Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್, ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜೂನ್ 22 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಪಣಜಿಯ ಮಿನೇಜಸ್ ಬೃಗಾನ್ಸ ಸಭಾಗೃಹದಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಭಾರತದ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ ನಾಯಕ್ ಉದ್ಘಾಟಿಸಲಿದ್ದಾರೆ. ಪರ್ವರಿಯ ಸಿದ್ಧಾರೂಢ ಮಠದ ಶ್ರೀ ಗಣೇಶಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಗೋವಾ ಇದರ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋವಾ ರಾಜ್ಯದ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ಗೋವಾ ವಿಧಾನಸಭೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕದ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಟಿಎಂ ಧ್ರುವ ಕುಮಾರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲರವರು ಉಪಸ್ಥಿತರಿರುವರು. ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಬೆಳವಾಯಿ, ಗೋವಾ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಅಮೀನ್ ಬಂಟ್ವಾಳ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ…
ಪ್ರತಿಯೊಂದು ಮಗುವಿನಲ್ಲೂ ಸೂಕ್ತ ಪ್ರತಿಭೆಗಳಿವೆ. ಅಂಥಹ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿದಾಗ ಆ ಮಗು ಹಾಗೂ ಸಮಾಜ ಅದರ ಪ್ರಯೋಜನ ಪಡೆಯಲು ಸಹಕರಿಯಾಗಬಲ್ಲದು. ಈ ನಿಟ್ಟಿನಲ್ಲಿ ಜ್ಞಾನ ಸಂಪಾದನೆಯ ಜೊತೆಗೆ ವಿದ್ಯಾವಂತರಾಗಿ ಒಳ್ಳೆಯ ಸಂಸ್ಕಾರ ಬೆಳೆಸಿಕೊಳ್ಳಿ ಎಂದು ಶ್ರೀ ವಿಧುಶೇಖರ ಭಾರತಿ ಶ್ರೀ ನುಡಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ ಮತ್ಯಾಡಿ ಕುಂದಾಪುರ ಇಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಶ್ರೀಗಳ ಅನುಗ್ರಹದಿಂದ ನಡೆದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ಆಶೀರ್ವದಿಸಿದರು. ಸ್ವಾಮೀಜಿಯವರು ವೀಣಾಧಾರಿಣಿ ಜಗನ್ಮಾತೆ ಶ್ರೀ ಶಾರದಾಂಬೆಯ ಮೂರ್ತಿಯನ್ನು ಸ್ಥಾಪಿಸಿ, ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಸಂಸ್ಥೆಯ ಸುಮಾರು 1900 ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ವಿದ್ಯಾರಂಭವನ್ನು ನೆರವೇರಿಸಿದರು. ಕಟ್ಟಡ ನಿರ್ಮಾಣದಲ್ಲಿ ಶ್ರಮಿಸಿದವರನ್ನು ಗೌರವಿಸಲಾಯಿತು. ಉಡುಪಿ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ…
