Author: admin

ಉಡುಪಿ ಗ್ರಾಮೀಣ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಸಖಾರಾಮ ಶೆಟ್ಟಿಯವರ ಗೌರವಾರ್ಥ ನುಡಿ ನಮನ ಕಾರ್ಯಕ್ರಮವು ಹಾಲಿ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್ ಸಭಾಭವನದಲ್ಲಿ ಏಪ್ರಿಲ್ 24 ರಂದು ನಡೆಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮಾತನಾಡಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಟ್ಟಡ ನಿರ್ಮಾಣ ಸಹಿತ ಸಮಗ್ರ ಅಭ್ಯುದಯಕ್ಕೆ ತೊಡಗಿಸಿಕೊಂಡಿದ್ದ ಸಖಾರಾಮ ಶೆಟ್ಟಿಯವರ ನಾಯಕತ್ವದ ಗುಣದಿಂದ ಊರಿನ ಅಭಿವೃದ್ಧಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದು, ಗ್ರಾಮೀಣ, ಪಟ್ಟಣ, ನಗರ ವ್ಯಾಪ್ತಿಯಲ್ಲಿ ಯಶಸ್ವಿ ಉದ್ಯಮಿಯಾಗಿ ಉದ್ಯೋಗದಾತರಾಗಿದ್ದರು ಎಂದರು. ಸಂಘದ ಕೋಶಾಧಿಕಾರಿ ವಿಜೀತ್ ಶೆಟ್ಟಿ, ಪ್ರಮುಖರಾದ ದಯಾನಂದ ಶೆಟ್ಟಿ ಕಲ್ಮಂಜೆ, ಗೋಪಾಲ ಶೆಟ್ಟಿ ಮೊದಲಾದವರು ನುಡಿ ನಮನ ಸಲ್ಲಿಸಿ ಪುಷ್ಪಾಂಜಲಿ ಸಮರ್ಪಿಸಿದರು. ಈ ಸಂದರ್ಭ ಬಹರೈನ್ ಔಮಾ ಮಿಡ್ಲ್ ಈಸ್ಟ್ ಸಂಸ್ಥೆಯ ಎಂಡಿ ನವೀನ್ ಶೆಟ್ಟಿ ದೆಂದೂರುಕಟ್ಟೆ, ಭಾರತಿ ಸಾಫ್ಟ್…

Read More

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಕೆ ಅಜಿತ್‌ ಕುಮಾರ್ ರೈ ಮಾಲಾಡಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಹೇಳಿದರು. ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಟೆಕ್ನಾಲಜಿ ಸೆಂಟರ್‌ನ ಆಶ್ರಯದಲ್ಲಿ ಹೊರ ತರಲಾದ ನವೋದ್ಯಮಿಗಳ ಪ್ರೇರಣಾದಾಯಕ ಕಥೆಗಳ ವೀಡಿಯೋ ಪಾಡ್‌ಕಾಸ್ಟ್ ಸರಣಿ ‘ಸಿಲಿಕಾನ್ ಬೀಚ್ ಸ್ಟೋರೀಸ್’ನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕರಾವಳಿ ಕರ್ನಾಟಕವು ವ್ಯಾಪಾರ, ಶಿಕ್ಷಣ ಮತ್ತು ಉದ್ಯಮಶೀಲತೆಯ ಸಮೃದ್ಧ ಪರಂಪರೆಯನ್ನು ಹೊಂದಿದೆ. ಈ ಪರಂಪರೆಯನ್ನು ಹೊಸ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರೂಪುಗೊಂಡಿರುವ ವಿಶಿಷ್ಟ ಉಪಕ್ರಮವೇ ಸಿಲಿಕಾನ್ ಬೀಚ್ ಸ್ಟೋರೀಸ್. ಇದು ಉದಯೋನ್ಮುಖ ಉದ್ಯಮಿಗಳ ಯಶೋಗಾಥೆಗಳನ್ನು ವಿಡಿಯೋ ಮತ್ತು ಪಾಡ್‌ಕಾಸ್ಟ್ ರೂಪದಲ್ಲಿ ದಾಖಲಿಸಿ ಹಂಚಿಕೊಳ್ಳುವ ಸೃಜನಾತ್ಮಕ ವೇದಿಕೆಯಾಗಿದೆ. ಈ ಯೋಜನೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯಮಶೀಲತಾ ಅಭಿವೃದ್ಧಿ ಘಟಕದ ಮಾರ್ಗದರ್ಶನದಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ನಿರ್ವಹಿಸುತ್ತಿದ್ದಾರೆ. ದೊಡ್ಡ ಕನಸುಗಳನ್ನು ಸಾಧಿಸಲು ಕಠಿಣ ಪರಿಶ್ರಮ, ತಾಳ್ಮೆ ಮತ್ತು ನಿರಂತರ ಪ್ರಯತ್ನ ಅಗತ್ಯ. ಯಾವ ಕೋರ್ಸ್ ಓದುತ್ತೀರಿ ಅಥವಾ ಎಲ್ಲಿ ಓದುತ್ತೀರಿ ಎಂಬುದಕ್ಕಿಂತ ನಿಮ್ಮ ಮನೋಭಾವ, ಶ್ರಮ ಮತ್ತು ಸ್ಥಿರತೆ ಮುಖ್ಯ ಎಂದರು. ಆಳ್ವಾಸ್…

