Author: admin

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿಯಲ್ಲಿ ೨೯ ಶಾಖೆಗಳು ಹಾಗೂ ೨ ವಿಸ್ತರಣಾ ಕೌಂಟರ್‌ಗಳೊAದಿಗೆ, ವಿಸ್ತöÈತ ಸೇವಾ ಜಾಲವನ್ನು ಹೊಂದಿ ಕಳೆದ ೩೨ ವರ್ಷಗಳಿಂದ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಕರ್ನಾಟಕ ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಗಳಲ್ಲಿ ಒಂದಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ೨೦೨೫- ೨೬ನೇ ಸಾಲಿನಲ್ಲಿ ಒಟ್ಟು ವ್ಯವಹಾರದಲ್ಲಿ ಸಾರ್ವಕಾಲಿಕ ದಾಖಲೆಯ ವೃದ್ಧಿಯನ್ನು ಹೊಂದಿ ೩೧.೦೩.೨೦೨೬ಕ್ಕೆ ಠೇವಣಾತಿ ರೂ.೬೯೫ ಕೋಟಿ ಹಾಗೂ ಸಾಲ ರೂ.೬೧೦ ಕೋಟಿಯೊಂದಿಗೆ ಒಟ್ಟು ವ್ಯವಹಾರ ರೂ.೧೩೦೫ ಕೋಟಿಯನ್ನು ತಲುಪಿ, ರೂ.೫೯೦೧ ಕೋಟಿ ಒಟ್ಟು ವಹಿವಾಟು ದಾಖಲಿಸಿ ತನ್ನ ಎಲ್ಲಾ ಕಾರ್ಯವಿಭಾಗಗಳಲ್ಲಿ ನಿಗದಿತ ಗುರಿಯನ್ನು ಮೀರಿ ಅಮೋಘ ಸಾಧನೆಯನ್ನು ಮಾಡಿದೆ. ಹಿಂದಿನ ಸಾಲಿಗೆ ಹೋಲಿಸಿದಾಗ ಪ್ರಸ್ತುತ ಸಾಲಿನಲ್ಲಿ ಠೇವಣಾತಿಯಲ್ಲಿ ರೂ.೧೦೬ ಕೋಟಿ ಹೆಚ್ಚಳ ಶೇ.೧೮ ವೃದ್ಧಿ ಹಾಗೂ ಸಾಲದಲ್ಲಿ ರೂ.೧೦೫ ಕೋಟಿ ಹೆಚ್ಚಳ, ಶೇ.೨೧ ವೃದ್ಧಿ, ಒಟ್ಟು ವ್ಯವಹಾರದಲ್ಲಿ ರೂ.೨೧೧ ಕೋಟಿಯಾಗಿ ಸಾರ್ವಕಾಲಿಕ ದಾಖಲೆಯ ಹೆಚ್ಚಳದೊಂದಿಗೆ ಶೇ.೧೯ ವಾರ್ಷಿಕ ವೃದ್ಧಿಯೊಂದಿಗೆ ಒಟ್ಟು ವ್ಯವಹಾರವು…

