Author: admin
ಶ್ರೀ ಕ್ಷೇತ್ರ ಕಾತ್ರಾಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿ, ಶಿವ ದೇವರ ಹಾಗೂ ಪರಿವಾರ ದೇವರುಗಳ ವಾರ್ಷಿಕ ಉತ್ಸವ, ಮಹಾಪೂಜೆಯು ಸ್ವಸ್ತಿ ಶ್ರೀ ವಿಶ್ವಾವಸುನಾಮ ಸಂವತ್ಸರ ಧನುರ್ಮಾಸ 28, ಜನವರಿ 12 ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ರಾಘವೇಂದ್ರ ಭಟ್ ರವರ ಸಹಕಾರದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ವಾರ್ಷಿಕೋತ್ಸವದ ಅಂಗವಾಗಿ ಜನವರಿ 11ರಂದು ರವಿವಾರದಂದು ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದ ಶುದ್ಧಿ ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶಪೂಜೆ, ವಾಸ್ತು ಬಲಿ, ದುರ್ಗಾ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಜನವರಿ 12 ಸೋಮವಾರದಂದು ಬೆಳಿಗ್ಗೆ ಮತ್ತು ಮದ್ಯಾಹ್ನದವರೆಗೆ ಮಹಾಗಣಪತಿ ಹೋಮ, ಕಲಶ ಪೂಜೆ, ನವಗ್ರಹ ಪೂಜೆ, ಅಶ್ಲೇಷಾ ಬಲಿ, ನಾಗದೇವರಿಗೆ ಅಭಿಷೇಕ, ತಂಬಿಲ, ಶ್ರೀ ದುರ್ಗಾ ದೇವಿಗೆ ಕಲಶ ಪೂಜೆ, ದುರ್ಗಾ ಪೂಜೆ, ಶಿವ ರುದ್ರಾಭಿಷೇಕ, ಶಿವಪೂಜೆ ನಡೆಯಿತು.…
ಈ ಸೀಸನ್ ನಲ್ಲಿ ಸ್ಪರ್ಧಿಗಳಿಂದ ಅತೀ ಹೆಚ್ಚು ಅನ್ಯಾಯ ಮತ್ತು ನೋವು ಅನುಭವಿಸಿರುವ ಸ್ಪರ್ದಿ ಎಂದರೆ ಅದು ಪಾಪದ ಹುಡುಗಿ ರಕ್ಷಿತಾ ಶೆಟ್ಟಿ. ಗಿಲ್ಲಿ ಗೆದ್ದರೆ ಅಶ್ವಿನಿ ಅಭಿಮಾನಿಗಳಿಗೆ ನಿರಾಸೆ, ಅಶ್ವಿನಿ ಗೆದ್ದರೆ ಗಿಲ್ಲಿ ಅಭಿಮಾನಿಗಳ ಆಕ್ರೋಶ. ಇದ್ಯಾವುದು ಬೇಡ ವಯಸ್ಸು ಚಿಕ್ಕದಾದರೂ, ಬೌದ್ಧಿಕವಾಗಿ ಮನೆಯಲ್ಲಿ ಎಲ್ಲರಿಗಿಂತ ದೊಡ್ಡವಳೆಂದು, ಚಿಕ್ಕ ವಯಸ್ಸಿನಲ್ಲೇ ಅಲ್ಪ ಆದಾಯದಲ್ಲೇ ಸಮಾಜಸೇವೆ ಮಾಡುತ್ತಿರುವ ಪ್ರಭುದ್ದೆ ರಕ್ಷಿತಾಳನ್ನು ಗೆಲ್ಲಿಸಿದರೆ ಇದು ಬಿಗ್ ಬಾಸ್ ತೆಗೆದುಕೊಳ್ಳಬಹುದಾದ ದಿ ಬೆಸ್ಟ್ ಡಿಸಿಷನ್ ಎಂಬುದು ಬಿಗ್ ಬಾಸ್ ಅನ್ನು ಸೂಕ್ಷ್ಮವಾಗಿ ಗಮನಿಸುವವರ ಅಭಿಪ್ರಾಯ. ಗಿಲ್ಲಿ ಬೇರೆ ಈಗಾಗಲೇ ರಕ್ಷಿತಾಳನ್ನು ಅವರ ವಂಶದ ಕುಡಿ ಎಂದು ಹೇಳಿಕೊಂಡಿದ್ದಾರೆ. ಅಶ್ವಿನಿ ರಕ್ಷಿತಾಳನ್ನು ಟಾರ್ಗೆಟ್ ಮಾಡಿ ಮಾಡಿ ಆ ಹುಡುಗಿಗೆ ಅನ್ನಬಾರದ್ದೆಲ್ಲಾ ಹೇಳಿ ಕ್ಷಮಿಸು ಎಂದು ಮೂರ್ನಾಲ್ಕು ಬಾರಿ ಕೇಳಿದ್ದು ಆಗಿದೆ. ಈಗಿದ್ದಾಗ ಮತ್ತು ಸದ್ಯದ ಅಂಕಿ ಅಂಶಗಳು ಅಂದಾಜಿನ ಪ್ರಕಾರ ರಕ್ಷಿತಾ ವೋಟಿಂಗ್ ನಲ್ಲಿ 2 ನೇ ಸ್ಥಾನದಲ್ಲಿ ಇದ್ದಾರೆ ಮತ್ತು ರಕ್ಷಿತಾಗೆ GEN Z…
