Author: admin

ಸರ್ವಶಕ್ತ ಭಗವಂತನ ಆಶೀರ್ವಾದದಿಂದ ಈ ಕ್ಷೇತ್ರದ ಜೊತೆಯಲ್ಲಿ ಋಣಾನುಬಂಧವಿದೆ. ಇಲ್ಲಿ ಸಣ್ಣ ಗುಡಿಯಲ್ಲಿ ಪೂಜೆ ಮಾಡುತ್ತಿದ್ದ ಸಂದರ್ಭದ ನಂತರ ಇಲ್ಲಿ ದೇವಸ್ಥಾನದ ಶಂಕುಸ್ಥಾಪನೆಯನ್ನು ಕೂಡ ಮಾಡುವ ಯೋಗ ನನಗೆ ಸಿಕ್ಕಿದೆ. ನಂತರ ನಡೆದ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಗೌರವಾಧ್ಯಕ್ಷನಾಗಿ ನನ್ನಿಂದಾಗುವ ದೇವತಾ ಕಾರ್ಯವನ್ನು ಮಾಡಿ ಸಂತೃಪ್ತಿಯನ್ನು ಪಡೆದಿದ್ದೇನೆ. ಕ್ಷೇತ್ರದ ವಿಶ್ವಸ್ಥ ಮಂಡಳಿಯ ಗೌರವಾಧ್ಯಕ್ಷನಾಗಬೇಕೆಂಬ ನಿಮ್ಮೆಲ್ಲರ ಪ್ರೀತಿಯ ಮಾತಿಗೆ ಒಪ್ಪಿ ನನ್ನಿಂದಾಗುವ ಸೇವೆಯನ್ನು ನೀಡಲು ಸದಾ ಸಿದ್ದನಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ಚಿರಋಣಿ. ಹಾಗೆಯೇ ಜನವರಿಯಲ್ಲಿ ನಡೆಯುವ ವಾರ್ಷಿಕೋತ್ಸವ ಮಹಾಪೂಜೆಯ ಆಮಂತ್ರಣ ಪತ್ರಿಕೆ ಬಿಡಗಡೆ ಆಗಿದೆ. ಪುಣೆಯ ಸರ್ವ ತುಳು ಕನ್ನಡಗಿರ ಮತ್ತು ಇತರೆ ಬಾಷಿಕರ ಭಕ್ತಿಯ ಪುಣ್ಯ ಕ್ಷೇತ್ರವಾಗಿದೆ ಇದು. ಕಾಲಾನುಸಾರ ಕ್ಷೇತ್ರದ ಜೀರ್ಣೋದ್ದಾರದ ಕಾರ್ಯಗಳು ಸಂಕಲ್ಪದಂತೆ ಆಗಿ ದೇವಸ್ಥಾನ ಕಂಗೊಲಿಸುತ್ತಿದೆ. ಯಾವುದೇ ಆಡಂಬರ ಇಲ್ಲದೆ ಎಲ್ಲರ ಸೇವೆ ನಿಸ್ವಾರ್ಥವಾಗಿ ನಡೆದಾಗ ಸ್ವಾಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ. ಮುಂದಿನ ವಾರ್ಷಿಕೋತ್ಸವಕ್ಕೆ ಬಹಳಷ್ಟು ತಯಾರಿ ನಡೆಯಲಿಕ್ಕಿದೆ. ಕ್ಷೇತ್ರದ ಧಾರ್ಮಿಕ, ಸಾಂಸ್ಕ್ರತಿಕ ಮತ್ತು ಎಲ್ಲಾ ಸೇವಾ…

Read More

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಬೆಳ್ತಂಗಡಿ ತಾಲೂಕು ನಾರಾವಿಯ ಬಡ ರೋಗಿಯ ಶಸ್ತ್ರಚಿಕಿತ್ಸೆಗೆ 25,000 ರೂಪಾಯಿ ಆರ್ಥಿಕ ನೆರವನ್ನು ಚೆಕ್ ಮುಖಾಂತರ ನೀಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಹಿರಿಯ ದಾನಿಗಳಾದ ತುಕಾರಾಮ ನಾಯಕ್, ಡಾ. ಭರತೇಶ್ ಆದಿರಾಜ್, ಮಾಜಿ ಸಹಾಯಕ ಗವರ್ನರ್ ಗಳಾದ ಹರಿಪ್ರಕಾಶ್ ಶೆಟ್ಟಿ, ಪ್ರಕಾಶ್ ಆಚಾರ್ಯ, ಶೈಲೇಂದ್ರ ರಾವ್ ಹಾಗೂ ರೋಟರಿಯ ಸದಸ್ಯರು ಉಪಸ್ಥಿತರಿದ್ದರು.