Read More

ಡಿ.ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ’ಸೋಜ ನಿರ್ಮಾಣದಲ್ಲಿ ತಯಾರಾದ ’90 ಎಂಎಲ್’ ತುಳು ಚಲನಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು ‘ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ ಮುಟ್ಟುವ ಕೆಲಸ ಮಾಡಲಿ. ಇಡೀ ಚಿತ್ರತಂಡಕ್ಕೆ ಶುಭವಾಗಲಿ’ ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, ‘ಸಿನಿಮಾದ ಟ್ರೈಲರ್ ನೋಡಿದೆ. ಮಲಯಾಳಂ ಚಿತ್ರದಂತೆ ಇದೆ. ಟೈಟಲ್ ಕೂಡ ಸಖತ್ತಾಗಿದೆ ಎಲ್ಲರಿಗೂ ಶುಭವಾಗಲಿ’ ಎಂದರು. ಲಾಂಚುಲಾಲ್ ಕೆ.ಎಸ್. ಮಾತನಾಡಿ, ’90 ಎಂಎಲ್ ಸಿನಿಮಾ ಟೈಟಲ್ ಡಿಫರೆಂಟ್ ಆಗಿದೆ. ತುಳುವರು ಸಿನಿಮಾ ನೋಡಿದರೆ ಖಂಡಿತ ಸಿನಿಮಾ ಗೆಲ್ಲಲಿದೆ. ಸಿನಿಮಾಕ್ಕೆ ಶುಭ ಹಾರೈಕೆಗಳು’ ಎಂದರು. ನಟ ಅರ್ಜುನ್ ದೇವ್ ಮಾತನಾಡಿ, ’90 ಎಂಎಲ್ ನಿಜ ಜೀವನದಿಂದ ದೂರವಿರಲಿ,…

Read More

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಏಪ್ರಿಲ್ 12 ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಬಹಿರಂಗ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ತಿಳಿಸಿದರು. ನಗರದ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಐಕ್ಯತೆ ಮತ್ತು ಸಾಧಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಸವಣೂರು ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಭಾಗವಹಿಸಲಿದ್ದಾರೆ. ಕೊಡ್ಮಣ್ ಮೋಹನದೇವ್ ಆಳ್ವ ಮತ್ತು ಡಾ. ಎಮ್.ಕೆ ಶೈಲಜಾ ಆಳ್ವ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ವಿವರಿಸಿದರು. ಡಾ. ಕೊಡ್ಮಣ್ ನಾಗಪ್ಪ ಆಳ್ವ ಮತ್ತು ಶ್ರೀಮತಿ ಕಲ್ಯಾಣಿ ಆಳ್ವ…

Read More

ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಬೃಹತ್ ಹೊರೆ ಕಾಣಿಕೆ ನೀಡುವ ಸಂಕಲ್ಪ ಮಾಡಿದ್ದೇವೆ. ಅಮ್ಮನ ಸನ್ನಿಧಾನದಿಂದ 99 ವಾಹನಗಳ ಮೂಲಕ ಹೊರೆಕಾಣಿಕೆಯನ್ನು ಪಡುಬಿದ್ರಿ ಉಳ್ಳಾಯನ ಸನ್ನಿಧಾನಕ್ಕೆ ಸಮರ್ಪಿಸಬೇಕೆನ್ನುವುದು ನಮ್ಮೆಲ್ಲರ ಆಶಯ. ಈ ಹಿಂದೆ ಅಮ್ಮನ ಸನ್ನಿದಾನದಲ್ಲಿ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಡಾ| ಕೆ ಪ್ರಕಾಶ್ ಶೆಟ್ಟಿ ಮತ್ತು ಹೊರೆ ಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷರಾಗಿ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಸೇವೆ ಸಲ್ಲಿಸಿದ್ದು, ಇದೀಗ ಪಡುಬಿದ್ರಿಯಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ನಾವೆಲ್ಲಾ ಅವರ ಜೊತೆಗೂಡಬೇಕಿದೆ ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಹೇಳಿದರು. ಈ ಸಂದರ್ಭ ಮಾತನಾಡಿದ ಕಾಪು ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ನಾನು ಶಾಸಕನಾಗಿರುವುದು ನನ್ನ ಭಾಗ್ಯ. ಕಾಪು ಹೊಸ ಮಾರಿಗುಡಿ ದೇವಸ್ಥಾನ, ನನ್ನೂರಿನ ಕಳತ್ತೂರು ಬ್ರಹ್ಮಬೈದರ್ಕಳ ಗರಡಿ, ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ…

