Author: admin

ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ‌ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿ ಹಿಡಿದ ಸುಧಾಕರ್ ಬನ್ನಂಜೆಯವರು ಕತೆ, ಚಿತ್ರಕತೆ, ಸಂಭಾಷಣೆ ಹಾಡು ಬರೆದು ನಿರ್ದೇಶನ ಮಾಡಿದ್ದಾರೆ. ತುಳು ಮೂಲದ ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ವಿ ಮನೋಹರ್ ಇದಕ್ಕೆ ಸಂಗೀತ ನೀಡಿದ್ದಾರೆ. ತುಳುನಾಡಿನ ಅಪ್ಪಟ ಪ್ರತಿಭೆ ತಮ್ಮ ಲಕ್ಷ್ಮಣ ಕಲಾ ನಿರ್ದೇಶನ, ಕೆ. ಗಿರೀಶ್ ಕುಮಾರ್ ಸಂಕಲನ, ಶಂಕರ್ ರವಿಕಿಶೋರ್ ಛಾಯಾಗ್ರಹಣ. ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ಲು ಸಹ ನಿರ್ದೇಶಕರಾಗಿ ದುಡಿದಿದ್ದಾರೆ. ಸ್ನೇಹಕೃಪಾ ಲಾಂಚನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸಿ ಗಿರೀಶ್ ಪೂಜಾರಿ ಸಹಕಾರದೊಂದಿಗೆ ಸುಧಾಕರ ಬನ್ನಂಜೆ ನಿರ್ಮಿಸಿರುವ ಈ ಚಿತ್ರದ ಇತರ ಸಹ ನಿರ್ಮಾಪಕರು ಮಮತಾ ಎಸ್…

Read More

ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಹಿರಿಯ ಸಾರಿಗೆ ಉದ್ಯಮಿ ಎ.ಕೆ ಜಯರಾಮ ಶೇಖ ಅವರು 50ನೇ ವರ್ಷದ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪ್ರಸ್ತುತ 80 ವರ್ಷ ಪ್ರಾಯದವರಾದ ಹಿರಿಯ ಸಮಾಜ ಸೇವಕ ಎ.ಕೆ. ಜಯರಾಮ ಶೇಖರದ್ದು ಸಾರಿಗೆ ಮತ್ತು ಆಟೋಮೊಬೈಲ್ ಉದ್ಯಮದಲ್ಲಿ ದೊಡ್ಡ ಹೆಸರು. ಬಂಟ್ವಾಳ ತಾಲೂಕಿನ ಅರ್ಕುಳ ಕುಂಪನ ಮಜಲಿನಲ್ಲಿ ದಿ. ಮಿಜಾರು ಬಾಬು ಶೇಖ ಮತ್ತು ಲಕ್ಷ್ಮಿ ಅವರ ನಾಲ್ಕು ಮಕ್ಕಳಲ್ಲಿ ಮೂರನೆಯವರಾಗಿ ಜನವರಿ 15, 1944 ರಂದು ಅವರು ಜನಿಸಿದರು. ಫರಂಗಿಪೇಟೆಯ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿ ತಮ್ಮ ಸೋದರ ಮಾವ ಎ.ಕೆ. ನಾರಾಯಣ ಶೆಟ್ಟಿಯವರ ಆಶ್ರಯದಲ್ಲಿ ಬೆಳೆದರು. ಹಲವಾರು ಸಂಕಷ್ಟಗಳನ್ನು ಎದುರಿಸಿ 1962 ರಲ್ಲಿ ಬಸ್ ಕಂಡಕ್ಟರ್ ಆಗಿ ವೃತ್ತಿಜೀವನ ಆರಂಭಿಸಿದರು. ಬಳಿಕ ಕೆಲಕಾಲ ಹೋಟೆಲ್ ವ್ಯವಹಾರವನ್ನು ನಡೆಸಿದರು. ಆಟೋಮೋಟಿವ್ ಉದ್ಯಮದಲ್ಲಿ…