Read More

ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ ಡಿಸೆಂಬರ್ 16 ರಂದು ವಂಡಾರಿನ ‘ಕೃಷ್ಣ ಪ್ರಸಾದ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್’ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯಾಚರಣೆಗಳ ಬಗ್ಗೆ ಪ್ರಾಯೋಗಿಕ ಜ್ಞಾನವನ್ನು ನೀಡುವ ಉದ್ದೇಶದಿಂದ ಈ ಭೇಟಿಯನ್ನು ಆಯೋಜಿಸಲಾಗಿತ್ತು. ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಹಂತಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಕಾರ್ಖಾನೆಯ ಅಧಿಕಾರಿಗಳು ಅಲ್ಲಿನ ವಿವಿಧ ಯಂತ್ರೋಪಕರಣಗಳ ಕಾರ್ಯವೈಖರಿ, ಗುಣಮಟ್ಟ ನಿಯಂತ್ರಣ ವ್ಯವಸ್ಥೆ ಮತ್ತು ಒಟ್ಟಾರೆ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವಿವರಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಂಪತ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ವೃತ್ತಿಜೀವನದ ಅವಕಾಶಗಳು, ವೃತ್ತಿಪರ ಬೆಳವಣಿಗೆ ಹಾಗೂ ಜೀವನದಲ್ಲಿ ಶಿಸ್ತು ಮತ್ತು ಸಮರ್ಪಣಾ ಭಾವದ ಮಹತ್ವದ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ನೀಡಿ ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಮತ್ ಶೆಟ್ಟಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಯುವಕರು ಸೇನೆಗೆ ಸೇರಿ ಇತರರಿಗೆ ಸ್ಫೂರ್ತಿಯಾಗಬೇಕು, ದೇಶ ಸೇವೆ ಮಾಡುವುದು ಹೆಮ್ಮೆಯ ಸಂಗತಿ. ಅಂತಹ ಸೈನಿಕರನ್ನು ಜನ ಅತ್ಯಂತ ಗೌರವದಿಂದ ಕಾಣುತ್ತಾರೆ ಎಂದು ನಿವೃತ್ತ ಯೋಧ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು. ಅವರು ರೋಟರಿ ಬಾಲ ಭವನದಲ್ಲಿ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ಬಿನ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿಯವರು ಎಲ್ಲರನ್ನೂ ಸ್ವಾಗತಿಸಿ, ಮಾತನಾಡುತ್ತಾ ಯೋಧ ಪ್ರವೀಣ್ ಕುಮಾರ್ ಶೆಟ್ಟಿ ನಮ್ಮೂರಿನವರೆಂಬುದು ಹೇಳಲು ನಮಗೆ ಹೆಮ್ಮೆ. ಅವರು ನಮ್ಮ ಯುವಕರಿಗೆ ಸ್ಫೂರ್ತಿಯಾಗಲಿ ಎಂದರು. ರೋಟರಿಯ ಹಿರಿಯ ಸದಸ್ಯರೂ ದಾನಿಗಳೂ ಆದ ತುಕಾರಾಮ ನಾಯಕ್, ಸುವರ್ಣ ತುಕಾರಾಮ್ ನಾಯಕ್, ಡಾ. ಭರತೇಶ್ ಆಧಿರಾಜ್ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಿದರು. ಪ್ರವೀಣ್ ಕುಮಾರ್ ಶೆಟ್ಟಿಯವರ ಧರ್ಮಪತ್ನಿ, ಹೆತ್ತವರು ಹಾಗೂ ರೋಟರಿ ಕ್ಲಬ್ಬಿನ ಸದಸ್ಯರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ. ಸನ್ಮಾನ ಪತ್ರ ವಾಚಿಸಿದರು.…

