ಮುಂಬಯಿಯಲ್ಲಿ ನೆಲೆಸಿ ಯಕ್ಷಗಾನ ಕಲೆಯ ಏಳಿಗೆ ಮತ್ತು ಉಳಿವಿಗೆ ಅವಿರತ ಶ್ರಮ ವಹಿಸುತ್ತಿರುವುದರ ಜೊತೆಗೆ ಅಶಕ್ತ ಕಲಾವಿದರಿಗೆ ನೆರವು, ಪ್ರತಿಭಾವಂತರಿಗೆ ಪುರಸ್ಕಾರ, ಸಾಧಕರಿಗೆ ಸನ್ಮಾನ, ತಾಳಮದ್ದಳೆ ಹಾಗೂ ಯಕ್ಷಗಾನ ಸಂಯೋಜನೆ ಇನ್ನೂ ಹಲವಾರು ಮಹತ್ಕಾರ್ಯಗಳಿಂದ ಕಲಾರಸಿಕರ ಕಲಾವಿದರ ಅಂತರಂಗದಲ್ಲಿ ಸ್ಥಿರಸ್ಥಾನ ಗಳಿಸಿದ ಮಹಾಸಾಧಕ, ಸಜ್ಜನ, ಉದ್ಯಮಿ ಶ್ರೀ ಅಜೆಕಾರು ಬಾಲಕೃಷ್ಣ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇವೆ.






































































































