ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ ಜಿಲ್ಲೆಯ ಹಲವು ದೇವಸ್ಥಾನ ದೈವಸ್ಥಾನಗಳ ಜೀರ್ಣೋದ್ದಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿ ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿದ್ದಾರೆ. ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿದ್ದಾರೆ.

ಉಪಾಧ್ಯಕ್ಷರಾಗಿ ಉದ್ಯಮಿ ಐತಪ್ಪ ಆಳ್ವ, ಕಾರ್ಯದರ್ಶಿಯಾಗಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಸದಾನಂದ ಆಳ್ವ ಕಂಪ, ಕೋಶಾಧಿಕಾರಿಯಾಗಿ ಉದ್ಯಮಿ ಲೋಕೇಶ್ ಶೆಟ್ಟಿ ಕುಳ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ, ಜೊತೆ ಕೋಶಾಧಿಕಾರಿಯಾಗಿ ವಿದ್ಯಾ ರೈ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಆಯ್ಕೆಯ ಸಭೆಯು ಬಂಟ್ವಾಳ ತಾಲೂಕು ಬಂಟರ ಭವನದ ಸಭಾಂಗಣದಲ್ಲಿ ಜರಗಿತು. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕಿರಣ್ ಹೆಗ್ಡೆ ಅನಂತಾಡಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಲೋಕನಾಥ ಶೆಟ್ಟಿ ಬಿಸಿರೋಡ್, ಶಾಂತಾರಾಮ ಶೆಟ್ಟಿ ಬೋಳಂತೂರು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.