ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ, ಬಹರೈನ್ ಇದರ ವತಿಯಿಂದ ನವೆಂಬರ್ 28ರಂದು ಬಹರೈನ್ ನ ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ – 2025ರ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಇದರ ಅಧ್ಯಕ್ಷ ಹರಿಪ್ರಸಾದ್ ರೈ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಎಚ್ ಇ ವಿನೋದ್ ಕೆ ಜೇಕಬ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ, ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉದ್ಯಮಿ ಮಹೇಶ್ ಹೆಗ್ಡೆ ಮೊಳಹಳ್ಳಿ, ಬಹರೈನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಉಪಾಧ್ಯಕ್ಷ ಮಹಮ್ಮದ್ ಅಬ್ದುಲ್ ಜಬ್ಬಾರ್ ಆಲ್ ಕೂಹೇಜಿ, ಜಿ ಬಾಬು ರಾಜನ್, ದಿ ಇಂಡಿಯನ್ ಕ್ಲಬ್ ಅಧ್ಯಕ್ಷ ಜೋಸೆಫ್ ಜ್ವಾಯಿ, ಬಹರೈನ್ ಕ್ರಿಕೆಟ್ ಫೆಡರೇಶನ್ ಸಮಿತಿಯ ಅಧ್ಯಕ್ಷ ಮಹಮ್ಮದ್ ಮಾನ್ಸೂರ್ ಕನ್ನಂಗಾರ್, ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ರಾಜ್ ಕುಮಾರ್ ಮತ್ತಿತರು ಉಪಸ್ಥಿತರಿದ್ದರು.













































































