ಮೂಡುಬಿದಿರೆ ಕ್ಷೇತ್ರದ ಶಾಸಕರಾಗಿ ಕರ್ನಾಟಕ ಸರಕಾರದ ಸಚಿವರಾಗಿ ಸೇವೆಕ ಸಲ್ಲಿಸಿ ಸ್ವಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೊಸ ಛಾಪು ನೀಡಿದ್ದ ಮಾಜಿ ಸಚಿವ, ಮಾಜಿ ಶಾಸಕರೂ ಆದ ದಿವಂಗತ ಕೆ.ಅಮರನಾಥ ಶೆಟ್ಟಿ ಅವರ ನೆನಪಿನಲ್ಲಿ ಪ್ರಾರಂಭಗೊಂಡಿರುವ ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀರ್ಕೆರೆ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಟ್ರಸ್ಟಿಗಳಾದ ಜಯಶ್ರೀ ಶೆಟ್ಟಿ, ಡಾ. ಅಮರಶ್ರೀ ಶೆಟ್ಟಿ ಹಾಗೂ ಆಶ್ರಿತಾ ಪಿ ಶೆಟ್ಟಿ ಅವರು ಈ ಸಂದರ್ಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ, ‘ಈ ಟ್ರಸ್ಟ್ ಮೂಲಕ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಯೋಜನೆಯನ್ನು ರೂಪಿಸಲಾಗಿದೆ’ ಎಂದರು. ಮರಿಯಡ್ಕ ರಮೇಶ್ ಶೆಟ್ಟಿ, ತುಳುನಾಡು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ, ಬಿ.ಎಸ್.ಜೆ.ಎಂ ಅಧ್ಯಕ್ಷರಾದ ಎಂ.ಎ.ಎಸ್ ಆಸಿಫ್ ಇಕ್ಬಾಲ್, ಪಂಚಾಯತ್ ಸದಸ್ಯರಾದ ಜೆ.ಕೆ.ಹಸನಬ್ಬ, ಹರಿಪ್ರಸಾದ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿಗಾರ್, ನೇಮಿರಾಜ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜೂನ್ 21 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಅವರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾದ ದರ್ಶನ್ ಎಚ್ ವಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಆನಂದ ಕೆ ಸೇರಿದಂತೆ ಅನೇಕ ಮುಖ್ಯ ಗಣ್ಯರು ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ 2025-26 ನನೇಯ ಸಾಲಿನ ನೂತನ ಅಧ್ಯಕ್ಷರಾಗಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರು ಹಾಗೂ ದಶಮಾನೋತ್ಸವದ ಅಧ್ಯಕ್ಷರಾಗಿ ಇಡೀ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚನ್ನು ಮೂಡಿಸಿದ ಅತ್ಯಂತ ಕ್ರಿಯಾಶೀಲರೂ ಸಮಾಜ ಪರ ಕಳಕಳಿಯ ಅಪ್ರತಿಮ ಯುವ ಸಂಘಟಕ, ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ನಿಕಟ ಪೂರ್ವ ಜಿಲ್ಲಾಧ್ಯಕ್ಷರು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ಕುಂದಾಪುರ ಶಾಖೆಯ ಸಲಹಾ ಸಮಿತಿಯ ಸದಸ್ಯರು, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದ ಸಹಾಯಕ ಪ್ರಾಧ್ಯಾಪಕರು ಆದ ಲಯನ್ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಲಯನ್ ಭುಜಂಗ ಶೆಟ್ಟಿ ರಟ್ಟಾಡಿ ಹಾಗೂ ಕೋಶಾಧಿಕಾರಿಯಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿ ಶಾಖೆಯ ಶಾಖಾಧಿಕಾರಿಗಳಾದ…