Read More

ದಕ್ಷಿಣ ಕನ್ನಡ ಫಿಸಿಯೋಥೆರಪಿ ಟೀಚರ್ಸ್ ಅಸೋಸಿಯೇಷನ್ ಆಯೋಜಿಸಿದ ಫಿಸಿಯೋ ವೀಕ್ ನ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ ನೀರುಮಾರ್ಗದ ಮಂಗಳಾ ಕಾಲೇಜ್ ಆಫ್ ಫಿಸಿಯೋಥೆರಪಿ ಸಭಾಭವನದಲ್ಲಿ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಕಾರ್ಯಕ್ರಮ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತರಾಮ್ ಶೆಟ್ಟಿ, ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ| ಯು.ಟಿ ಇಫ್ತಿಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳಾ ಸಮೂಹ ವಿದ್ಯಾ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ| ಗಣಪತಿ ಪಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಅನಿತಾ ಉಪಸ್ಥಿತರಿದ್ದರು. ಒಂದು ವಾರ ನಡೆಯಲಿರುವ ಫಿಸಿಯೋ ವೀಕ್ ನ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಮೊದಲ ದಿನ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

Read More

ರೋಟರಿ ಕ್ಲಬ್ ಕಾರ್ಕಳ ಇಲ್ಲಿಗೆ ರೋಟರಿ ಜಿಲ್ಲೆ, 3182 ರ ಜಿಲ್ಲಾ ಗವರ್ನರ್ Mphf ಕೆ. ಪಾಲಾಕ್ಷರವರು ಅಧಿಕೃತ ಭೇಟಿ ನೀಡಿದರು. ಕಾಬೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ರೋಟರಿ ಕ್ಲಬ್ಬಿನ ಅಧ್ಯಕ್ಷ ರೋ. Phf ಕೆ.ನವೀನ್ ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿ ಜಿಲ್ಲಾ ಗವರ್ನರ್ ರೋ. Mphf ಕೆ.ಪಾಲಾಕ್ಷ ರವರು ಮಾತನಾಡುತ್ತಾ, ಕಾರ್ಕಳ ರೋಟರಿ ಕ್ಲಬ್ಬಿನ ಸಮುದಾಯ ಸೇವಾ ಕಾರ್ಯಕ್ರಮಗಳು, ಶಿಕ್ಷಣಕ್ಕೆ ನೀಡುತ್ತಿರುವ ಸೇವೆಗಳು, ಪರಿಸರ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಇದೇ ಸಂದರ್ಭದಲ್ಲಿ ಖ್ಯಾತ ಗುತ್ತಿಗೆದಾರ ಸುಜಯ್ ಕುಮಾರ್ ಶೆಟ್ಟಿ ಮತ್ತು ಚಲನಚಿತ್ರ ನಟ, ನಿರ್ದೇಶಕ ಮತ್ತು ಪ್ರಸಿದ್ಧ ಪ್ರಶಂಸ ನಾಟಕ ತಂಡದ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಇವರನ್ನು ಸನ್ಮಾನಿಸಲಾಯಿತು. ರೋಟರಿ ಗೃಹ ಪತ್ರಿಕೆ “ಸರ್ವಿಸ್”ಅನ್ನು ಗವರ್ನರ್ ಬಿಡುಗಡೆಗೊಳಿಸಿದರು. ಸಹಾಯಕ ಗವರ್ನರ್ ರೋ. Phf ವಿಘ್ನೇಶ್ ಶೆಣೈ, ವಲಯ ಸೇನಾನಿ ರೋ.…

