸ್ವಯಂ ಲಿಖಿತ ಅರ್ಜಿಯ ಜೊತೆ ಆಧಾರ್ ಕಾರ್ಡಿನ ಪ್ರತಿ ಮತ್ತು ಅಂಕಪಟ್ಟಿಯ ಪ್ರತಿ, ಒಂದು ಪಾಸ್ಪೋರ್ಟ್ ಸೈಜ್ ಪೊಟೋವನ್ನು ಜುಲೈ 10 ರ ಒಳಗೆ ಬಂಟರ ಯಾನೆ ನಾಡವರ ಮಾತೃಸಂಘ ಕಛೇರಿ, ಅಮೃತೋತ್ಸವ ಕಟ್ಟಡ, ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9343562173, 9448858292, 9480015895 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.