Read More

ಎಳೆಯ ಮಕ್ಕಳು ಮನೆ ಮತ್ತು ಶಾಲೆಗಳಲ್ಲಿ ದೊರೆಯುವ ಸಂಸ್ಕಾರ ಹಾಗೂ ಶಿಕ್ಷಣಕ್ಕೆ ಹೊರತಾಗಿ ಸಮಾಜದಿಂದಲೂ ಕಲಿಯುವುದು ಬಹಳಷ್ಟಿದೆ. ರಜಾದಿನಗಳಲ್ಲಿ ಅಲ್ಲಲ್ಲಿ ನಡೆಯುವ ವಿವಿಧ ಶಿಬಿರಗಳಲ್ಲಿ ಸೇರಿಕೊಳ್ಳುವುದರಿಂದ ಮಕ್ಕಳಿಗೆ ಜೀವನ ಕೌಶಲ್ಯದ ಪಾಠ ಲಭಿಸುತ್ತದೆ. ಸೌಹಾರ್ದ ಕಲಾವಿದರಂತಹ ಯುವ ಸಂಘಟನೆಗಳು ಇಂತಹ ಶಿಬಿರಗಳನ್ನು ಸಂಘಟಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿವೆ ಎಂದು ವಿಶ್ರಾಂತ ಪ್ರಾಚಾರ್ಯರು ಹಾಗೂ ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಸೌಹಾರ್ದ ಕಲಾವಿದರು ಕುತ್ತಾರು ಇದರ ವತಿಯಿಂದ ಮುನ್ನೂರು ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ದಿನಗಳ ಕಾಲ ನಡೆಯುವ ‘ಚಿಣ್ಣರ ಚಿಗುರು’ ಮಕ್ಕಳ ಸಂತಸ ಕಲಿಕಾ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮುದಾಯ ಕರ್ನಾಟಕದ ರಾಜ್ಯ ಕಾರ್ಯದರ್ಶಿಯಾದ ಮನೋಜ್ ವಾಮಂಜೂರ್, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಮುನ್ನೂರು ಮುಖ್ಯ ಶಿಕ್ಷಕಿ ಶಕುಂತಲಾ ಎಸ್ ಉಳ್ಳಾಲ್, ವಾಮಂಜೂರು ವಿದ್ಯಾ ಜ್ಯೋತಿ ಶಾಲೆಯ ಶಿಕ್ಷಕಿ ಚಂಚಲಾಕ್ಷಿ ಪದವಿನಂಗಡಿ, ಮುನ್ನೂರು ದ.ಕ.ಜಿ ಪಂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮದ ಮುಖ್ಯ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ – 2026 ಕಾರ್ಯಕ್ರಮ ಮೇ 30 ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ. ಯಕ್ಷಧ್ರುವ ಪಟ್ಲ ಸಂಭ್ರಮ – 2026 ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮಧರ್ಶಿಗಳಾದ ಡಾ| ಯಾಜಿ ನಿರಂಜನ ಭಟ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 8.30 ರಿಂದ 9 ರ ತನಕ ಚೌಕಿ ಪೂಜೆ ಮತ್ತು ಅಬ್ಬರ ತಾಳ, 9 ರಿಂದ 11 ರ ವರೆಗೆ ಭರತ ನಾಟ್ಯ ಪ್ರದರ್ಶನ, 11 ರಿಂದ 1.30 ರ ವರೆಗೆ ಸಭಾ ಕಾರ್ಯಕ್ರಮ, ಮಧ್ಯಾಹ್ನ 1.30 ರಿಂದ 2 ರ ವರೆಗೆ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ವಾಣಿ ಶಾಲಾ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ, ಮಧ್ಯಾಹ್ನ 2ರಿಂದ 3.30 ರ ವರೆಗೆ ಮಹಿಳಾ ಯಕ್ಷಗಾನ, ಸಂಜೆ 3.30 ರಿಂದ 5 ರವರೆಗೆ ಯಕ್ಷಗಾನ ಹಾಸ್ಯ ವೈಭವ ನಡೆಯಲಿದೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ…

