Author: admin
ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗವು ಮಾರ್ಚ್ 7 ರಂದು ಶನಿವಾರ ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾರ್ಗದರ್ಶನ, ಮಹಿಳಾ ವಿಭಾಗದ ಅಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ ಮುಂದಾಳತ್ವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಶ್ವ ಮಹಿಳಾ ದಿನಾಚರಣೆ ಅದ್ದೂರಿಯಾಗಿ ಸಂಭ್ರಮಿಸಿತು. ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಸಲಾದ ಸಮಾರಂಭದಲ್ಲಿ ಭಾರತ್ ಕಾಲೇಜ್ ಆಫ್ ಇಂಜಿನಿಯರಿಂಗ್ (ಬದ್ಲಾಪುರ) ಇದರ ಸ್ಥಾಪಕ ಟ್ರಸ್ಟಿ ಪ್ರೊ| ಶುಭಲಕ್ಷ್ಮೀ ಸುದರ್ಶನ್ ಹೆಗ್ಡೆ, ಪಾನ್ಬಾಯ್ ಇಂಟರ್ನ್ಯಾಶನಲ್ ಸ್ಕೂಲ್ (ಸಾಂತಾಕ್ರೂಜ್) ಇದರ ಆಡಳಿತ ಟ್ರಸ್ಟಿ ಮೋಹಿನಿ ಪಿ ಶೆಟ್ಟಿ ಅತಿಥಿ ಅಭ್ಯಾಗತರುಗಳಾಗಿದ್ದರು. ೨೦೨೬ನೇ ಸಾಲಿನ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಪ್ರಶಸ್ತಿಯನ್ನು ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್ ಶೆಟ್ಟಿ ಅವರಿಗೆ (ಪತಿ ಸುಧಾಕರ್ ಶೆಟ್ಟಿ ಅವರನ್ನೊಳಗೊಂಡು) ಪ್ರದಾನಿಸಿ ಅಭಿನಂದಿಸಲಾಯಿತು. ಬಂಟರ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್ನ ಮಹಿಳಾ ಸಿಬ್ಬಂದಿಗಳಿಗಾಗಿ ‘ಖೇಲ್ ಕೂದ್ ಮಹೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ ಮಧ್ಯಾಹ್ನ ಶಿಕ್ಷಕ ಹಾಗೂ ಶಿಕ್ಷಕೇತರ ಮಹಿಳಾ ಸಿಬ್ಬಂದಿಗಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಅದರ ಸಮಾರೋಪವಾಗಿ ಈ ಖೇಲ್ ಕೂದ್ ಮಹೋತ್ಸವವನ್ನು ಆಚರಿಸಲಾಯಿತು. ನೋವೊ ಟ್ರೀ ಮೈಂಡ್ಸ್ ಸಂಸ್ಥೆಯ ಸಹನಾ ನಾಗರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಮಹಿಳೆಯರು ಪರಸ್ಪರ ಒಬ್ಬರನ್ನೊಬ್ಬರು ಬೆಂಬಲಿಸಿ ಕಾರ್ಯ ನಿರ್ವಹಿಸಿದರೆ ನಿಜವಾದ ಸಬಲೀಕರಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮವನ್ನು ಕಬಡ್ಡಿ ವಿಶ್ವಕಪ್ನ ಚಿನ್ನದ ಪದಕ ವಿಜೇತೆ ಹಾಗೂ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಧನಲಕ್ಷ್ಮಿ ಉದ್ಘಾಟಿಸಿದರು. ಸಕ್ಷಮಾ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಸಕ್ಷಮಾ ಸಂಚಾಲಕಿ ಡಾ. ಗ್ರೀಷ್ಮಾ ಆಳ್ವ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ತಂಡದ ಪರಿಶ್ರಮವನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರಿಗಾಗಿ ಇನ್ನಷ್ಟು ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಾರ್ಯಕ್ರಮಗಳನ್ನು…
