
ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ವತಿಯಿಂದ ಮೂಲ್ಕಿ ಮೂಡುಬಿದಿರೆ ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ವರ್ಧೆ ಏಪ್ರಿಲ್ 26ರಂದು ಬೆಳಿಗ್ಗೆ 11 ಗಂಟೆಗೆ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್, ಚರ್ಚ್ ಬಳಿ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ಅಧ್ಯಕ್ಷ ಡಾ| ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ಹೇಳಿದರು. ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಗ್ಗಜಗ್ಗಾಟ ಸ್ವರ್ಧೆಯಲ್ಲಿ ಜಯ ಗಳಿಸಿದವರಿಗೆ ಮೊದಲನೇ ಬಹುಮಾನ 30,000 ಮತ್ತು ಟ್ರೋಫಿ, ಎರಡನೇ ಬಹುಮಾನ 20,000 ಮತ್ತು ಟ್ರೋಫಿ, ಮೂರನೇ ಬಹುಮಾನ 10,000 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ 5,000 ರೂ ನಗದು ಮತ್ತು ಟ್ರೋಫಿ ನೀಡಲಾಗುವುದು. ನೋಂದಣಿಗೆ ಏಪ್ರಿಲ್ 23 ಕೊನೆಯ ದಿನವಾಗಿದೆ. ಪಂದ್ಯಾಟದಲ್ಲಿ 30 ಪುರುಷ 20 ಮಹಿಳಾ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.


ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಳೆದ 16 ವರ್ಷಗಳಿಂದ ಅನೇಕ ಸಾಮಾಜಿಕ, ಶಿಕ್ಷಣಕ್ಕೆ ಸಹಾಯ ಹಸ್ತ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು. ಪ್ರತಿಕಾಗೋಷ್ಠಿಯಲ್ಲಿ ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸಂಚಾಲಕ ನರಸಿಂಹ ಮಡಿವಾಳ, ಶರತ್ ಶೆಟ್ಟಿ ಸಂಕಲಕರಿಯ, ನರೇಂದ್ರ ಕೆರೆಕಾಡು ಮತ್ತಿತರರು ಉಪಸ್ಥಿತರಿದ್ದರು.

























































































































