ಜೂನ್ 27 ರಂದು ಶುಕ್ರವಾರ ಸಂಜೆ ಕುಂದಾಪುರ ಫ್ರೆಂಡ್ಸ್ ವತಿಯಿಂದ ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಲೋಕೇಶ ಸಿ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟೀಚರ್ಸ್ ಕೋ ಓಪರೇಟಿವ್ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷರಾದ ವಿ ಸಂತೋಷ್ ಕುಮಾರ್ ಶೆಟ್ಟಿ, ಎ.ಪಿ.ಟಿ ಪೆರ್ಡೂರು ಶಾಲೆಯ ಮುಖ್ಯ ಶಿಕ್ಷಕರಾದ ಸತೀಶ್ ಶೆಟ್ಟಿ, ಕುಂದಾಪುರ ವಲಯದ ಅನುದಾನಿತ ಪ್ರಾಥಮಿಕ ಶಾಲಾ ಸಂಘದ ವಲಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಭಂಡಾರಿ, ವೀರೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೆಂಜೂರು ಇಲ್ಲಿನ ಮುಖ್ಯ ಶಿಕ್ಷಕರಾದ ನವೀನ್ ಚಂದ್ರ ಶೆಟ್ಟಿ, ಪಿ.ಎಂ.ಶ್ರೀ ಕುವೆಂಪು ಶಾಲೆಯ ಶಿಕ್ಷಕರಾದ ಸದಾನಂದ ಶೆಟ್ಟಿ ಮತ್ತು ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ಎಂ ನಾಗರಾಜ್ ಶೆಟ್ಟಿಯವರು ಉಪಸ್ಥಿತರಿದ್ದರು.
