ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒoದಾಗಿರುವ ಪ್ರತಿಷ್ಟಿತ ಸಹಕಾರ ಮಾಣಿಕ್ಯ ಪ್ರಶಸ್ತಿ ಪುರಸ್ಕöÈತ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯು ೨೦೨೪-೨೫ನೇ ಸಾಲಿನಲ್ಲಿ ರೂ. ೫೮೯ ಕೋಟಿ ಠೇವಣಿ, ೫೦೫ ಕೋಟಿ ಸಾಲದೊಂದಿಗೆ ಒಟ್ಟು ವ್ಯವಹಾರ ರೂ. ೧೦೯೪ ಕೋಟಿ ಒಟ್ಟು ವ್ಯವಹಾರವನ್ನು ದಾಖಲಿಸಿ ರೂ.೧೬.೨೯ ಕೋಟಿ ನಿವ್ವಳ ಲಾಭ ಗಳಿಸಿ ಕಳೆದ ೧೮ ವರ್ಷದಿಂದ ನೆಟ್ ಎನ್.ಪಿ.ಎ. ಯನ್ನು ಶೂನ್ಯ ಪ್ರಮಾಣದಲ್ಲಿರಿಸಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನವರು ಗುರುತಿಸಿ ತಮ್ಮ ದಿನಾಂಕ ೩೦.೦೮.೨೦೨೫ರಂದು ಜರಗಿದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ರವರು, ಉಭಯ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರುಗಳಾದ ಶ್ರೀ. ಎಚ್. ಎನ್. ರಮೇಶ್ ಮತ್ತು ಶ್ರೀಮತಿ ಲಾವಣ್ಯ ಕೆ. ಆರ್., ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸರ್ವ ನಿರ್ದೇಶಕರುಗಳು, ದ. ಕ. ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರುಗಳು, ಸಂಘದ ನಿರ್ದೇಶಕರಾದ ಶ್ರೀ ದಯಾಕರ ಆಳ್ವರವರ ಸಮಕ್ಷಮದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರಿಗೆ ಹಾಗೂ ಮಹಾಪ್ರಬಂಧಕ ಶ್ರೀ ಗಣೇಶ್ ಜಿ.ಕೆ.ಯವರಿಗೆ ಸಾಧನಾ ಪ್ರಶಸ್ತಿ ಪ್ರದಾನ ಮಾಡಿದರು. ಸಂಘಕ್ಕೆ ಈ ಪ್ರಶಸ್ತಿಯು ಕಳೆದ ೯ ವರ್ಷಗಳಿಂದ ಸತತವಾಗಿ ಹಾಗೂ ಒಟ್ಟು ೧೪ನೇ ಬಾರಿಗೆ ಲಭಿಸಿರುವುದು ದಾಖಲೆಯಾಗಿದೆ.