Read More

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದ ಟೆಕ್ನಾಲಜಿ ಸೆಂಟರ್‌ನಲ್ಲಿ ಮೆಟಾಸಾಫ್ಟ್ ಐಟಿ ಸೊಲ್ಯೂಷನ್ಸ್ ಹಾಗೂ ಕಾಕುಂಜೆ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ಹೊಸ ಕಚೇರಿ ಹಾಗೂ ಸಂಶೋಧನೆ – ನವೀನತೆ ಕೇಂದ್ರವನ್ನು ಉದ್ಘಾಟಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೊಸ ಕಚೇರಿ ಉದ್ಘಾಟಿಸಿ ಮಾತನಾಡಿ, ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ತಂತ್ರಜ್ಞಾನ, ಸಂಶೋಧನೆ ಹಾಗೂ ಉದ್ಯೋಗಾವಕಾಶಗಳ ಸಮಗ್ರ ಪರಿಸರವನ್ನು ಒದಗಿಸುವ ವಿಶಿಷ್ಟ ಕ್ಯಾಂಪಸ್ ಆಗಿ ಹೊರಹೊಮ್ಮಿದೆ. ಇಲ್ಲಿ ಸ್ಥಾಪಿಸಿರುವ ವಿವಿಧ ಐಟಿ ಕಂಪನಿಗಳು ಮತ್ತು ಸ್ಟಾರ್ಟ್ಅಪ್‌ಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಈ ಕೇಂದ್ರವು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್, ಪ್ರಾಜೆಕ್ಟ್, ಉದ್ಯೋಗಾವಕಾಶಗಳು ಹಾಗೂ ಸಂಶೋಧನೆ -ನವೀನತೆ ಕ್ಷೇತ್ರಗಳಲ್ಲಿ ಪೂರಕ ವೇದಿಕೆಯಾಗಿ ಕಾರ‍್ಯ ನಿರ್ವಹಿಸಲಿದೆ ಎಂದರು. ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಸಂಪೂರ್ಣ ಬ್ಲಾಕ್‌ವೊಂದನ್ನು ಟೆಕ್ ಸೆಂಟರ್‌ಗಳ ಸ್ಥಾಪನೆಗಾಗಿ ಮೀಸಲಿಟ್ಟಿದೆ. ಈ ವಿಶೇಷ ಬ್ಲಾಕ್‌ನಲ್ಲಿ ಕಚೇರಿ ಸ್ಥಳ, ಮೂಲಭೂತ ಸೌಲಭ್ಯಗಳು, ವಿದ್ಯುತ್,…

