ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು 2025-26ನೇ ಸಾಲಿನ ವಿತ್ತೀಯ ವರ್ಷದ ಅರ್ಧ ವಾರ್ಷಿಕ ಅವಧಿ ದಿನಾಂಕ 30.09.2025ಕ್ಕೆ ರೂ.638 ಕೋಟಿ ಠೇವಣಿ, ರೂ.548 ಕೋಟಿ ಸಾಲ, ರೂ.1186 ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. 2024ನೇ ಸಪ್ಟೆಂಬರ್ 30ಕ್ಕೆ ಹೋಲಿಸುವಾಗ ಠೇವಣಾತಿಯಲ್ಲಿ ರೂ.90 ಕೋಟಿ, ಹೊರಬಾಕಿ ಸಾಲದಲ್ಲಿ ರೂ.66ಕೋಟಿ ಹೆಚ್ಚಳದೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.156 ಕೋಟಿ ವೃದ್ಧಿಯನ್ನು ದಾಖಲಿಸಿದೆ. 30.09.2025ಕ್ಕೆ ನಿವ್ವಳ ಲಾಭವು ರೂ.5.76 ಕೋಟಿ ದಾಖಲಿಸಿದ್ದು, ಇದು ಕಳೆದ ವರ್ಷಕ್ಕಿಂತ ರೂ.88 ಲಕ್ಷ ಹೆಚ್ಚಳವಾಗಿ 18% ವೃದ್ಧಿಯಾಗಿರುತ್ತದೆ. ಸ್ಥಾಪನೆಯಾದನಿಂದ ನಿರಂತರ ಡಿವಿಡೆಂಡನ್ನು ನೀಡುತ್ತಾ ಬಂದ ಸೊಸೈಟಿ, 2024-25ನೇ ಸಾಲಿಗೆ ಶೇ.25 ಡಿವಿಡೆಂಡನ್ನು ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಟ 25% ಡಿವಿಡೆಂಡನ್ನು ನೀಡುತ್ತಿದೆ.

ಸಂಘದ ನಿವ್ವಳ ಅನುತ್ಪಾದಕ ಆಸ್ತಿಯು ಕಳೆದ 18 ವರ್ಷಗಳಿಂದ ಶೂನ್ಯ ಪ್ರಮಾಣದಲ್ಲಿದ್ದು, ಸಾಲ ಮರುಪಾವತಿಯು ಉತ್ತಮವಾಗಿರುತ್ತದೆ. ಸಂಘದ ನಿರಂತರ ಪ್ರಗತಿಗೆ ಸಹಕರಿಸುತ್ತಿರುವ ಸಂಘದ ಎಲ್ಲಾ ಆಡಳಿತ ಮಂಡಳಿ ಸದಸ್ಯರುಗಳಿಗೆ, ಶಾಖಾ ಸಲಹಾ ಸಮಿತಿ ಅಧ್ಯಕ್ಷರುಗಳಿಗೆ ಹಾಗೂ ಸದಸ್ಯರುಗಳಿಗೆ, ಸಂಘದ ಸರ್ವ ಸದಸ್ಯ ಬಾಂಧವರಿಗೆ ಮತ್ತು ಹಿತೈಷಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಂಘದ ವತಿಯಿಂದ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.