11 ದಿನಗಳ ಕಿರು ಅವಧಿಯಲ್ಲಿ 4 ಶಾಖೆಗಳು ಹಾಗೂ 2 ವಿಸ್ತರಣಾ ಕೌಂಟರ್ಗಳನ್ನು ಕಾರ್ಯಾರಂಭಿಸಿ ಸಹಕಾರ ರಂಗದಲ್ಲಿ ಅಪೂರ್ವ ಸಾಧನೆ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಘಗಳಲ್ಲೊಂದಾದ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯು ತನ್ನ ಕಾರ್ಯಯೋಜನೆ “ವಿಷನ್ 2025”ರಂತೆ ಹೊಸ 30 ಶಾಖೆಗಳನ್ನು ತಲುಪುವ ನಿಟ್ಟಿನಲ್ಲಿ 2025ರ ಜೂನ್ ತಿಂಗಳ 8 ರಿಂದ 18ರವರೆಗಿನ 11 ದಿನಗಳ ಕಿರು ಅವಧಿಯಲ್ಲಿ 4 ಹೊಸ ಶಾಖೆಗಳನ್ನು ಮತ್ತು 2 ವಿಸ್ತರಣಾ ಕೌಂಟರ್ಗಳನ್ನು ತೆರೆದು ಸಹಕಾರ ರಂಗದಲ್ಲಿ ಮತ್ತೊಂದು ಅಪೂರ್ವ ಸಾಧನೆಯನ್ನು ಮಾಡಿದೆ. ಈ ಹಿಂದೆ 2021ನೇ ಸಾಲಿನ ನವೆಂಬರ್ ತಿಂಗಳ 7 ದಿನಗಳ ಕಿರು ಅವಧಿಯಲ್ಲಿ 5 ನೂತನ ಶಾಖೆಗಳನ್ನು ಆರಂಭಿಸುವ ಮೂಲಕ ಅದ್ವಿತೀಯ ಸಾಧನೆಯನ್ನು ಮಾಡಿರುವುದು ಇಲ್ಲಿ ಉಲ್ಲೇಖನೀಯ. ಶ್ರೀ ರಾಮಕೃಷ್ಣ ಕ್ರೆಡಿಟ್ರ್ ಕೋ- ಓಪರೇಟಿವ್ ಸೊಸೈಟಿಯು ತನ್ನ 26ನೇ ಶಾಖೆಯನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹಾಗೂ 27ನೇ ಶಾಖೆಯನ್ನು ಕಡಬ ತಾಲೂಕಿನ ಸವಣೂರಿನಲ್ಲಿ ದಿನಾಂಕ 08.06.2025 ಆದಿತ್ಯವಾರದಂದು ಉದ್ಘಾಟನೆ ಮಾಡಿ ಕಾರ್ಯಾರಂಭಗೊಳಿಸಿತು. ಸಂಘದ 28 ನೇಯ ಶಾಖೆಯು ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ದಿನಾಂಕ 09.06.2025 ಸೋಮವಾರದಂದು ಶುಭಾರಂಭಗೊಂಡಿತು.…
ಉತ್ತಮ ವ್ಯಾಪಾರ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವ್ಯವಹಾರ ಅಭಿವೃದ್ಧಿ ಹೊಂದಲು ಸಾಧ್ಯ : ಹರ್ಷವರ್ಧನ್ ಶೆಟ್ಟಿ
ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೃಂಗಾರ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಜಯಶ್ರೀ ಶೆಟ್ಟಿಗಾರ್ ಅವರ ಅಧ್ಯಕ್ಷತೆಯಲ್ಲಿ ಜೂನ್ 19ರಂದು ಶಿರ್ವ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಉದ್ಘಾಟಿಸಿ, ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಹರ್ಷವರ್ಧನ್ ಶೆಟ್ಟಿಯವರು ಸಂಜೀವಿನಿ ಒಕ್ಕೂಟದ ಸದಸ್ಯರು ನಡೆಸಬಹುದಾದ ವ್ಯಾಪಾರ ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿ, ಉದ್ಯಮಶೀಲತೆಯ ಮನೋಭಾವವನ್ನು ಹೊಂದಿ ಗ್ರಾಹಕರ ಬೇಡಿಕೆಗಳಿಗೆ ಸ್ಪಂದಿಸಿ, ಉತ್ತಮ ವ್ಯಾಪಾರ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿ ಒಕ್ಕೂಟ ಸದಸ್ಯೆಯರೊಂದಿಗೆ ಸಂವಾದ ನಡೆಸಿದರು. ಶಿರ್ವ ಯೂನಿಯನ್ ಬ್ಯಾಂಕ್ ನ ಪ್ರಬಂಧಕ ರಾಘವೇಂದ್ರ, ನರೇಗಾ ಯೋಜನೆಯ ಮೇಲ್ವಿಚಾರಕ ಅಕ್ಷಯ್, ಸಂಜೀವಿನಿ ಒಕ್ಕೂಟದ ತಾಲೂಕು ಮೇಲ್ವಿಚಾರಕಿ ಪೂರ್ಣಿಮಾ ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಕಾರ್ಯದರ್ಶಿ ಚಂದ್ರಮಣಿ, ಶಿರ್ವ…
