ಗಣಿತನಗರ: ಬದುಕಿಗೆ ಆಸೆಗಳೇ ಇಂಧನ. ನಮ್ಮ ಸಾಮಥ್ರ್ಯದ ಅರಿವು ನಮಗಿರ ಬೇಕು. ನಮ್ಮ ಗೌರವದ ಸ್ಥಾನಮಾನಗಳು ಸಾವಿರ ಮಂದಿಗೆ ಕನಸಿನ ತಾಣವಾಗಿರುವಂತೆ ಬೆಳೆಯಬೇಕು. ಅತಿಯಾಸೆ ಇರುವವನು ಬಡವ, ಮಹತ್ತರವಾದ ಕನಸುಗಳನ್ನು ಕಾಣುವವನು ಶ್ರೀಮಂತ ಎಂದು ಮೈಸೂರಿನ ಸುತ್ತೂರು ಜೆ.ಎಸ್.ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ, ಲೇಖಕರು ಮತ್ತು ವಾಗ್ಮಿಯಾಗಿರುವ ಶ್ರೀ ಜಿ.ಎಲ್ ತ್ರಿಪುರಾಂತಕ ನುಡಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-43ರಲ್ಲಿ ‘ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಬೆಲೆಬಾಳುವ ಒಂದು ವಜ್ರ ದಕ್ಕಿದ ಮೇಲೆ ಎಷ್ಟಾದರೂ ಕಲ್ಲುಗಳನ್ನು ಕಲೆಹಾಕಬಹುದು. ಹೆತ್ತವರು ನಮ್ಮ ಆಸೆಗಳನ್ನು ಈಡೇರಿಸಬಹುದು. ಆದರೆ ನಮ್ಮ ಕನಸುಗಳನ್ನು ನನಸು ಮಾಡುವ ಹೊಣೆ ನಮ್ಮದೇ ಎಂದರು. ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಶ್ರೀ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ ಉಪಸ್ಥಿತರಿದ್ದರು. ಉಪನ್ಯಾಸಕಿ ಕು.ಸಹನಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

















































































































