ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿ ಪೂರ್ವ ಕಾಲೇಜು ಜಾಲಹಳ್ಳಿ ಇವರ ಜಂಟಿ ಆಶ್ರಯದಲ್ಲಿ ಜರುಗಿದ ರಾಜ್ಯಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಕು.ಗ್ರೀಷ್ಮಾ ಎಸ್ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಮುಂಬರುವ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ಸತೀಶ್ ಹಾಗೂ ಶ್ರೀಮತಿ ಚೈತ್ರಾ ದಂಪತಿಗಳ ಸುಪುತ್ರಿಯಾಗಿರುತ್ತಾರೆ ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು, ಟ್ರಸ್ಟಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದ್ದಿ ವರ್ಗದವರು ಹರ್ಷವ್ಯಕ್ತಪಡಿಸಿ ಶುಭಹಾರೈಸಿದ್ದಾರೆ.

















































































































