
ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ದ.ಕ ಜಿಲ್ಲಾ ಘಟಕ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದ ವತಿಯಿಂದ ಲೇಡಿಗೋಶನ್ ಅಸ್ಪತೆಯಲ್ಲಿ ಇತ್ತೀಚಿಗೆ ರಕ್ತದಾನ ಶಿಬಿರ ನಡೆಯಿತು. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಶಿಬಿರವನ್ನು ಉದ್ಘಾಟಿಸಿದರು. ಲೇಡಿಗೋಶನ್ ಅಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿಬಿ ಹರೀಶ್ ರೈ, ರೆಡ್ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕ ಗುರುದತ್ ಕಾಮತ್, ಲೇಡಿಗೋಶನ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಜಗದೀಶ್, ಕೆಎಂಸಿ ಅಸ್ಪತ್ರೆಯ ಡಾ. ಅನುಪಮ ಸುರೇಶ್ ಮುಖ್ಯ ಅತಿಥಿಗಳಾಗಿದ್ದರು.






















































































