Read More

ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ದಿ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ ನೀಡಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಕಳ ಹೆಬ್ರಿ ವಲಯದ ಸಂಚಾಲಕರಾದ ವಿಜಯ್ ಶೆಟ್ಟಿಯವರು ತಮ್ಮ ವೈಯುಕ್ತಿಕ 1 ಲಕ್ಷ ರೂಪಾಯಿ ಸಹಾಯಧನವನ್ನು ಸುಹಾಸ್ ಹೆತ್ತವರಿಗೆ ನೀಡಿ ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಸೂರ್ಯಕಾಂತ್ ಶೆಟ್ಟಿ, ಹಿತೇಶ್ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಸುಹಾಸ್ ಶೆಟ್ಟಿ, ದೇವೇಂದ್ರ ಶೆಟ್ಟಿ, ರಾಕೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Read More

ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಭಾಗ್ಯೆಶ್ ರೈ ಸಾರಥ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ಮತ್ತು K SET) ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಸರಕಾರವು 2025ರ ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುತ್ತದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET/ K-SET) ಹಾಗೂ ಸರಕಾರಿ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯ 190ಕ್ಕೂ ಅಧಿಕ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ರಾಷ್ಟ್ರೀಯ ಮಟ್ಟದಲ್ಲಿ ಉಪನ್ಯಾಸಕರಾಗಲು ನಡೆಯಲಿರುವ ಅರ್ಹತಾ ಪರೀಕ್ಷೆಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಪ್ರಸ್ತುತ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಕೆ ಸೆಟ್ ಪಾಸಾದರೆ…

Read More

ದಕ್ಷಿಣ ಭಾರತ ಕುಸ್ತಿ ಸಂಘದ 2025 – 29ರ ಸಾಲಿನ ಉಪಾಧ್ಯಕ್ಷರಾಗಿ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘದಲ್ಲಿ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯ ದೊರೆತಂತಾಗಿದೆ.ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಪ್ರತಿಷ್ಠಿತ ಬೆಳ್ಳಿಪಾಡಿ ಮನೆತನದವರಾಗಿರುವ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರನಾಗಿರುವ ಉದ್ಯಮಿ ಗುಣರಂಜನ್ ಶೆಟ್ಟಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿ, ನಾಲ್ಕು ವರ್ಷದ ನಂತರ ಚುನಾವಣೆ ನಡೆದಿದ್ದು ಕರ್ನಾಟಕ ಎಲ್ಲಾ ವಿಭಾಗಗಳಲ್ಲೂ ತನ್ನ ಚಾಪು ಮೂಡಿಸುತ್ತಿದೆ. ಕುಸ್ತಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ದಕ್ಷಿಣ ಭಾರತಕ್ಕೆ ಉತ್ತಮ ಪ್ರಾತಿನಿಧ್ಯ ದೊರಕಿಸಿಕೊಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

Read More

ಸುರತ್ಕಲ್ ಅರಂತಬೆಟ್ಟು ಗುತ್ತಿನಲ್ಲಿ ಗಡಿಪ್ರಧಾನ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಅವರ ಧರ್ಮಪತ್ನಿ ಶ್ರೀಮತಿ ಚಂದ್ರಿಕಾ ಹರೀಶ್ ಶೆಟ್ಟಿಯವರು ಭಾಗಿಯಾಗಿ ಶ್ರೀ ದೈವ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಂಪತಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಗಡಿ ಪ್ರಧಾನರಾದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಸುರೇಂದ್ರ ಶೆಟ್ಟಿ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ರಾಜೇಶ್ ಶೆಟ್ಟಿ, ಉದ್ಯಮಿ ದಿಲ್ ರಾಜ್ ಆಳ್ವ, ದಿವಾಕರ ಸಾಮನಿ ಇವರುಗಳು ಉಪಸ್ಥಿತರಿದ್ದರು.

