ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು ಇಲ್ಲಿ ಯಕ್ಷ ಕಲಾರಂಗ (ರಿ) ಕಾರ್ಕಳ, ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯಕ್ಷ ಕಲಾರಂಗದ ಕಾರ್ಕಳ ಘಟಕದ ಅಧ್ಯಕ್ಷರಾದ ವಿಜಯ ಶೆಟ್ಟಿ, ಸಂಚಾಲಕರಾದ ಪದ್ಮನಾಭ ಗೌಡ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಯಕ್ಷ ಗುರುಗಳಾದ ಶ್ರೀ ಮಹಾವೀರ ಪಾಂಡಿ, ಊರಿನ ಹಿರಿಯರಾದ ಶ್ರೀ ಜಯಕೀರ್ತಿ ಕಡಂಬರು, ನಿವೃತ್ತ ಶಿಕ್ಷಕರಾದ ರಮಾನಾಥ ಶೆಣೈ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಧ್ವರಾಜ್, ಶಾಲಾ ಹಿತೈಷಿ ಚಂದ್ರರಾಜ ಅತಿಕಾರಿ, ಗೋಪಾಲ ಪೂಜಾರಿ ಗರಡಿಮನೆ, ಪಂಚಾಯತ್ ಸದಸ್ಯರಾದ ಶೇಖರ ಅಂಚನ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಅರುಣ್ ಕುಮಾರ್ ಶೇಟ್ ನಿರ್ವಹಿಸಿ ಶಿಕ್ಷಕರಾದ ಆನಂದ್ ಪೂಜಾರಿ ಸ್ವಾಗತಿಸಿ, ಯಕ್ಷ ಗುರುಗಳಾದ ಮಹಾವೀರ ಪಾಂಡಿ ಅವರು ಪ್ರಾಸ್ತಾವನೆಗೈದರು. ಪ್ರಭಾರ ಮುಖ್ಯ ಶಿಕ್ಷಕಿ ಶಕುಂತಲಾ ರಾವ್ ಅವರು ವಂದನಾರ್ಪಣೆಗೈದರು.