ಫೆಬ್ರವರಿ ೭ ಮತ್ತು ೮ ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಜನವರಿ ೧೩ರಂದು ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯರು ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು. ಅರ್ಚಕ ನಾರಾಯಣ ಬಡೆಕಿಲ್ಲಾಯರವರು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈಯವರು ಮಾತನಾಡಿ, ಜಾತ್ರೋತ್ಸವವನ್ನು ಅದ್ದೂರಿಯಾಗಿ ನಡೆಸಬೇಕು. ಊರ ಭಕ್ತಾಭಿಮಾನಿಗಳು ಎಲ್ಲರೂ ಒಗ್ಗೂಡಿ ಕೆಲಸವನ್ನು ಮಾಡಬೇಕು. ಜಾತ್ರೋತ್ಸವಕ್ಕೆ ಹೆಚ್ಚು ಪ್ರಚಾರವನ್ನು ಮಾಡಬೇಕು. ಪ್ರತೀ ಮನೆ ಮನೆಗೆ ಜಾತ್ರೋತ್ಸವದ ಆಮಂತ್ರಣ ತಲುಪಿಸಬೇಕು. ಕುದ್ಮಾರು, ಸವಣೂರು, ಪಾಲ್ತಾಡಿ, ಪುಣ್ಚಪ್ಪಾಡಿ ವ್ಯಾಪ್ತಿಯ ಜನರು ಹೆಚ್ಚು ಭಾಗವಹಿಸಬೇಕು. ಅಲ್ಲಲ್ಲಿ ಜಾತ್ರೋತ್ಸವಕ್ಕೆ ಬ್ಯಾನರ್ ಹಾಕಬೇಕು. ಇದಕ್ಕೆ ಪೂರ್ಣ ಸಹಕಾರವನ್ನು ಕೊಡುತ್ತೇನೆ ಎಂದು ಹೇಳಿ, ಸವಣೂರು ಜಾತ್ರೋತ್ಸವ ಊರಿನ ಹಬ್ಬವಾಗಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಸಂಧ್ಯಾ ವಿ ಶೆಟ್ಟಿ ಸವಣೂರುಗುತ್ತು, ಬೆಳಿಯಪ್ಪ ಗೌಡ ಚೌಕಿಮಠ, ಶ್ರೀಧರ್ ಸುಣ್ಣಾಜೆ, ಗಂಗಾಧರ್…
ಕಾರ್ಕಳ ಚೇತನ ವಿಶೇಷ ಶಾಲೆಗೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಆಹಾರ ಸಾಮಗ್ರಿ ಹಾಗೂ ಧನಸಹಾಯವನ್ನು ನೀಡುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಶಿಕ್ಷಕಿಯರ ತ್ಯಾಗ ಮತ್ತು ವಾತ್ಸಲ್ಯಮಯ ಸೇವೆ, ಆಡಳಿತ ಮಂಡಳಿಯ ಸೇವಾ ಮನೋಭಾವನೆ ಅಭಿನಂದನೀಯ ಎಂದರು. ಕಾರ್ಯಕ್ರಮದ ಪ್ರಾಯೋಜಕರು, ದಾನಿಗಳೂ ಆದ ಜಗದೀಶ್ ಟಿ. ಯವರು ರೂ. 21,000 ಮೌಲ್ಯದ ಅಕ್ಕಿ ಹಾಗೂ 30,000 ರೂ. ಮೊತ್ತದ ಚೆಕ್ ಅನ್ನು ಸಂಸ್ಥೆಗೆ ಹಸ್ತಾಂತರಿಸಿದರು. ಸಂಸ್ಥೆಯ ಗೌರವಾಧ್ಯಕ್ಷ ಗಣಪತಿ ಹೆಗ್ಡೆ, ರೋಟರಿ ಸದಸ್ಯರಾದ ಸುರೇಶ ನಾಯಕ್, ಹರಿಶ್ಚಂದ್ರ ಹೆಗ್ಡೆ, ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕಾರ್ಯದರ್ಶಿ ಚೇತನ್ ನಾಯಕ್ ಉಪಸ್ಥಿತರಿದ್ದರು. ಶಾಲಾ ಸಂಚಾಲಕ ರಘುನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕಿ ಮಂಜುಳಾ ಸ್ವಾಗತಿಸಿ ವಂದಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಧಿಕಾರಿಗಳು ಸ್ಪಷ್ಟಿಕರಣ ನೀಡಿದ್ದಾರೆ. ಜನವರಿ 12 ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಪ್ರಧಾನ ಕಛೇರಿಯಲ್ಲಿ ಪದಾಧಿಕಾರಿಗಳ ಸಭೆ ಜರಗಿಸಲಾಯಿತು. ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿರುವುದರ ಬಗ್ಗೆ ಖಂಡಿಸಲಾಯಿತು. ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಂಸ್ಥೆಯು ಜಗತ್ತಿನ ಎಲ್ಲಾ ಬಂಟರ ಸಂಘಗಳ ಒಕ್ಕೂಟವಾಗಿದ್ದು, ಈ ಹಿಂದಿನಿಂದಲೂ ಸಮಾಜಕ್ಕೆ ಸಮುದಾಯಕ್ಕೆ ಸಹಾಯವಾಗುವಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದ್ದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ಆರೋಗ್ಯಕ್ಕೆ ಸಹಾಯಹಸ್ತ, ವಿದ್ಯಾಭ್ಯಾಸಕ್ಕೆ ಸಹಾಯ, ಮದುವೆ ಶುಭ ಕಾರ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತಾ ಸಮುದಾಯದ ಮೆಚ್ಚುಗೆಯನ್ನು ಪಡೆದಿರುತ್ತದೆ.…
ಶಿಸ್ತು, ನಾಯಕತ್ವ ಗುಣಗಳನ್ನು ಬೆಳೆಸಿ ಒತ್ತಡ ನಿವಾರಣೆ ಮಾಡಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುವಲ್ಲಿ ಕ್ರೀಡೆಗಳ ಪಾತ್ರ ದೊಡ್ಡದು. ನಮ್ಮ ನೆಚ್ಚಿನ ಕ್ರೀಡೆಯಲ್ಲಿ ತೊಡಗಿಸಿಕೊಂಡಂತೆ ಕ್ರೀಡೆ ನಮ್ಮ ಮಾನಸಿಕ ಆರೋಗ್ಯಕ್ಕೆ ಕೂಡಾ ಅತ್ಯವಶ್ಯಕವಾಗಿದೆ. ಕ್ರೀಡೆ ಜೀವನದಲ್ಲಿ ಯಶಸ್ವಿಯಾಗಲು ಬೇಕಾದ ವಿಶ್ವಾಸ ಮತ್ತು ಕೌಶಲ್ಯಗಳನ್ನು ನೀಡುವ ಚಟುವಟಿಕೆಯಾಗಿದೆ. ಪಾಲಕರು ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಅತ್ಯವಶ್ಯಕ. ಯುವ ಅಥ್ಲೆಟಿಕ್ಸ್ ಗಳಿಗೆ ಖೇಲೋ ಇಂಡಿಯಾ ಮೂಲಕ ಹಲವಾರು ಸವಲತ್ತು ಸಿಗುತ್ತಿವೆ. ಇದರ ಸದುಪಯೋಗ ಪಡೆಯುವಲ್ಲಿ ನಮ್ಮ ಸಮಾಜದವರು ಪ್ರಯತ್ನಿಸಬೇಕು. ಬಂಟರು ಸಂಘಟನೆ, ಉದ್ಯಮ, ಕೈಗಾರಿಕಾ, ವಿದ್ಯಾ ಕ್ಷೇತ್ರ ಮತ್ತು ಹಲವಾರು ಕ್ಷೇತ್ರದಲ್ಲಿ ಮಾಡಿದ ಸಾಧನೆ ಬಹಳ ದೊಡ್ಡದು. ಅದೇ ರೀತಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮವರ ಸಾಧನೆ ದೊಡ್ಡ ಮಟ್ಟದಲ್ಲಿ ಮೂಡಿ ಬರಬೇಕು. ನಮ್ಮ ಸಮಾಜದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು. ನಮಗೆ ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಮೀಟ್ ಹೋದಾಗ ಸಿಗುವ ಆತಿಥ್ಯ ಇಲ್ಲಿ ಪುಣೆ ಬಂಟರ ಸಂಘದಿಂದ ಕೂಡಾ ಸಿಕ್ಕಿದೆ. ಪುಣೆಗೆ ಬಂದು…
ಮುಂಬೈಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಹಲವಾರು ಸಹಯೋಗವನ್ನು ಸಮಾಜಕ್ಕೆ ನೀಡಿದೆ. ಅದರೊಂದಿಗೆ ಸಂಸ್ಥೆಯ ಮಹಿಳಾ ವಿಭಾಗವು ಕೂಡಾ ಮಹಿಳೆಯರಿಗಾಗಿ, ಮಕ್ಕಳಿಗಾಗಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ನಿರಂತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಾಂತ ನಾರಾಯಣ ಶೆಟ್ಟಿಯವರು ಚುಕ್ಕಾಣಿಯನ್ನು ಹಿಡಿದ ನಂತರ ಸಂಸ್ಥೆಯ ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಮಾರ್ಗದರ್ಶನದಲ್ಲಿ ವಿಭಾಗದ ಎಲ್ಲಾ ಸದಸ್ಯೆಯರ ಸಂಪೂರ್ಣ ಸಹಕಾರ, ಸಹಯೋಗದೊಂದಿಗೆ ಪಾದರಸದಂತೆ ಹುರುಪಿನ ಚಟುವಟಿಕೆಯಲ್ಲಿ ಕಾರ್ಯ ನಿರತವಾಗಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ಸಾಕ್ಷಿಯಾಗಿ ಇದೇ ಬರುವ ಜನವರಿ 18 ರಂದು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ಸಂಸ್ಥೆಯ ಮುಖ್ಯ ಸಭಾಗೃಹದಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದ್ದು, ತನ್ಮಧ್ಯೆ ಪ್ರಥಮ ಸಂಸ್ಥೆಯ ಮಹಿಳಾ ವಿಭಾಗದ ವತಿಯಿಂದ ಭಜನೆ, ತದ ನಂತರ ಶ್ರೀ…
ಇಂದಿನ ಪರಿಸರದಲ್ಲಿನ ಬದಲಾವಣೆ, ಅಹಾರ ವಸ್ತುಗಳು ಮತ್ತು ಕಲುಶಿತ ವಾತಾವರಣದಿಂದ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಯಾವಾಗ ಬೇಕಾದರೂ ಆಗಬಹುದು. ಪ್ರತಿಯೊಬ್ಬರೂ ಆರೋಗ್ಯವಂತ ಬದುಕನ್ನು ಬಯಸುತ್ತಾರೆ. ಆದರೆ ಇಂದಿನ ಬ್ಯುಸಿ ಜೀವನದಲ್ಲಿ ಆರೋಗ್ಯದ ಕಡೆ ಗಮನ ಕೊಡಲು ಸಮಯವೇ ಸಿಗದ ಪರಿಸ್ಥಿತಿಯಲ್ಲಿ, ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾದಾಗ ಆರೋಗ್ಯದಲ್ಲಿ ಬದಲಾವಣೆ ಕೂಡಾ ಆಗುತ್ತದೆ. ಇಂತಹ ಸಮಯದಲ್ಲಿ ಅಸಡ್ಡೆ ಮಾಡದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಅರೋಗ್ಯ ಇದ್ದರೇ ಜೀವನ ಸುಂದರವಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ನಿಯಮವನ್ನು ಪಾಲಿಸಬೇಕು. ನಮ್ಮ ಬಂಟ್ಸ್ ಅಸೋಸಿಯೇಷನ್ ಈ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಿದೆ. ಆರೋಗ್ಯವೇ ಭಾಗ್ಯ ಎಂಬ ಕಾಳಜಿ ನಿಮ್ಮಲ್ಲಿರಲಿ ಎಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ನುಡಿದರು. ಪುಣೆ ಬಂಟ್ಸ್ ಅಸೋಸಿಯೇಷನ್ ನ ಸಮಾಜ ಕಲ್ಯಾಣ ಸೇವಾ ಕಾರ್ಯದಂಗವಾಗಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ಸಮಾಜ ಬಾಂಧವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಅರೋಗ್ಯ…
ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಧನಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬರೂ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಅವುಗಳನ್ನು ನನಸಾಗಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಚರಿತ್ರೆಯಲ್ಲಿ ನೂರಕ್ಕೆ ನೂರು ಶೇಖಡಾ ಸಾಧನೆಗಳು ಸಾಧ್ಯವಾದದ್ದು ಪ್ರೇರಣೆ ಹಾಗೂ ಪ್ರೋತ್ಸಾಹದಿಂದ ಎಂದು ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಹೇಳಿದರು. ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಜ. 12 ರಂದು ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ಹದಿಹರೆಯದವರ ಮನಸ್ಸುಗಳ ಸಬಲೀಕರಣ” (ಎಂಪವರಿಂಗ್ ಯಂಗ್ ಮೈಂಡ್ಸ್) ಎಂಬ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು. ಆಧುನಿಕ ಜೀವನದ ಸವಾಲುಗಳನ್ನು ಎದುರಿಸಲು ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ. ಇಂತಹ ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳ ಮಾನಸಿಕ…
ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್ ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ಮಾಪಕ ಲಂಚುಲಾಲ್ ಕೆ.ಎಸ್., ಜನವರಿ 23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಬೇರೆ ಭಾಷೆಗಳ ಸಿನಿಮಾಗಳಿಗಿಂತ ತುಳು ಚಿತ್ರವೂ ಯಾವುದಕ್ಕೂ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಚಿತ್ರವನ್ನು ಭರ್ಜರಿಯಾಗಿ ನಿರ್ಮಿಸಿದ್ದೇವೆ. ತುಳು ಚಿತ್ರರಂಗಕ್ಕೆ ಕಟ್ಟೆಮಾರ್ ನಮ್ಮ ವಿಶೇಷ ಕೊಡುಗೆ. ಎಲ್ಲರೂ ಈ ಹೊಸ ಪ್ರಯತ್ನಕ್ಕೆ ಬೆಂಬಲ ನೀಡಬೇಕು. ನಿಮ್ಮ ಬೆಂಬಲ ದೊರೆತರೆ ತುಳು ಸಿನಿ ಇಂಡಸ್ಟ್ರಿಗೆ ಇನ್ನೂ ಹಲವು ಹೊಸ ಸಾಹಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ನಟ ರೂಪೇಶ್ ಶೆಟ್ಟಿ ಮಾತನಾಡಿ, ಈ ಚಿತ್ರಕ್ಕೆ ರಿವ್ಯೂ ಕೊಡುವ ಅವಶ್ಯಕತೆಯೇ ಇಲ್ಲ. ಟ್ರೇಲರ್ ಪ್ರದರ್ಶನದ ವೇಳೆ ಕೇಳಿಬಂದ ಪ್ರೇಕ್ಷಕರ ಚಪ್ಪಾಳೆ, ಶಿಳ್ಳೆಗಳೇ ಇದರ ಮಟ್ಟವನ್ನು ತೋರಿಸಿವೆ ಎಂದರು.…















