ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಬೆಳ್ತಂಗಡಿ ತಾಲೂಕು ನಾರಾವಿಯ ಬಡ ರೋಗಿಯ ಶಸ್ತ್ರಚಿಕಿತ್ಸೆಗೆ 25,000 ರೂಪಾಯಿ ಆರ್ಥಿಕ ನೆರವನ್ನು ಚೆಕ್ ಮುಖಾಂತರ ನೀಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಹಿರಿಯ ದಾನಿಗಳಾದ ತುಕಾರಾಮ ನಾಯಕ್, ಡಾ. ಭರತೇಶ್ ಆದಿರಾಜ್, ಮಾಜಿ ಸಹಾಯಕ ಗವರ್ನರ್ ಗಳಾದ ಹರಿಪ್ರಕಾಶ್ ಶೆಟ್ಟಿ, ಪ್ರಕಾಶ್ ಆಚಾರ್ಯ, ಶೈಲೇಂದ್ರ ರಾವ್ ಹಾಗೂ ರೋಟರಿಯ ಸದಸ್ಯರು ಉಪಸ್ಥಿತರಿದ್ದರು.


















































































