Read More

ಅತೀ ಗ್ರಾಮಿಣ ಭಾಗವಾದ ಉಡುಪಿ ಜಿಲ್ಲೆಯ ಬೆಳಪು ಗ್ರಾಮದ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ಇಡೀ ಬೆಳಪು ಗ್ರಾಮಕ್ಕೆ ಹೆಮ್ಮೆಯನ್ನು ತಂದಿದ್ದಾರೆ ಎಂದು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿಯವರು ತಿಳಿಸಿದ್ದಾರೆ. ಬೆಳಪು ಗ್ರಾಮವನ್ನು ಬೆಳಪು ಕಾಡು ಎಂದು ಕರೆಯುತ್ತಿದ್ದ ಸಂಧರ್ಭದಲ್ಲಿ ಬೆಳಪು ಗ್ರಾಮವನ್ನು ನಗರ ಪ್ರದೇಶದ ರೀತಿ ರೂಪಿಸಬೇಕು, ಅದರಲ್ಲಿಯೂ ಶೈಕ್ಷಣಿಕ ನಗರವನ್ನಾಗಿ ಕೆಜಿಯಿಂದ ಪಿಜಿಯ ತನಕ ಹಾಗೂ ಆಸುಪಾಸಿನ ಈ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ಮೌಲ್ಯಧಾರಿತ ಶಿಕ್ಷಣವನ್ನು ಒದಗಿಸಿ ಕೊಡಬೇಕು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಹಾಗೂ ನಿರ್ಗತಿಕ ವಿದ್ಯಾರ್ಥಿಗಳಿಗೆ, ಸಂಪೂರ್ಣ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಬೇಕು, ಅವರಿಗೆ ಉನ್ನತ ಶಿಕ್ಷಣ ಮಾಡುವುದಕ್ಕಾಗಲಿ, ಪಿಎಚ್ಡಿ ಮಾಡುವುದಕ್ಕಾಗಲಿ, ಅಥವಾ ಎಂ.ಕಾಂ, ಟೀಚರ್ ಟ್ರೈನಿಂಗ್ ಎಲ್ಲವೂ ನಮ್ಮೂರಿನ ಶಿಕ್ಷಣ ಕೇಂದ್ರಗಳಲ್ಲಿ ಮಾಡಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಮಂಗಳೂರು ವಿಶ್ವವಿದ್ಯಾನಿಲಯದ ಮೂಲಕ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಅಂತಿಮ ಹಂತದ ಕಾಮಗಾರಿ ಈಗಾಗಲೇ…

Read More

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಯಡಾಡಿ ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ರಾಜ್ಯಮಟ್ಟದಲ್ಲಿ 5ನೇ ರ‍್ಯಾಂಕ್‌ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾಳೆ. ಒಟ್ಟು 625 ಅಂಕಗಳಿಗೆ 621 ಅಂಕಗಳನ್ನು ಗಳಿಸಿರುವ ಸಮೀಕ್ಷಾ, ಶಾಲೆಯ ಹಾಗೂ ಕುಂದಾಪುರ ತಾಲೂಕಿನ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿದ್ದಾಳೆ. ಈ ಮಹತ್ತರ ಸಾಧನೆಯನ್ನು ಗುರುತಿಸಿರುವ ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿನಿಗೆ 50,000 ರೂ. ನಗದು ಬಹುಮಾನ ಘೋಷಿಸಿ ಗೌರವಿಸಿದೆ. ತನ್ನ ಸಾಧನೆಯ ಕುರಿತು ಸಂತಸ ಹಂಚಿಕೊಂಡಿರುವ ಸಮೀಕ್ಷಾ, ‘ನಾನು 7ನೇ ತರಗತಿಯಿಂದ ವಿದ್ಯಾರಣ್ಯ ಶಾಲೆಯಲ್ಲಿ ಕಲಿಯುತ್ತಿದ್ದೇನೆ. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ನೀಡಿದ ನಿರಂತರ ಪ್ರೋತ್ಸಾಹ ಮತ್ತು ಮಾರ್ಗದರ್ಶನವೇ ನನ್ನ ಈ ಯಶಸ್ಸಿಗೆ ಮುಖ್ಯ ಕಾರಣ. ನಮ್ಮ ಶಾಲೆಯಲ್ಲಿ 6ನೇ ತರಗತಿಯಿಂದಲೇ ನೀಡಲಾಗುವ ಐಐಟಿ -ನೀಟ್ (IIT-NEET) ಫೌಂಡೇಶನ್ ಕೋರ್ಸ್ ನನಗೆ ಗಣಿತ ಮತ್ತು…