Read More

ಟೀಮ್ ಅಭಿಮತ ಮತ್ತು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಇದರ ಸೇವಾ ಯೋಜನೆಯಾದ ಅಶಕ್ತರಿಗೆ ಮನೆ ನಿರ್ಮಿಸಿಕೊಡುವ ’ಮಡಿಲು’ ಯೋಜನೆಗೆ ಮುಹೂರ್ತ ಇತ್ತೀಚಿಗೆ ನೆರವೇರಿತು. ಶಿರಿಯಾರ ಬಳಿಯ ಅತ್ಯಂತ ಆರ್ಥಿಕ ಅಶಕ್ತ ಮತ್ತು ಅನಾರೋಗ್ಯ ಪೀಡಿತ ಕುಟುಂಬವೊಂದರ ಮನೆ ಈ ವರ್ಷದ ಮಳೆಗಾಲದಲ್ಲಿ ಕುಸಿದು ಬೀಳುವ ಎಲ್ಲಾ ಸಾದ್ಯತೆಗಳಿದ್ದವು. ಅದನ್ನು ಗುರುತಿಸಿ ಅವರಿಗೊಂದು ಪುಟ್ಟದಾದರೂ, ನೆಮ್ಮದಿಯ ಸೂರು ನಿರ್ಮಿಸಿಕೊಡುವ ಯೋಜನೆಗೆ ಮುನ್ನುಡಿ ಬರೆದರು. ಕೋಟೇಶ್ವರದ ಪ್ರಸಿದ್ಧ ಗುರು ಎಂಜಿನಿಯರ್ ಸೇವಾರ್ಥವಾಗಿ ಮಾರ್ಕಿಂಗ್ ಮಾಡಿ, ಮಾರ್ಗದರ್ಶನ ನೀಡಿದ್ದು, ಈ ಮನೆ ನಿರ್ಮಾಣಕ್ಕೆ ಹಲವು ದಾನಿಗಳು ತಮ್ಮ ನೆರವು ನೀಡುವ ಭರವಸೆಯನ್ನೂ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷದ ವಿಜಯದಶಮಿಯ ದಿವಸ ಮನೆ ಹಸ್ತಾಂತರ ಕಾರ್ಯಕ್ರಮ ನೆರವೇರಲಿದೆ. ಈ ಸಂಧರ್ಭ ವಸಂತ್ ಗಿಳಿಯಾರ್, ಆನಂದ್ ಸಿ ಕುಂದರ್, ಟೀಮ್ ಅಭಿಮತದ ಸದಸ್ಯರು ಉಪಸ್ಥಿತರಿದ್ದರು.

Read More

ತೆಂಕು ಬಡಗು ಯಕ್ಷಗಾನದ ಹವ್ಯಾಸಿ ವೇಷಧಾರಿ, ಹೋಟೆಲ್ ಉದ್ಯಮಿ ಮತ್ತು ಸಾಮಾಜಿಕ ಸೇವಾ ಕಾರ್ಯಕರ್ತ ಪಣಿಯೂರುಗುತ್ತು ಕರುಣಾಕರ ಶೆಟ್ಟಿ ಅವರು 2024- 25 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ನೌಕೆ ಆರ್ಯಭಟ ಉಪಗ್ರಹ ಉಡ್ಡಯನವಾದ ವರ್ಷವೇ ಸ್ಥಾಪನೆಗೊಂಡ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50 ವರ್ಷಗಳನ್ನು ಪೂರೈಸಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ದೇಶ ವಿದೇಶದ ಅನನ್ಯ ಸಾಧಕರನ್ನು ಗುರುತಿಸಿ ಈ ವಿಶೇಷ ಪ್ರಶಸ್ತಿಯನ್ನು ನೀಡುತ್ತಿದೆ. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪಣಿಯೂರು ಕುಟುಂಬದವರಾದ ಕರುಣಾಕರ ಶೆಟ್ಟರಿಗೆ ಪ್ರಸ್ತುತ 66ರ ಹರೆಯ. ಯಕ್ಷಗಾನ ಕಲೆಯಲ್ಲಿ ಅಪಾರ ಅಭಿಮಾನ ಹೊಂದಿದ ಅವರು ಬಡಗುತಿಟ್ಟಿನ ಹವ್ಯಾಸಿ ವೇಷಧಾರಿಯಾಗಿ ಪ್ರಸಿದ್ಧ ಕಲಾವಿದರೊಂದಿಗೆ ಪಾತ್ರವಹಿಸಿದ್ದಾರೆ. ತೆಂಕು ಬಡಗುತಿಟ್ಟಿನ ಪ್ರಮುಖರೊಂದಿಗೆ ತಾಳಮದ್ದಳೆ ಅರ್ಥಧಾರಿಯಾಗಿಯೂ ಭಾಗವಹಿಸಿದ್ದಾರೆ. ಅಲ್ಲದೆ ಹಲವು ವರ್ಷ ಐತಿಹಾಸಿಕ ಮೂಲ್ಕಿ ಮೇಳವನ್ನು ನಡೆಸಿದ ಅನುಭವ ಅವರಿಗಿದೆ. ಸುಮಾರು ನಾಲ್ಕು ದಶಕಗಳ ರಂಗಾನುಭವ ಹೊಂದಿದ ಪಣಿಯೂರು ಅವರು ಭರತನಾಟ್ಯವನ್ನೂ ಅಭ್ಯಸಿಸಿದ್ದಾರೆ. ತುಳು ಕನ್ನಡ ಪೌರಾಣಿಕ…

