Author: admin
11 ನೇ ವರ್ಷದ ಪಟ್ಲ ಸಂಭ್ರಮ : ಡಾ. ಮೋಹನ ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ -2026 ಕಾರ್ಯಕ್ರಮ ಮೇ 30 ರಂದು ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು. ಬೆಳಿಗ್ಗೆ ಯಕ್ಷಧ್ರುವ ಪಟ್ಲ ಸಂಭ್ರಮ -2026 ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ಯಾಜಿ ನಿರಂಜನ ಭಟ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕರಾದ, ಉದ್ಯಮಿ ಶಶಿಧರ ಬಿ ಶೆಟ್ಟಿ ಉದ್ಘಾಟಿಸಿದರು. ಸಂಘ ಸಂಸ್ಥೆಗಳು ಬೆಳೆಯ ಬೇಕಾದರೆ ಎಲ್ಲರ ಸಹಕಾರ ಬೇಕು. ಯಕ್ಷಗಾನ ಕಲೆಯನ್ನು ಉಳಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕಾಲಮಿತಿ ಯಕ್ಷಗಾನದಿಂದ ಇವತ್ತು ಕಲಾವಿದರು ಬೇರೆ ಉದ್ಯೋಗವನ್ನೂ ಮಾಡುತ್ತಿದ್ದಾರೆ. ಕಲಾವಿದರ ಬದುಕು ಕಟ್ಟಿ ಕೊಡುವ ಕೆಲಸ ಪಟ್ಲ ಫೌಂಡೇಶನ್ ಮಾಡುತ್ತಿದೆ. ಕಲಾವಿದರ ಶ್ರೇಯೋಭಿವೃದ್ದಿಯ ನಿಟ್ಟಿನಲ್ಲಿ ದಾನಿಗಳಿಗೆ ದಾನ ಮಾಡುವ ಶಕ್ತಿ ಕೊಡಲಿ ಎಂದರು. 11 ನೇ ವರ್ಷದ ಪಟ್ಲ ಸಂಭ್ರಮದಲ್ಲಿ ಡಾ. ಎಂ ಮೋಹನ ಆಳ್ವ ಅವರಿಗೆ 2026 ರ ಯಕ್ಷಧ್ರುವ…
ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ಇದರ ಸಿಬ್ಬಂದಿಗಳಿಗೆ ಒಂದು ದಿನದ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ಹೊಟೇಲ್ ಮಣಿಪಾಲ್ ಇನ್ (ರಂಜಿತಾ ಪ್ಯಾಲೇಸ್) ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಶಿರ್ವ ಸಹಕಾರಿ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಕುತ್ಯಾರ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಬಿಂದು ನಾಯರ್ (ಪ್ರೊಫೆಸರ್ – ಕರ್ನಾಟಕ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮೂಡಬಿದ್ರೆ) ಇವರು ಸಿಬ್ಬಂದಿಗಳಿಗೆ ಟೋಟಲ್ ಕ್ವಾಲಿಟಿ ಆಫ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಯೂನಿಯನ್ ನ ಕಾರ್ಯದರ್ಶಿ ಶ್ರೀಮತಿ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗ, ಸಂಸ್ಥೆಯ ಅಧ್ಯಕ್ಷರಾದ ಅರುಣ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಎಂ. ಗಣೇಶ್ ಕಿಣಿ, ಹಿರಿಯ ನಿರ್ದೇಶಕರಾದ ನಾರಾಯಣ ಬಲ್ಲಾಳ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳು…
ಎಲ್ಐಸಿ ಕಾರ್ಪೊರೇಟ್ ಕ್ಲಬ್ ಸದಸ್ಯರಾಗಿ ಜಪಾನ್ನ ಟೋಕಿಯೊದಲ್ಲಿ ನಡೆಯುವ ಶೈಕ್ಷಣಿಕ ಸಮ್ಮೇಳನಕ್ಕೆ ಅನಿಲ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಅನಿಲ್ ಶೆಟ್ಟಿಯವರಿಗೆ ಜಪಾನ್ ಪ್ರವಾಸವು ಅತ್ಯಂತ ಯಶಸ್ವಿಯಾಗಲಿ ಮತ್ತು ವೃತ್ತಿಜೀವನಕ್ಕೆ ಮತ್ತಷ್ಟು ಮೆರುಗನ್ನು ನೀಡಲಿ ಎಂದು ಹಾರೈಸೋಣ.