ಗೆಳೆಯರೊಬ್ಬರು ತನ್ನ ಹೊಸ ಮನೆಯ ಗೋಡೆಗೇರಿಸಲು ಎ.ಐ ಗೆ ತನ್ನ ಮಡದಿಯ ಬಣ್ಣದ ಫೋಟೋ ಒಂದನ್ನು ಕೊಟ್ಟು ಅದನ್ನೇ ಹಳೆಯ ಕಪ್ಪು ಬಿಳುಪು ಕಲಾತ್ಮಕ ಚಿತ್ರವನ್ನಾಗಿ ಬದಲಾಯಿಸಲು ಸೂಚನೆ ಕೊಟ್ಟರು. ಕ್ಷಣಾರ್ಧದಲ್ಲಿ ಕೃತಕ ಬುದ್ಧಿಮತ್ತೆ ಅದ್ಭುತ ಚಿತ್ರವೊಂದನ್ನು ರೂಪಿಸಿತು. ಚಿತ್ರ ನೋಡಿದ ಯಾರೇ ಆಗಲಿ ಬೆರಗಾಗುವುದು ಸಹಜ. ಬೆಳಕು, ನೆರಳು, ಮುಖಭಾವ ಎಲ್ಲವೂ ನಿಖರ. ಆದರೆ ಸೂಕ್ಷ್ಮವಾಗಿ ನೋಡಿದಾಗ ಒಂದು ವಿಚಿತ್ರ ಬದಲಾವಣೆ ಇತ್ತು. ಅವರ ಕುತ್ತಿಗೆಯಲ್ಲಿದ್ದ ಎರಡು ಸರಗಳ ಪೈಕಿ ಕರಿಮಣಿಯೊಂದನ್ನು ಕಳಚಿ ಆ ಜಾಗದಲ್ಲಿ ಮತ್ತೊಂದು ಹೊಸ ವಜ್ರದ ನೆಕ್ಲೆಸ್ ಸೇರಿಕೊಂಡಿತ್ತು. ಯಾರೂ ಕೇಳದೇ, ಯಾರೂ ಹೇಳದೇ ಕೃ.ಬು ತನ್ನ ಕಲ್ಪನೆಯಿಂದ ಸೇರಿಸಿದ ಆಭರಣವದು. ಆ ಹೊಸ ಸರ ಯಾವುದು? ಎಲ್ಲಿಂದ ಬಂತು? ಚಲನಚಿತ್ರ ಪ್ರಿಯೆ ಅವರ ಮಡದಿ ಗಮನವಿಟ್ಟು ನೋಡಿದಾಗ ಗೊತ್ತಾದ ಸತ್ಯ, ಅದು ಈ ದೇಶದ ಪ್ರಮುಖ ಹಿಂದಿ ನಟಿಯೊಬ್ಬಳ ಕುತ್ತಿಗೆಯಲ್ಲಿದ್ದ ವಜ್ರದ ಸರ. ಎ.ಐ ತನ್ನ ಡೇಟಾ ಸಂಗ್ರಹದೊಳಗೆ ಇದ್ದ ಲಕ್ಷಾಂತರ ಚಿತ್ರಗಳೊಳಗಿಂದ ಗೆಳೆಯನ…
ಕಳೆದ 33 ವರ್ಷಗಳಿಂದ ಮುಂಬಯಿಯಲ್ಲಿ ವೈವಿಧ್ಯಮಯ ಕಲಾ ಕಾರ್ಯಕ್ರಮಗಳ ಮೂಲಕ ಹೆಸರಾಗಿರುವ ಕಲಾ ಸೌರಭ ಸಂಸ್ಥೆ ಹಿರಿಯ ಸಂಗೀತ ನಿರ್ದೇಶಕ ಮತ್ತು ಗಾಯಕ ಪದ್ಮನಾಭ ಸಸಿಹಿತ್ಲು ಅವರ ಸಾರಥ್ಯದಲ್ಲಿ ಪ್ರಸಕ್ತ ವರ್ಷ ‘ಸಂಸ್ಕಾರ -26’ ಸರಣಿಯನ್ನು ನಡೆಸುತ್ತಿದೆ. ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಆರಂಭಗೊಂಡ ಸರಣಿಯ ಮೂರನೇ ಕಾರ್ಯಕ್ರಮವಾಗಿ ಸಸಿಹಿತ್ಲು ಭಗವತಿಗೆ ವಿಶಿಷ್ಟ ಸ್ವರ ಸಂಗೀತಾಭಿಷೇಕದ ಮೂಲಕ ಕಲಾ ಸಂಸ್ಕಾರಕ್ಕೆ ಧಾರ್ಮಿಕ ಸ್ಪರ್ಶ ನೀಡಿದೆ ಎಂದು ಕರ್ನಾಟಕ ಯಕ್ಷಗಾನ, ಜಾನಪದ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಸಾಹಿತಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕಲಾ ಸೌರಭ ಮುಂಬಯಿ ಆಶ್ರಯದಲ್ಲಿ ಜರಗಿದ ‘ಶ್ರೀ ಭಗವತೀ ಅಮ್ಮ ಸ್ವರ ಸಂಗೀತಾಭಿಷೇಕ’ ಎಂಬ ಭಕ್ತಿ, ಭಾವ ಜಾನಪದ, ಯಕ್ಷಗಾಯನ ಹಾಗೂ ನೃತ್ಯ ರಂಜನೆಯ ಜುಗಲ್ಬಂದಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶಯ ಭಾಷಣ ಮಾಡಿದರು. ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಅಧ್ಯಕ್ಷ ಹಾಗೂ…
