ದುಬೈನ ಶೇಖ್ ಝಯೀದ್ ರಸ್ತೆಯ ಮಿಲೇನಿಯಂ ಪ್ಲಾಝ ಹೋಟೆಲ್ ನ ಸಭಾಂಗಣದಲ್ಲಿ ಯುಎಇಯ ಒಂದು ಸಾವಿರದ ಐದು ನೂರಕ್ಕೂ ಅಧಿಕ ಬಂಟರು ಸೇರಿ ಯುಎಇ ಬಂಟ್ಸ್ ನ 48 ನೇ ವರ್ಷದ ಕೂಡುಕಟ್ಟ್ “ಭಾವೈಕ್ಯ” ಬಂಟರ ಸಮಾಗಮ ಅದ್ದೂರಿಯಾಗಿ ನಡೆಯಿತು. ಯುಎಇ ಬಂಟ್ಸ್ ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ, ಸಲಹಾ ಸಮಿತಿಯ ಸದಸ್ಯರ ಮತ್ತು 2025 ನೇ ಸಾಲಿನ ಸಂಘಟನಾ ಸಮಿತಿಯ ಸರ್ವ ಸದಸ್ಯರ ಕಳೆದ ನಾಲ್ಕು ತಿಂಗಳುಗಳ ಕಠಿಣ ಪರಿಶ್ರಮದ ಫಲವೇ ಅಷ್ಟೊಂದು ಸಂಖ್ಯೆಯ ಬಂಟರು ಸೇರಲು ಹಾಗೂ ಕಾರ್ಯಕ್ರಮದ ಯಶಸ್ವಿಗೆ ಕಾರಣವಾಯಿತು. ಬೆಳಿಗ್ಗೆ ಹತ್ತು ಗಂಟೆಗೆ 48ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ಪೋಷಕರಾದ ಸರ್ವೋತ್ತಮ ಶೆಟ್ಟಿ, ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಮತ್ತು ಸಂಘಟನಾ ಸಮಿತಿಯ ಮಹಿಳಾ ಸದಸ್ಯೆಯರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಲಹಾ ಸಮಿತಿಯ ಸದಸ್ಯರಾದ ರತ್ನಾಕರ ಶೆಟ್ಟಿ, ಸುಂದರ ಶೆಟ್ಟಿ, ದಿನೇಶ್ ಶೆಟ್ಟಿ ಕೊಟ್ಟಿಂಜ, ಸಜನ್ ಶೆಟ್ಟಿ, ಸುಜತ್ ಶೆಟ್ಟಿ ಉಪಸ್ಥಿತರಿದ್ದರು. ನಂತರ ಶ್ರೀಮತಿ ಸಂಗೀತಾ ಶೆಟ್ಟಿ ತಂಡದವರಿಂದ ಬಂಟ ಗೀತೆ ಮತ್ತು ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ಕಲಾವಿದರಿಂದ ಗಣಪತಿ ಸ್ತುತಿಯ ಯಕ್ಷಗಾನ ನೃತ್ಯದ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಂಡಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಯುಎಇ ಬಂಟ ಬಾಂಧವರಿಂದ ತುಳುನಾಡ ಮಣ್ಣ್ ದ ಮಹಿಮೆ, ಭಾರತದ ಸಂಸ್ಕೃತಿಯ ಪಯಣ, ಬಂಟೆರ್ನ ಐಸಿರ, ಕಿರುಚಿತ್ರ ಸ್ಪರ್ಧೆ ಇಂತಹ ಸ್ಪರ್ಧಾ ಕಾರ್ಯಕ್ರಮ ಒಂದಕ್ಕೊಂದು ಒಂದು ವಿಭಿನ್ನ ರೀತಿಯಲ್ಲಿ ಮೂಡಿ ಬಂದ ಕಾರಣ ಆರಂಭದಿಂದ ರಾತ್ರಿ ಒಂಬತ್ತು ಗಂಟೆಯ ತನಕ ಸಭಾಂಗಣ ತುಂಬಿ ತುಳುಕುತ್ತಿತ್ತು.