Read More

ಕಾರ್ನಿಕದ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದ ಕರ್ನಿರೆ ಗ್ರಾಮದ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವವು ಏಪ್ರಿಲ್ 09 ರಿಂದ 11 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಏಪ್ರಿಲ್ 09 ರಂದು ರಾತ್ರಿ ಅಗರಗುತ್ತು ಕುಟುಂಬಿಕರ ಸೇವಾರ್ಥವಾಗಿ ದೀಪಾರಾಧನೆ ಬಲಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ವಿಷ್ಣುಮೂರ್ತಿ ಕ್ರಿಕೆಟ್ ಕ್ಲಬ್ (ರಿ.) ಕರ್ನಿರೆ ಇವರ ಆಶ್ರಯದಲ್ಲಿ ‘ವೈರಲ್ ವೈಶಾಲಿ’ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡು ಜನಮನ ಸೆಳೆಯಿತು. ಏಪ್ರಿಲ್ 10 ರಂದು ಮಧ್ಯಾಹ್ನ ಧ್ವಜಾರೋಹಣ ನೆರವೇರಿತು. ಬಳಿಕ ಮುಂಬೈ ಉದ್ಯಮಿ ಗಂಗಾಧರ ಎನ್. ಅಮೀನ್ (ಗುಲಾಬಿ ಭವನ, ಕರ್ನಿರೆ) ಇವರ ವತಿಯಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೀಪಾರಾಧನೆ ಬಲಿ ಹಾಗೂ ಭಂಡಾರ ಇಳಿಯುವ ಕಾರ್ಯಕ್ರಮ ಜರುಗಿತು. ಏಪ್ರಿಲ್ 11 ರಂದು ಮಧ್ಯಾಹ್ನ ಕರ್ನಿರೆ ಪಟ್ಟೆಗುತ್ತು ದಿವಂಗತ ಐತಪ್ಪ ಪೂಜಾರಿಯವರ ಮೊಮ್ಮಗಳು ಹಾಗೂ ಕೃಷ್ಣ ಪೂಜಾರಿಯವರ ಪುತ್ರಿ ಚೇತನಾ ಕೃಷ್ಣ ಪೂಜಾರಿ ಇವರ ವತಿಯಿಂದ ಅನ್ನಸಂತರ್ಪಣೆ ನಡೆಯಿತು.…

Read More

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಂಸ್ಥೆಯು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ರಂಗದಲ್ಲಿ ಅನೇಕ ಕಾರ್ಯ ಚಟುವಟಿಕೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವ ಸಂಸ್ಥೆಯು ಇದೀಗ ಸಹಕಾರ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಹೊಸ ಮೈಲುಗಲ್ಲೊಂದನ್ನು ನಿರ್ಮಿಸಿದೆ. ಸಪ್ತ ಸಂಸ್ಥಾಪಕರ ಕನಸಿನ ಕೂಸಾದ ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ. ಕಾರ್ಕಳದ ಕುಕ್ಕುದಕಟ್ಟೆ ಸರ್ಕಲ್ ನಲ್ಲಿರುವ ಪಿಂಟೋ ಟವರ್ಸ್ ನ ಮೊದಲ ಮಹಡಿಯಲ್ಲಿ ವಿದ್ಯುಕ್ತವಾಗಿ ಲೋಕಾರ್ಪಣೆಗೊಂಡಿತು. ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ಲೋಕಾರ್ಪಣೆ ನಿಮಿತ್ತ ಸಭಾ ಕಾರ್ಯಕ್ರಮ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ರವರು ಸೊಸೈಟಿಯನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ, ಕ್ರಿಯೇಟಿವ್ ಸಂಸ್ಥೆಯು ಕೇವಲ ಕ್ಯಾಂಪಸ್ ನ ಒಳಗಡೆ ತನ್ನ ಕಾರ್ಯ ಚಟುವಟಿಕೆಗಳನ್ನು ಸೀಮಿತಗೊಳಿಸದೆ ಕ್ಯಾಂಪಸ್ ನ ಹೊರಗಡೆ ಅಂದರೆ ಹತ್ತಾರು ಮಂದಿಗೆ…

Read More