ಬೆಂಗಳೂರಿನ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ “ವೀರವನಿತೆ – 2026” ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್ ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ಚಲನಚಿತ್ರ ನಟಿ ತಾರ ಅನುರಾದ ಪ್ರಶಸ್ತಿ ಪ್ರದಾನ ಮಾಡಿದರು. ವೀಣಾ ಶೆಟ್ಟಿ ಅವರು ಸುಮಾರು ಮೂವತ್ತು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹೀಗೆ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಚಿತ್ರಸಂತೆ ಸಂಸ್ಥೆಯ ಪ್ರಮುಖರಾದ ಅರುಣ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿಪರ ಚಿಂತನೆಯೊಂದಿಗೆ ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಸಂಸ್ಥೆಯನ್ನು ಸ್ಥಾಪಿಸಿ ಇಷ್ಟರವರೆಗೆ ನಡೆಸಿಕೊಂಡು ಬಂದವರೆಲ್ಲರೂ ಸದಾ ಪ್ರಾತಃ ಸ್ಮರಣೀಯರು. ಇತ್ತೀಚೆಗೆ ನಡೆದ ಸಂಸ್ಥೆಯ ಸಭೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ಎಲ್ಲರಿಗೂ ಕೃತಜ್ಞತೆಗಳು. ಈ ಜ್ಞಾನ ಶೃಂಗ ಸಮ್ಮೇಳನವು ಸಮುದಾಯದ ಪ್ರಗತಿಪರ ಚಿಂತನೆ, ಮೌಲ್ಯಾಧಾರಿತ ಕಾರ್ಯಗಳೊಂದಿಗೆ ಏಕತಾ ಮನೋಭಾವವನ್ನು ಪ್ರತಿಬಿಂಬಿಸುವ ಮಹತ್ವದ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸುವೆನು. ಇತ್ತೀಚಿನ ವರ್ಷಗಳಲ್ಲಿ ಐಬಿಸಿಸಿಐ ಅನೇಕ ಜ್ಞಾನ ಸಮ್ಮೇಳನಗಳನ್ನು ಆಯೋಜಿಸಿದ್ದರೂ, ಅವುಗಳ ಮೂಲ ವಿಷಯ ಉದ್ಯಮಶೀಲತೆ ಕುರಿತಾಗಿಯೇ ಇತ್ತು. ಆದರೆ ಈ ಬಾರಿ ಸಮ್ಮೇಳನವು ವಿಭಿನ್ನತೆಯನ್ನು ಹೊಂದಿದ್ದು, ಉದ್ಯಮ ನಿರ್ವಹಣೆಯಲ್ಲಿ ಆಧ್ಯಾತ್ಮದ ಸ್ಪರ್ಶ ಕೂಡ ಇದೆ. ಬಂಟ ಸಮುದಾಯವು ಹೆಮ್ಮೆಯ ಪರಂಪರೆ, ಉದ್ಯಮಶೀಲತೆ, ನಾಯಕತ್ವ ಮತ್ತು ಸಾಮಾಜಿಕ ಹೊಣೆಗಾರಿಕೆಯಲ್ಲಿ ಸಮೃದ್ಧ ಪರಂಪರೆಯನ್ನು ಹೊಂದಿದೆ. ಸಾಮಾನ್ಯ ಆರಂಭದಿಂದ ಹಿಡಿದು ವಿವಿಧ ಕೈಗಾರಿಕಾ ಕ್ಷೇತ್ರಗಳಲ್ಲಿ ಯಶಸ್ವಿ ಉದ್ಯಮಗಳನ್ನು ಸ್ಥಾಪಿಸುವ ತನಕದ ಅವರ ಪಯಣವು ಧೈರ್ಯ, ಪ್ರಾಮಾಣಿಕತೆ ಮತ್ತು ದೂರದೃಷ್ಟಿಯಿಂದ ಚಾಲಿತವಾಗಿದೆ. ಜ್ಞಾನ ಸಮ್ಮೇಳನವು ಅನುಭವ…
ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬಲ್ಲ ಸಂಶೋಧನೆಯಾಗಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀ ನಾರಾಯಣ ಶೆಣೈ ಹೇಳಿದರು. ಅವರು ಆಳ್ವಾಸ್ ಆಯುರ್ವೇದ ಕಾಲೇಜಿನ ಆತ್ಮ ಸಂಶೋಧನಾ ಕೇಂದ್ರ, ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಅಲೋಕ 2026 ನ್ನು ಉದ್ಘಾಟಿಸಿ ಮಾತನಾಡಿದರು. ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಹೆಚ್ಚು ಉಪಯುಕ್ತವಾಗುವಂತೆ ಮಾಡಬೇಕು. ಕೇವಲ ಸಿದ್ಧಾಂತದ ಹಂತದಲ್ಲಿ ಉಳಿಯದೆ, ಅವು ಜನರ ಆರೋಗ್ಯಕ್ಕೆ ನೇರವಾಗಿ ಪ್ರಯೋಜನವಾಗಬೇಕು. ಸಂಶೋಧನೆಯಿಂದ ಹೊಸ ಔಷಧಿಗಳು, ಆರೋಗ್ಯ ಉತ್ಪನ್ನಗಳು ಮತ್ತು ಚಿಕಿತ್ಸಾ ವಿಧಾನಗಳು ಅಭಿವೃದ್ಧಿಯಾಗಬೇಕು. ಇವುಗಳು ಮಾರುಕಟ್ಟೆಯಲ್ಲಿ ಉತ್ತಮ ಸ್ಥಾನ ಪಡೆಯುವಂತಾದರೆ ಆಯುರ್ವೇದ ಕ್ಷೇತ್ರಕ್ಕೆ ಆರ್ಥಿಕ ಲಾಭವೂ ಹೆಚ್ಚುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಎಂ. ಮೋಹನ ಆಳ್ವ, ಹಿಂದೆ ಆಯುರ್ವೇದದಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಮಹತ್ವವಿರಲಿಲ್ಲ.…
ಆಳ್ವಾಸ್ ಹೆಲ್ತ್ ಸೆಂಟರ್ ವತಿಯಿಂದ ಮಾರ್ಚ್ 08 ರಂದು ಬೆಳಿಗ್ಗೆ 10ರಿಂದ 1 ಘಂಟೆಯವರೆಗೆ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹೈಡ್ರೋಸಿಲ್, ಮೂಲವ್ಯಾಧಿ, ಹರ್ನಿಯ, ಥೈರಾಯ್ಡ್ ಸಮಸ್ಯೆ, ಮಧುಮೇಹ ಪಾದದ ಚಿಕಿತ್ಸೆ, ಅಬ್ಸೆಸ್ ಡ್ರೆನೇಜ್, ಪಿತ್ತ ಕೋಶದ ಕಲ್ಲುಗಳ ಚಿಕಿತ್ಸೆ, ಸ್ತನದ ಗಡ್ಡೆ/ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಸೇರಿದಂತೆ ಮುಂತಾದ ರೋಗಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಹಾಗೂ ತಜ್ಞರ ಸಲಹೆ ಲಭಿಸಲಿದೆ. ಹೊಟ್ಟೆ ನೋವು ವಿಶೇಷವಾಗಿ ಬಲಭಾಗದಲ್ಲಿ ತೀವ್ರ ನೋವು, ಹೊಟ್ಟೆಯಲ್ಲಿ ಅಥವಾ ದೇಹದ ಬೇರೆ ಭಾಗದಲ್ಲಿ ಗಡ್ಡೆ, ಹರ್ನಿಯದ ಲಕ್ಷಣಗಳು, ಮಲಬದ್ಧತೆ ಜೊತೆಗೆ ರಕ್ತ ಸ್ರಾವ, ಮಲದ್ವಾರದಲ್ಲಿ ನೋವು/ಉಬ್ಬರಗಳ ಸಂಧರ್ಭದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಈ ಶಿಬಿರದ ಮೂಲಕ ಉಚಿತ ಶಸ್ತ್ರಚಿಕಿತ್ಸೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 9945722671 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.
ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಮತ್ತು ಡಾ| ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ : ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ
ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಮತ್ತು ಡಾ| ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವ ಭಾಗ್ಯ ನನ್ನದಾಗಿದೆ. ಇಲ್ಲಿನ ಹಲವು ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿದ್ದೇನೆ. ಇಲ್ಲಿನ ಶಿಸ್ತು, ಸಮಯ ಪಾಲನೆ ಕಾರ್ಯಕ್ರಮದ ಅಚ್ಚುಕಟ್ಟುತನಕ್ಕೆ ಬೆರಗಾಗಿದ್ದೇನೆ. ನನಗೆ ಗೊತ್ತಿಲ್ಲದ ಎಷ್ಟೋ ವಿಚಾರಗಳನ್ನು ಇಲ್ಲಿ ಬಂದು ತಿಳಿದುಕೊಂಡಿದ್ದೇನೆ. ವಿಶ್ವನಾಥ ಕಾರ್ನಾಡ್ ಅವರ ಹಾಗೆ ನಾನು ಕೂಡಾ ಮದರ್ ಇಂಡಿಯಾ ಶಾಲೆಯ ಹಳೆಯ ವಿದ್ಯಾರ್ಥಿ. ಅವರೊಂದಿಗೆ ನನಗೆ ತುಂಬಾ ಆತ್ಮೀಯ ಒಡನಾಟವಿದೆ. ಅವರ ಸಾಹಿತ್ಯ ಸಾಧನೆ ನೋಡಿ ನಾನು ಸಂತೋಷ ಪಡುತ್ತೇನೆ. ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಸ್ಯುತ್ಯರ್ಹ. ಇಂದು ಪ್ರಶಸ್ತಿ, ಬಹುಮಾನ ಪಡೆದ ಎಲ್ಲರಿಗೂ ಅಭಿನಂದನೆಗಳು ಎಂದು ಉದ್ಯಮಿ, ಸಮಾಜಸೇವಕ ಸುರೇಂದ್ರ ಪೂಜಾರಿ ಅವರು ಶುಭ ಹಾರೈಸಿದರು. ಅವರು ಫೆಬ್ರವರಿ ೨೧ರ ಶನಿವಾರ ಮರಾಠಿ ವಿಭಾಗ, ವಿದ್ಯಾನಗರಿ, ಇಲ್ಲಿ ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗ ಹಾಗೂ ಡಾ| ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಜಂಟಿಯಾಗಿ…
ಶ್ರೀ ನಡಿಯೇಲು ದೈಯ್ಯಂಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಪಾವನ ಕ್ಷೇತ್ರ ಮಿತ್ತಮಜಲು, ಸಜೀಪ ಮಾಗಣೆಯಲ್ಲಿ ಮಾರ್ಚ್ 18, 19 ಮತ್ತು 20 ರಂದು ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ನಡಿಯೇಲು ದೈಯ್ಯಂಗುಲುಗಳ ನೂತನ ಸ್ವರ್ಣಬಿಂಬಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೂರ್ವಭಾವಿ ಸಿದ್ಧತಾ ಸಭೆ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ವಿದ್ಯಾನಗರ, ಸಜಿಪ ಮುನ್ನೂರಿನಲ್ಲಿ ನಡೆಯಿತು. ಸಭೆಯನ್ನು ರತ್ನಾಕರ ಪೂಜಾರಿ ನಾಡಾರು ಇವರು ನಿರ್ವಹಿಸಿದರು. ಮಾಗಣೆಯ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್ ಅವರು ಕ್ಷೇತ್ರದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಹೊರಕಾಣಿಕೆ ಸಮರ್ಪಣ ಸಮಿತಿಯ ಮುಖ್ಯ ಸಂಚಾಲಕರಾದ ಜಯಶಂಕರ್ ಬಾಸ್ರಿತ್ತಾಯ ಅವರು ಹೊರೆಕಾಣಿಕೆ ಸಮರ್ಪಣೆ ಕುರಿತು ಮಾಹಿತಿ ನೀಡಿದರು. ಸಮಿತಿಯ ಗೌರವಾಧ್ಯಕ್ಷರಾದ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರು ಶ್ರೀ ನಡಿಯೇಲು ದೈಯ್ಯಂಗುಲುಗಳ ನೂತನ ಸ್ವರ್ಣಬಿಂಬಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಂಪೂರ್ಣ ವಿವರವನ್ನು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು…