Read More

ಖ್ಯಾತ ಲೇಖಕ, ಸಾಹಿತಿ, ನಿವೃತ್ತ ಬ್ಯಾಂಕ್ ಅಧಿಕಾರಿ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024- 25 ನೇ ಸಾಲಿನ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ. ಉಡುಪಿ ಜಿಲ್ಲೆಯ ಚೇರ್ಕಾಡಿ ಗ್ರಾಮದ ಸಚ್ಚಿದಾನಂದ ಶೆಟ್ಟಿಯವರು ತಮ್ಮ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ಚೇರ್ಕಾಡಿಯಲ್ಲಿ ಪೂರೈಸಿ ಪದವಿ ವ್ಯಾಸಂಗವನ್ನು ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಮುಗಿಸಿ, 1976ರಲ್ಲಿ ವಿಜಯಾ ಬ್ಯಾಂಕಿಗೆ ಸೇರ್ಪಡೆಗೊಂಡು ಸೇವೆಯಲ್ಲಿರುವಾಗಲೇ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ ಪದವಿಯನ್ನು ಗಳಿಸಿದರು. ತದನಂತರ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ವ್ಯಾಸಂಗವನ್ನು ಪೂರೈಸಿ ಮುಂದೆ ಐಬಿಐ ನಿರ್ವಹಿಸುವ ಪ್ರತಿಷ್ಠಿತ ಬ್ಯಾಂಕಿಂಗ್ ನ ಸಿಎಐಐಬಿ ಪದವಿಯನ್ನು ಪಡೆದುಕೊಳ್ಳುತ್ತಾರೆ. ಬ್ಯಾಂಕ್ ನಲ್ಲಿನ ಸುದೀರ್ಘ 39 ವರ್ಷ ಸೇವೆಯಲ್ಲಿ ದೇಶ ಉದ್ದಗಲಗಳ ಆರು ರಾಜ್ಯಗಳಲ್ಲಿ ಸೇವೆಯನ್ನು ಸಲ್ಲಿಸಿ ಬ್ಯಾಂಕಿನ ಅತಿ…

Read More

ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ಪಿ.ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದು ತನ್ನ ಉತ್ತಮ ಸಾಧನೆಯಿಂದ ಸಂತಸಗೊಂಡಿರುವ ಪ್ರಾವ್ಯ ಪಿ. ಶೆಟ್ಟಿ ಮಾತನಾಡುತ್ತಾ, ತನ್ನ ಈ ಉತ್ಕೃಷ್ಟವಾದ ಫಲಿತಾಂಶವನ್ನು ನಾನು ಮೊದಲೇ ನಿರೀಕ್ಷಿಸಿದ್ದೆ. ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಅತ್ಯುತ್ತಮವಾದ ಬೋಧನೆ, ನಿರಂತರವಾಗಿ ನಡೆಸುತ್ತಿದ್ದ ಪೂರ್ವ ತಯಾರಿ ಪರೀಕ್ಷೆಗಳು, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಗಾರಗಳು, ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು. ನಾನು ಹಾಸ್ಟೆಲ್ ನ ವಿದ್ಯಾರ್ಥಿನಿಯಾಗಿದ್ದು ಹಾಸ್ಟೆಲ್ ನ ಸ್ಟಡಿ ಅವರ್ಸ್, ಹಾಸ್ಟೆಲ್ ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು. ವಿಶೇಷವಾಗಿ ನಮ್ಮ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಬೋಧಿಸುತ್ತಿರುವ ಐಐಟಿ/ನೀಟ್ ಫೌಂಡೇಶನ್ ಕೋರ್ಸ್ ನ ಮಾಸಿಕ ಪರೀಕ್ಷೆಗಳು ಜಟಿಲವಾದ ಪ್ರಶ್ನೆಗಳನ್ನು ಸರಳವಾಗಿ ಉತ್ತರಿಸಲು ನೆರವಾಯಿತು.…

Read More