ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024 -25 ನೇ ಸಾಲಿನಲ್ಲಿ ಶೇಕಡ 100 ಸಾಧನೆ ಮಾಡಿದ್ದು, ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ್ ರೈ ಬಳಜ್ಜ, ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.