Read More

ಮೂಡುಬಿದಿರೆ ಜನಸಾಮಾನ್ಯರ ಆರೋಗ್ಯ ಕಾಳಜಿಯನ್ನು ಮನಗಂಡು ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಆರೋಗ್ಯ ಕೇಂದ್ರವು ಮತ್ತೊಂದು ಮಹತ್ವದ ಹೆಜ್ಜೆಯಾಗಿ ಹೃದಯ ಚಿಕಿತ್ಸಾ ಕೇಂದ್ರ (ಕಾರ್ಡಿಯಾಕ್ ಸೆಂಟರ್)ವನ್ನು ಆರಂಭಿಸಿರುವುದು ಅತ್ಯಂತ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್ ವಿನಯ್ ಹೆಗ್ಡೆ ನುಡಿದರು. ಅವರು ಬುಧವಾರ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೂಡುಬಿದಿರೆ, ಮುಲ್ಕಿ, ಕಾರ್ಕಳ ಹಾಗೂ ಬೆಳ್ತಂಗಡಿ ಪ್ರದೇಶಗಳಲ್ಲಿಯೇ ಮೊದಲ ಬಾರಿಗೆ ಸ್ಥಾಪನೆಯಾದ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಈ ಭಾಗದ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು. ಹೃದಯ ಸಂಬಂಧಿತ ರೋಗಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದ್ದು, ಸಮಯೋಚಿತ ಚಿಕಿತ್ಸೆ ದೊರಕದಿದ್ದರೆ ಅವು ಜೀವಕ್ಕೆ ಅಪಾಯಕಾರಿಯಾಗುತ್ತವೆ. ಇಂತಹ ಸಂದರ್ಭದಲ್ಲಿ ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆಯಾಗಿರುವುದು ಈ ಪ್ರದೇಶದ ಜನರಿಗೆ ದೊಡ್ಡ ವರದಾನವಾಗಿದೆ. ಇದರಿಂದಾಗಿ ಈಗ ಚಿಕಿತ್ಸೆಗಾಗಿ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ…

Read More

ಯುಎಇ ಬಂಟ್ಸ್ ನ 48 ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಬಂಟರ ಸಮಾಗಮ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ಗಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಂಟರಿಗೆ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ಪರಿಕಲ್ಪನೆಯ ಬಂಟ ಬ್ರಹ್ಮ, ಬಂಟ ಕಲಾ ಮಾಣಿಕ್ಯ ಮತ್ತು ಬಂಟ ಸೇವಾ ರತ್ನ ಪ್ರಶಸ್ತಿಯನ್ನು ಐದು ಮಂದಿ ಸಾಧಕರಿಗೆ ನೀಡಿ ಗೌರವಿಸಲಾಯಿತು. ಈ ಮರಳು ಭೂಮಿಯಲ್ಲಿ ಕಳೆದ ನಲವತ್ತ ನಾಲ್ಕು ವರ್ಷಗಳಿಂದ ಯುಎಇ ಬಂಟ್ಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಸರ್ವೋತ್ತಮ ಶೆಟ್ಟಿ ದಂಪತಿಗಳಿಗೆ “ಬಂಟ ಬ್ರಹ್ಮ” ಪ್ರಶಸ್ತಿ ನೀಡಿ ಗೌರವಿಸಲಾಯಿತು.”ಬಂಟ ಕಲಾ ಮಾಣಿಕ್ಯ” ಪ್ರಶಸ್ತಿಯನ್ನು ಮರಳು ಭೂಮಿಯಲ್ಲಿ ಯಕ್ಷಗಾನವನ್ನು ಪೋಷಿಸಿಕೊಂಡು ಬರುತ್ತಿರುವ ದಿನೇಶ್ ಶೆಟ್ಟಿ ಕೊಟ್ಟಿಂಜ ದಂಪತಿ ಮತ್ತು ನಾಟಕ ರಂಗದ ನಿರ್ದೇಶಕ ವಿಶ್ವನಾಥ ಶೆಟ್ಟಿ ದಂಪತಿಗಳಿಗೆ ನೀಡಿ ಗೌರವಿಸಲಾಯಿತು.”ಬಂಟ ಸೇವಾ ರತ್ನ” ಪ್ರಶಸ್ತಿಯನ್ನು ಬಾಲಕೃಷ್ಣ ಶೆಟ್ಟಿ ಮಾಡೂರು ಗುತ್ತು ದಂಪತಿ ಮತ್ತು ವಸಂತ ಶೆಟ್ಟಿಯವರಿಗೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಧ್ಯಕ್ಷರಾದ ಪ್ರವೀಣ್…