ವರ್ಷಂಪ್ರತಿ ಕೊಡಮಾಡುವ ಪ್ರತಿಷ್ಠಿತ “ಬಂಟ ವಿಭೂಷಣ” ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದ ಚೌಟರವರು ಮಾತನಾಡುತ್ತಾ, ಈ ಇಷ್ಟು ದೊಡ್ಡ ಪ್ರಶಸ್ತಿಗೆ ನಾನು ಅರ್ಹನಲ್ಲ. ಆದರೂ ಈ ಪ್ರಶಸ್ತಿಯನ್ನು ಪ್ರೀತಿ ಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದು ಹೇಳುತ್ತಾ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಂದು ಮಾದರಿ ಜಿಲ್ಲೆಯಾಗಿ ಮಾಡಬೇಕು ಮತ್ತು ಅಲ್ಲಿಯ ಯುವಕರಿಗೆ ಅಲ್ಲಿಯೇ ಕೆಲಸ ಸಿಗಬೇಕು ಎಂಬ ಕನಸು ಕಂಡವನು ನಾನು. ಅದಕ್ಕೆ ಇಲ್ಲಿರುವ ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆಯವರು ಅದಕ್ಕೆ ಸಾಥ್ ನೀಡಬೇಕು ಎಂದು ಹೇಳುತ್ತಾ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಾ ಕಾಯಕ್ರಮಕ್ಕೆ ಶುಭವನ್ನು ಹಾರೈಸಿದರು. ನಟ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ದಂಪತಿಗಳಿಗೆ “ಮಣ್ಣಿನ ಮಗ” ಮತ್ತು ನಟ ವಿವೇಕ್ ಒಬೆರಾಯ್ ರವರಿಗೆ “ತುಳುನಾಡ ಮರ್ಮಯೆ” ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ನಟರಾದ ರಿಷಬ್ ಶೆಟ್ಟಿ ಮಾತನಾಡುತ್ತಾ, ಕಾಂತಾರ ಚಾಪ್ಟರ್ ಒಂದು ಸಿನಿಮಾ ಬಿಡುಗಡೆ ಆದ ಮೇಲೆ ಯಾವ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಪ್ರವೀಣ್ ಅಣ್ಣ ನನ್ನ ಸ್ನೇಹಿತರಾಗಿರುವುದರಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ ಎಂದರು. ವಿವೇಕ್ ಒಬೆರಾಯ್ ರವರು ಮಾತನಾಡುತ್ತಾ, ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರೋದು ನನಗೆ ಹೆಮ್ಮೆ ಆಗುತ್ತದೆ. ಪ್ರವೀಣ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಇನ್ನೂ ಮುಂದೆಯೂ ಯುಎಇ ಬಂಟ್ಸ್ ನ ಕಾರ್ಯಕ್ರಮ ನಿರಂತರ ನಡೆಯುತ್ತಾ ಇರಲಿ ಎಂದು ಮೆಚ್ಚುಗೆಯ ಮಾತುಗಳನ್ನು ಹೇಳುತ್ತಾ ಕಾಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಯಶಸ್ವಿಗೆ ಸಾಥ್ ನೀಡಿದ ಎಲ್ಲಾ ಪ್ರಾಯೋಜಕರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ವೇದಿಕೆಯಲ್ಲಿ ಯುಎಇ ಬಂಟ್ಸ್ ನ ಮಹಾ ಪೋಷಕರಾದ ಡಾ. ಬಿ.ಆರ್ ಶೆಟ್ಟಿ, ಸರ್ವೋತ್ತಮ ಶೆಟ್ಟಿ, ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದ ಯಶಸ್ಸಿನ ಹಿಂದೆ ದುಡಿದ 2025 ನೇ ಸಾಲಿನ ಸಂಘಟನಾ ಸಮಿತಿಯ ಸದಸ್ಯರಾದ ದಿನ್ ರಾಜ್ ಶೆಟ್ಟಿ ಮತ್ತು ದೀಪ್ತಿ ದಿನ್ ರಾಜ್ ಶೆಟ್ಟಿ, ಅನೂಪ್ ಶೆಟ್ಟಿ ಮತ್ತು ಚೈತ್ರಾ ಅನೂಪ್ ಶೆಟ್ಟಿ, ಸುಪ್ರಜ್ ಶೆಟ್ಟಿ ಮತ್ತು ಪೃಥ್ವಿ ಸುಪ್ರಜ್ ಶೆಟ್ಟಿ, ವಸಂತ ಶೆಟ್ಟಿ ಮತ್ತು ರಜಿತಾ ವಸಂತ ಶೆಟ್ಟಿ, ಸೀತಾರಾಮ ಶೆಟ್ಟಿ ಮತ್ತು ಅಶ್ವಿನಿ ಸೀತಾರಾಮ ಶೆಟ್ಟಿ, ಗೋಕುಲದಾಸ್ ರೈ ಮತ್ತು ನಿಶ್ಮಿತಾ ಗೋಕುಲದಾಸ್ ರೈ, ಕೀರ್ತಿ ನಿತ್ಯ ಪ್ರಕಾಶ್ ಶೆಟ್ಟಿ, ಮೇಘ ಪ್ರಸನ್ನ ಶೆಟ್ಟಿ, ವಿದ್ಯಾಶ್ರಿ ಸತೀಶ್ ಹೆಗ್ಡೆ, ದೀಪಾ ಕಿರಣ್ ಶೆಟ್ಟಿ, ಲಾಸ್ಯ ಸಂಪತ್ ಶೆಟ್ಟಿ ಮತ್ತು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ಕೃತಜ್ಞತೆ ತಿಳಿಸಿದರು. ಸಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.
ವರದಿ : ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ದುಬೈ
















































































