ಉಡುಪಿ ಜಿಲ್ಲೆಯ ಪುಟ್ಟ ಹಳ್ಳಿಯೊಂದರ ಬಡ ಕುಟುಂಬವೊಂದರಲ್ಲಿ ಜನಿಸಿದ ರಾಜೇಂದ್ರ ವಿ ಶೆಟ್ಟಿಯವರು ಬಾಲ್ಯದಲ್ಲೇ ಬಡತನದ ಬೇಗೆ ಅನುಭವಿಸಿದರು. ಅವರ ತಂದೆ ತಾಯಿ ಕುಟುಂಬದೊಂದಿಗೆ ಉಡುಪಿಯಿಂದ ಹುಬ್ಬಳ್ಳಿಗೆ ವಲಸೆ ಬಂದಾಗ ರಾಜೇಂದ್ರ ಶೆಟ್ಟಿಯವರು ಬಾಲಕನಾಗಿದ್ದರು. ಹೇಗೋ ಕಷ್ಟಪಟ್ಟು 8ನೇ ತರಗತಿಯವರೆಗೆ ಓದಿದ ಅವರು ಉದ್ಯೋಗಕ್ಕಾಗಿ ಮನೆಯಲ್ಲಿ ಯಾರಿಗೂ ಹೇಳದೆ ರೈಲು ಹತ್ತಿದರು. ಅದು ಹೋಗಿ ನಿಂತದ್ದು ಮುಂಬೈಯಲ್ಲಿ. ಅಲ್ಲಿ ರೈಲ್ವೇ ಸ್ಟೇಷನ್ ಅಕ್ಕಪಕ್ಕದಲ್ಲಿ ಚಹಾ ಮಾರುವ ಕೆಲಸ ಮಾಡಿದರು. ಆರಂಭದಲ್ಲಿ ಬೀದಿ ಬದಿಯಲ್ಲಿ ಮಲಗಿ ಕೆಲಸ ಹುಡುಕುತ್ತಾ, ಅಲ್ಲಿನ ಹೊಟೇಲ್ಗಳಿಗೆ ಕೆಲಸಕ್ಕಾಗಿ ಅಲೆದಾಡಿದರು. ಮುಂದೆ ಅವರಿಗೆ ಹೊಟೇಲ್ನಲ್ಲಿ ಕ್ಲೀನರ್ ಕೆಲಸ ಸಿಗುತ್ತದೆ. ವಿವಿಧ ಹೋಟೆಲ್ಗಳಲ್ಲಿ ಅಡುಗೆ ಮನೆಯ ಕೆಲಸ, ಕ್ಲೀನರ್, ವೈಟರ್, ಕ್ಯಾಪ್ಟನ್ನಂತಹ ನಾನಾ ತರಹದ ಕೆಲಸಗಳನ್ನು ಮಾಡಿದರು. ಆ ಬಳಿಕ ದೇವತಾ ಮನುಷ್ಯರಂಥ ಮಾಲಕರೊಬ್ಬರು ಸಿಕ್ಕಿದ್ದರಿಂದ ಅವರ ಹೊಟೇಲ್ನಲ್ಲಿ 12 ವರ್ಷಗಳ ಕಾಲ ಮ್ಯಾನೇಜರ್ ಆಗಿ ದುಡಿದರು. ಮುಂಬೈಗೆ ಬಂದಾಗ ಅವರಿಗೆ 13ರಿಂದ 14 ವರ್ಷ ಆಗಿತ್ತು. ಅಲ್ಲಿ 18…
ಬೆಳಿಯೂರು ಗುತ್ತು ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ವಿಲೇಜ್ ಬಾಯ್ಸ್’ ಕನ್ನಡ ಚಲನಚಿತ್ರದ ಮುಹೂರ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನ ಅನುವಂಶಿಕ ಪ್ರಧಾನ ಅರ್ಚಕರಾದ ಶ್ರೀ ಹರಿ ಅಸ್ರಣ್ಣರು ದೇವರ ಸಾನಿಧ್ಯದಲ್ಲಿ ಕ್ಯಾಮೆರಾ ಪೂಜೆ ಸಲ್ಲಿಸಿ, ಸಿನಿಮಾ ಕ್ಲಾಪ್ ಬೋರ್ಡ್ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಸಿನಿಮಾ ತಂಡಕ್ಕೆ ಆಶೀರ್ವಾವಚನ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತುಳು ರಂಗಭೂಮಿಯ ಖ್ಯಾತ ರಂಗ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್, ನಿವೃತ್ತ ಸೇನಾಧಿಕಾರಿ ರಂಗನಾಥ್ ಎಸ್ ರೈ, ಬನ ಸಿನಿಮಾ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ಬನ ಸಿನಿಮಾದ ನಿರ್ಮಾಪಕ ಮನೋಹರ್ ರೈ, ಅನಾರ್ಕಲಿ ಸಿನಿಮಾದ ನಿರ್ದೇಶಕ ಹರ್ಷಿತ್ ಸೋಮೇಶ್ವರ, ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿ ಇದರ ಅಧ್ಯಕ್ಷರಾದ ಪುಷ್ಪರಾಜ್ ಇರ್ದೆ ಮತ್ತು ಕಾರ್ಯದರ್ಶಿಗಳಾದ ಚಂದ್ರಶೇಖರ್ ಮೂರೂರು, ಆನಂದ್ ಶೆಟ್ಟಿ ಕುಕ್ಕುಂದೂರು ಅಥಿತಿಗಳಾಗಿ ಉಪಸ್ಥಿತರಿದ್ದು ಚಿತ್ರೀಕರಣಕ್ಕೆ ಶುಭ ಹಾರೈಸಿದರು. ವಿಲೇಜ್ ಬಾಯ್ಸ್ ಕನ್ನಡ ಸಿನಿಮಾಕ್ಕೆ ನಿರ್ಮಾಪಕರಾಗಿ…
ವನಸುಮದೋಲ್ ಎನ್ನ ಜೀವನವು ವಿಕಸಿಸುವಂತೆ ಮನವನನು ಗೊಳಿಸು ಗುರುವೆ’ ಎಂಬ ಸದಾಶಯ ವಾಕ್ಯಕ್ಕೆ ಒಪ್ಪುವ ಜೀವನ ಶೈಲಿಯನ್ನು ಅನುಸರಿಸಿಕೊಂಡು ಕಾನನದ ಸುಮವೊಂದು ಮೌನದಿಂ ಬಿರಿದು ನಿಜ ಸೌರಭವ ಸೂಸಿ ತಾನೆಲೆಯ ಪಿಂತಿರ್ದು ದೀನತೆಯ ತೋರಿ ಅಭಿಮಾನವನು ತೊರೆದು ಕೃತಕೃತ್ಯೆಯನು ಪಡೆವಂತೆ ಬಾಳನ್ನು ರೂಪಿಸಿಕೊಂಡ ಸಜ್ಜನ ಸಂಘಟಕ ಬಲು ಪ್ರತಿಷ್ಠಿತ ಚೇಳ್ಯಾರು ಗುತ್ತು ಮೂಲದ ದಿವಾಕರ ಸಾಮಾನಿ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಜನರ ಜೀವನಕ್ಕೆ ಹತ್ತಿರವಾಗುವ ಸಮಾಜಬಂಧು ಸಾಮಾನಿ ಯಾವುದೇ ಪ್ರತಿಫಲಾಪೇಕ್ಷೆ ಅಥವಾ ಕೀರ್ತಿಕಾಂಕ್ಷೆಯನ್ನು ಹೊಂದಿದವರಲ್ಲ. ಬಂಟ ಸಮುದಾಯದ ಮೂಲ ಸಂಘಟನೆಯಾದ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಮೂಲ ಘಟಕದ ಜೊತೆಗೆ ತನ್ನನ್ನು ತೊಡಗಿಸಿಕೊಂಡು ಹಲವು ಮಜಲುಗಳ ಮುಂದಾಳು ಎನಿಸಿ ಸಮುದಾಯಪರ ಚಟುವಟಿಕೆಗಳಿಂದ ಜನಪ್ರಿಯತೆ ಪಡೆದ ಸಾಮಾನಿ ಯಾವುದೆ ಅಧಿಕಾರ ಲಾಲಸೆಯಿಂದ ಕಾರ್ಯ ಎಸಗಿಕೊಂಡು ಬಂದಿಲ್ಲವಾದರೂ ಅವರ ಯೋಗ್ಯತೆಗೆ ಅರ್ಹವಾದ ಉತ್ತಮ ಜವಾಬ್ದಾರಿಯುತ ಸ್ಥಾನಮಾನಗಳು ಲಭ್ಯವಾಗಿವೆ. ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಕಾರ್ಯಕಾರಿ ಸಮಿತಿ ಸಂಚಾಲಕರಾಗಿ ಮಹತ್ವದ…
ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ. ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 2 (ಎ) ಯಲ್ಲಿ ಸೇರಲು ಅರ್ಹವಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಬಂಟರು ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತವಾಗಿ ಬಂಟ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಬಳಿ ಇರುವ ಶ್ರೀಮತಿ ಎಸ್.ಎಮ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಇದರ 105 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿದ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ ಸಮಾಜವನ್ನು ಕೇಂದ್ರ ಸರಕಾರದ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಹಾಗೂ ರಾಜ್ಯದ ಮೀಸಲಾತಿ…
ಬೆಂಗಳೂರು ಮಾಗಡಿ ಮುಖ್ಯರಸ್ತೆಯ ಹೇರೋಹಳ್ಳಿ ಲೇಕ್ ಎದುರು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕಿಂಗ್ಸ್ ಕಿಚನ್ ಎಕ್ವಿಪ್ಮೆಂಟ್ಸ್ ಸಂಸ್ಥೆ, ಕಮರ್ಷಿಯಲ್ ಕಿಚನ್ ಉಪಕರಣಗಳ ತಯಾರಿಕೆಯಲ್ಲಿ ತನ್ನದೇ ಆದ ಮುದ್ರೆ ಮೂಡಿಸಿದೆ. ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಉದ್ಯಮಿ ಜಯಪ್ರಕಾಶ್ ಶೆಟ್ಟಿ ಎಲ್ಲರಿಗೂ ಆತ್ಮೀಯವಾಗಿ ‘ಜೇಪಿ ಅಣ್ಣ’ ಎಂದು ಪರಿಚಿತರಾಗಿರುವವರು. ತಮ್ಮ ದೂರದೃಷ್ಟಿ ಮತ್ತು ದುಡಿಮೆಯಿಂದ ಈ ಸಂಸ್ಥೆಯನ್ನು ಇಂದು ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಈ ಸಂಸ್ಥೆ ಹೋಟೆಲ್ ಉದ್ಯಮಕ್ಕೆ ಅಗತ್ಯವಿರುವ ಸಂಪೂರ್ಣ ಅಡುಗೆ ಮನೆಯ ಪರಿಹಾರಗಳನ್ನು ಒದಗಿಸುವ ಸಮಗ್ರ ಕೈಗಾರಿಕಾ ಘಟಕವಾಗಿದೆ. ಸ್ಟೈನ್ ಲೆಸ್ ಸ್ಟೀಲ್ ಕಿಚನ್ ವ್ಯವಸ್ಥೆಗಳು, ಕಮರ್ಷಿಯಲ್ ಸ್ಟೌವ್ಗಳು, ಸ್ಟೋರೇಜ್ ಯೂನಿಟ್ಗಳು ಹಾಗೂ ಗ್ರಾಹಕರ ಅವಶ್ಯಕತೆಗಳಿಗೆ ತಕ್ಕಂತೆ ಕಸ್ಟಮ್ ವಿನ್ಯಾಸದ ಉಪಕರಣಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ನಿಪುಣ ಕಾರ್ಮಿಕರ ತಂಡದ ಸಹಕಾರದಿಂದ ಗುಣಮಟ್ಟ, ದೀರ್ಘಕಾಲಿಕತೆ ಮತ್ತು ಕಾರ್ಯಕ್ಷಮತೆ ಎಂಬ ಮೂರು ಅಂಶಗಳನ್ನು ಕೇಂದ್ರವಾಗಿಟ್ಟುಕೊಂಡು ಉತ್ಪಾದನೆ ನಡೆಯುತ್ತಿದೆ. ಕಿಂಗ್ಸ್ ಕಿಚನ್ ಎಕ್ವಿಪ್ಮೆಂಟ್ಸ್ ಸಂಸ್ಥೆಯ ಸೇವಾ…
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ ಶೆಟ್ಟಿಯವರು ಮೇ 23 ರಂದು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಚಟುವಟಿಕೆಗಳು ಮತ್ತು ಸಮಿತಿಯ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು. ಡಿ.ಕೆ ಶಿವಕುಮಾರ್ ಅವರು ಸಮಿತಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಸಿದರು.
ಮಂಗಳೂರಲ್ಲೊಂದು ಹೊಸ ಶುದ್ಧ ಸಸ್ಯಹಾರಿ ಊಟ, ತಿಂಡಿ, ತಿನಸುಗಳ ವಿನೂತನ ಪರಿಕಲ್ಪನೆಯ ಪಾರ್ಕ್ಸ್ ಸಮೂಹ ಸಂಸ್ಥೆಯ ‘ಕಾವೇಶ್ವರ ಕೆಫೆ’ ಕದ್ರಿ ಪಾರ್ಕ್ ಬಳಿ ಶುಭಾರಂಭಗೊಂಡಿತು. ಈ ಸಂಧರ್ಭ ಹೈಕೋರ್ಟ್ ವಕೀಲ ಅರುಣ್ ಶ್ಯಾಮ್, ಉದ್ಯಮಿ ರಘು ಎಲ್ ಶೆಟ್ಟಿ, ಸಮಾಜಸೇವಕ ಡಾ| ಅಗರಿ ನವೀನ್ ಭಂಡಾರಿ, ಮಾಜಿ ಮೇಯರ್ ಎಂ ಶಶಿಧರ್ ಹೆಗ್ಡೆ, ಉದ್ಯಮಿ ರೋಹನ್ ಮೊಂತೆರೋ, ಶಕೀಲಾ ಕಾವ, ಸಹಜ್ ರೈ ಬಳಜ್ಜ, ಮಾಜಿ ಮೇಯರ್ ಭಾಸ್ಕರ್ ಉದ್ಘಾಟನಾ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ರುಚಿಯಾದ, ಶುಚಿಯಾದ, ಬಿಸಿಯಾದ, ಸಿಹಿಯಾದ, ತಂಪಾದ, ಹಿತವಾದ ಆಹಾರ ವಿಹಾರಕ್ಕಾಗಿ ಸೇರುವ ವಿಶಾಲವಾದ ಅಚ್ಚುಕಟ್ಟಾದ ಪರಿಸರ ಇದಾಗಿದ್ದು, ಜನಮಾಸದ ಹಸಿವು ನೀಗುವ ಕಾವೇಶ್ವರದಲಿ ಅನ್ನಪೂರ್ಣೆ ಕೃಪೆಯಾಗಲಿ ಸದಾಪೂರ್ಣೆಯಾಗಿ ನೆಲೆಯಾಗಲಿ ಎಂದು ನಾವೆಲ್ಲರೂ ಶುಭ ಹಾರೈಸೋಣ.