Read More

ಜೆಸಿಐ ಭಾರತ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿ ಔಟ್ ಸ್ಟ್ಯಾಂಡಿಂಗ್ ಡಿಜಿಟಲ್ ಇನ್ಫ್ಲುಯೆನ್ಸರ್ ಅವಾರ್ಡ್ ಗೆ (OUTSTANDING DIGITAL INFLUENCER AWARD) ಕಾರ್ಕಳದಿಂದ ಜೇಸಿಯೇತರ ವಿಭಾಗದಲ್ಲಿ ನಾಮಿನಿ ಆಗಿ ಜಿಸಿಐ ಶಾಲಾ ಶಿಕ್ಷಕಿ ವಂದನಾ ರೈ ಕಾರ್ಕಳ ಇವರು ಭಾಜನರಾಗಿದ್ದಾರೆ. ಜಿಸಿಐ ಭಾರತವು ರಾಷ್ಟ್ರಮಟ್ಟದಲ್ಲಿ ಐವರಿಗೆ ಈ ಪ್ರಶಸ್ತಿ ಘೋಷಿಸಿದ್ದು, ಅವರಲ್ಲಿ ವಂದನಾ ರೈಯವರು ಕೂಡಾ ಓರ್ವರು. ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳ ಪರಿಕಲ್ಪನೆಗಳು, ಅತೀ ಹೆಚ್ಚು ಫಾಲೋವರ್ಸ್ ಹಾಗೂ ವೀಡಿಯೋಗಳ ಅತೀ ಹೆಚ್ಚಿನ ವೀಕ್ಷಣೆ ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಡಿಸೆಂಬರ್ 27ರಿಂದ 29 ರವರೆಗೆ ಚೆನ್ನೈಯಲ್ಲಿ ನಡೆಯಲಿರುವ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಹಸ್ತಾಂತರ ಮಾಡಲಾಗುವುದು ಎಂದು ಜೆಸಿಐ ಭಾರತ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ದಾಮೋದರ ನಿಸರ್ಗರು ತಮ್ಮ ತಂದೆಯ ಹೆಸರಿನಲ್ಲಿ ನಡೆಸುತ್ತಿದ್ದ ಬೋಳೂರು ದೋಗ್ರ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರತಿವರ್ಷ ತಾಳಮದ್ದಳೆ ನಡೆಸುತ್ತಿದ್ದರು. ಅಲ್ಲದೆ ತುಳುಕೂಟದ ಆಶ್ರಯದಲ್ಲಿ ತುಳು ಸಂಸ್ಕೃತಿಗೆ ಸಂಬಂಧಿಸಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಇದೀಗ ತುಳು ಕೂಟವು ಗರೋಡಿಯ ಬ್ರಹ್ಮ ಬೈದ್ಯರ್ಕಳ ಪುಣ್ಯಸ್ಥಳದಲ್ಲಿ ನಿಸರ್ಗರ ನೆನಪಿನ ಸಪ್ತಾಹ ನಡೆಸುತ್ತಿರುವುದು ಒಂದು ಸಾರ್ಥಕ ಸಂಸ್ಮರಣೆಯೆನಿಸಿದೆ ಎಂದು ಹಿರಿಯ ವಿದ್ವಾಂಸರಾದ ಡಾ| ಎಂ. ಪ್ರಭಾಕರ ಜೋಷಿ ಹೇಳಿದರು. ಕುಡ್ಲ ತುಳುಕೂಟವು ದಿ| ದಾಮೋದರ ನಿಸರ್ಗರ ಸ್ಮರಣಾರ್ಥ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ನಡೆಸುತ್ತಿರುವ ‘ತುಳು ತಾಳಮದ್ದೊಲಿ’ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಅರ್ಥಧಾರಿ ಜಬ್ಬಾರ್ ಸಮೋ ಅವರನ್ನು ತುಳುಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ಶಾಲು, ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ನಾಗೇಶ ದೇವಾಡಿಗ, ಮಧುಸೂದನ ಅಲೆವೂರಾಯ, ಶಶಿಧರ ಪೊಯ್ಯತ್ತಬೈಲ್, ನ್ಯಾಯವಾದಿ…

Read More

ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಜಾನಪದ ವಿದ್ವಾಂಸರಾದ ಡಾ| ಕೆ.ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ’ – ಮಾಯದ ನಡೆ ಜೋಗದ ನುಡಿ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಡಿಸೆಂಬರ್ 20 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ. ಬಿ.ಎ ವಿವೇಕ್ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದು, ಸಾಹಿತಿ ಡಾ| ರಾಜಶೇಖರ್ ಹಳೆಮನೆ ಕೃತಿಯ ಕುರಿತು ಅವಲೋಕನ ಮಾಡಲಿದ್ದಾರೆ. ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ| ಪ್ರವೀಣ್ ಮಾರ್ಟಿಸ್ ಎಸ್‌ಜೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.]| ನಾಗಪ್ಪ ಗೌಡ, ಲೇಖಕರು, ಜಾನಪದ ವಿದ್ವಾಂಸರಾದ ಡಾ| ಕೆ ಚಿನ್ನಪ್ಪ ಗೌಡ ಅವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್‌.ಎಲ್. ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ…

Read More

ತುಮಕೂರು : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿಯಲ್ಲಿ ಕಾರ್ಕಳ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ದೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಬ್ಬನಿ ದ್ವಿತೀಯ ಸ್ಥಾನಿಯಾಗಿ ಉಡುಪಿ ಜಿಲ್ಲಾಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾರೆ.

Read More