ಪುಣೆ ಬಂಟರ ಸಂಘದ ಸಮಾಜ ಕಲ್ಯಾಣ ಕಲ್ಪವೃಕ್ಷ ವಿನಯ ಕೆ.ಕೆ ಶೆಟ್ಟಿ ಕ್ರೀಡಾ ದಾತ ಯೋಜನೆಯ ಅಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನದಂಗವಾಗಿ ಯೋಗ ದಿನಾಚರಣೆಯು ಜೂನ್ 21ರಂದು ಬೆಳಿಗ್ಗೆ ಗಂಟೆ 9.00 ರಿಂದ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆಯಲಿದೆ. ಪುಣೆಯ ಶೆಟ್ಟಿ ಯೋಗ ಕ್ಲಾಸ್ ನ ನಿರ್ದೇಶಕಿ ಪ್ರಮಿಳಾ ಜೆ ಶೆಟ್ಟಿಯವರು ಈ ಯೋಗ ದಿನಾಚರಣೆಯನ್ನು ನಡೆಸಿ ಕೊಡಲಿದ್ದಾರೆ. ಬಂಟರ ಸಂಘ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಪ್ರಾದೇಶಿಕ ಸಮಿತಿಗಳ ಸಂಯುಕ್ತ ಕೂಡುವಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಮಾಜದ ಬಾಂಧವರು ಪಾಲ್ಗೊಳ್ಳುವಂತೆ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಅವರ್ಸೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ ಹಾಗೂ ಸಮಿತಿ…
ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21 ರಂದು ಪುಣೆಯ ಧೋಲೆ ಪಾಟೀಲ್ ರೋಡ್ ನಲ್ಲಿಯ ಮಾಣಿಕ್ ಚಂದ್ ಐಕಾನ್ ಹತ್ತಿರದ, ಆಹಾರ್ ಉಡುಪಿ ಹೋಟೆಲ್ ನ ಬ್ಯಾಂಕ್ವೇಟ್ ಹಾಲ್ ನಲ್ಲಿ ಬೆಳಿಗ್ಗೆ ಗಂಟೆ 7.00 ರಿಂದ ಅಂತರರಾಷ್ಟ್ರೀಯ ಯೋಗ ಶಿಕ್ಷಕಿ, ಸ್ವಾಸ್ಥ್ಯ ಶಿಕ್ಷಕಿ, ಯೋಗ ಗುರು ಹೀರಾ ಹೆಗ್ಡೆಯವರ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿ ಗುತ್ತು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೇಷ್ಮಾ ಅರ್ ಶೆಟ್ಟಿ ಮತ್ತು ಸಮಿತಿ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿರುತ್ತಾರೆ. ಹೀರಾ ಹೆಗ್ಡೆ : ಅಂತರರಾಷ್ಟ್ರೀಯ ಯೋಗ ಮತ್ತು ಸ್ವಾಸ್ಥ್ಯ ಶಿಕ್ಷಕಿ ಹೀರಾ ಹೆಗ್ಡೆಯವರು ಕಣಂಜಾರು ಪಟ್ಟದ ಮನೆ ರತ್ನಾಕರ್ ಹೆಗ್ಡೆ ಮತ್ತು ಇನ್ನಾ ಬಗ್ಗರ ಗುತ್ತು ಉಷಾ ಹೆಗ್ಡೆ ಅವರ ಪುತ್ರಿ…
ಜೀವನವೆಂಬದು ವಿಚಿತ್ರ ಪಯಣ. ಕೆಲವರಿಗೆ ಯೋಗ್ಯತೆ ಇದ್ದರೂ ಯೋಗ ಇರೋಲ್ಲ. ಇನ್ನು ಕೆಲವರಿಗೆ ಯೋಗ್ಯತೆ ಇರುತ್ತದೆ. ಆದರೂ ಯೋಗ ಇರೋಲ್ಲ. ಅದಕ್ಕೆ ಹೇಳುವುದು. “ಎಲ್ಲದಕ್ಕೂ ಯೋಗ ಬೇಕು ಕಣೋ…..” ಅಂತ. ಯಾರೋ ಒಬ್ಬನಿಗೆ ಕೋಟಿ ರೂಪಾಯಿ ಲಾಟ್ರಿ ಹೊಡೆಯುತ್ತೆ. ಅಬ್ಬಾ…. ಅವನಿಗೆ ಏನು ಅದೃಷ್ಟವೋ ? ಯಾವುದೇ ಶ್ರಮ ಪಡದೇ ಕೋಟಿ ರೂಪಾಯಿ ಬಂತು. ನಾವು ಎಷ್ಟು ಶ್ರಮ ಪಟ್ಟರೂ ಲಕ್ಷ ರೂಪಾಯಿ ದುಡಿಯಲು ಆಗೋಲ್ಲ ಅಂತಹ ಬೇಸರ ಪಡುತ್ತೀವಿ. ಅದೇ ಕೋಟಿ ರೂಪಾಯಿ ಲಾಟ್ರಿ ಹೊಡೆದವನು ಶ್ರಮ ಪಡದೇ ಬಂದ ಆ ಕೋಟಿ ರೂಪಾಯಿಯನ್ನು ಉಳಿಸಿಕೊಳ್ಳಲಾಗದೇ ಎರಡೇ ವರ್ಷಗಳಲ್ಲಿ ಎಲ್ಲಾ ಕಳೆದು ಕೊಂಡು ದಿಪ್ಪಡ್ ದಿವಾಳಿಯಾಗಿ ರಸ್ತೆಗೆ ಬಿದ್ದಾಗ ಅದೇ ಜನ ಏನು ಹೇಳ್ತಾರೆ ಗೊತ್ತಾ? “ಆ ಬಡ್ಡಿ ಮಗ ಬಂದ ಯೋಗವನ್ನು ಕ್ಷೇಮವಾಗಿ ಇಟ್ಟು ಕೊಳ್ಳಲು ಯೋಗ್ಯತೆ ಇಲ್ಲದವನು. ಕೋಟಿ ಬಂತು ಅಂತ ಮಾಡುತ್ತಿದ್ದ ಕೆಲಸ ಬಿಟ್ಟು ಬಿಟ್ಟ. ತನ್ನ ಅದೃಷ್ಟ ಚೆನ್ನಾಗಿದೆ ಅಂತ ಅಂದುಕೊಂಡ. ಇವನ ಕಾಸಿನ…