Read More

ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ರಜತ ಪರ್ವದ ಅಂಗವಾಗಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಎರಡು ದಿನಗಳ ಮುಂಬಯಿ ಯಕ್ಷಗಾನ ಸಮ್ಮೇಳನ -2026 ಇದರ ಸಮಾಲೋಚನಾ ಸಭೆಯು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 6ರಂದು ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಪ್ರವೀಣ್ ಭೋಜ ಶೆಟ್ಟಿಯವರನ್ನು ಸರ್ವಾನುಮತದಿಂದ ನೇಮಕ ಮಾಡಲಾಯಿತು. ಸಭೆಯಲ್ಲಿ ಮುಂಬಯಿ ಯಕ್ಷಗಾನ ಸಮ್ಮೇಳನದ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಪ್ರವೀಣ್ ಬಿ ಶೆಟ್ಟಿ ಅವರು, ‘ಒಂದು ಕಲಾ ಸಂಘಟನೆ ಮರಾಠಿ ಮಣ್ಣಿನಲ್ಲಿ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವುದೆಂದರೆ ಸಾಮಾನ್ಯ ವಿಷಯವಲ್ಲ. ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ಕಳೆದ 25 ವರ್ಷಗಳಿಂದ ಊರಿನ ಕಲಾವಿದರನ್ನು ಆಹ್ವಾನಿಸಿ ಮಹಾನಗರದಲ್ಲಿ ಸರಣಿ ಯಕ್ಷಗಾನ ತಾಳಮದ್ದಳೆ ಕೂಟ ಮತ್ತು ಯಕ್ಷಗಾನ ಬಯಲಾಟ ಪ್ರದರ್ಶನಗಳನ್ನು ನಿರಂತರವಾಗಿ ಆಯೋಜಿಸುತ್ತ ಬಂದವರು. ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡು ವುದರೊಂದಿಗೆ, ಸಾಧಕ ಕಲಾವಿದರನ್ನು ಗುರುತಿಸಿ ಅವರಿಗೆ ‘ಯಕ್ಷಾರಕ್ಷಾ ಪ್ರಶಸ್ತಿ’ಯನ್ನು…

Read More

ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಕಳೆದ ಮೂರು ವರ್ಷದ ನಮ್ಮ ಶ್ರಮ ಮತ್ತು ಸಾಧನೆಗಳನ್ನು ಸ್ಮರಿಸುವ ಅರ್ಥಪೂರ್ಣ ವೇದಿಕೆಯಾಗಿದೆ. ನಮ್ಮ ಸಮಿತಿಯ ಎಲ್ಲಾ ಸದಸ್ಯರ ಸಮರ್ಪಣೆ ಮತ್ತು ತಂಡದ ಒಗ್ಗಟ್ಟು ನಮಗೆ ಕ್ರೀಡೆ ಹಾಗೂ ಮತ್ತಿತರ ಎಲ್ಲಾ ವಿಭಾಗಗಳಲ್ಲಿ ಯಶಸ್ಸು ಸಿಗಲು ಸಾಧ್ಯವಾಯಿತು. ಪ್ರತಿಯೊಬ್ಬರ ಸಹಕಾರದಿಂದಲೇ ನಾವು ಈ ಮಟ್ಟದ ಯಶಸ್ಸನ್ನು ಸಾಧಿಸಿದ್ದೇವೆ. ನಮ್ಮ ಯುವ ವಿಭಾಗ, ಮಹಿಳಾ ವಿಭಾಗ ಸದಾ ಕ್ರಿಯಾಶೀಲವಾಗಿದೆ. ನಮ್ಮ ಸಂಸ್ಥೆಯಲ್ಲಿ ದೊಡ್ಡ ದೊಡ್ಡ ಉದ್ಯಮಿಗಳ, ಸಮಾಜ ಸೇವಕರ ಸಂಪೂರ್ಣ ಸಹಕಾರ ಸಿಗುತ್ತಿರುವುದರಿಂದ ನಮ್ಮ ಸಂಸ್ಥೆ ಎತ್ತರೆತ್ತರಕ್ಕೆ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸಲು ನಾವು ಇದೇ ರೀತಿಯ ಏಕತೆ, ನಿಷ್ಠೆ ಮತ್ತು ಶ್ರದ್ಧೆಯನ್ನು ಮುಂದುವರಿಸಬೇಕು ಎಂದು ಬಂಟರ ಸಂಘ ಮುಂಬಯಿಯ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಸೂರಜ್ ಶೆಟ್ಟಿ ಅವರು ಅಭಿಪ್ರಾಯ ಪಟ್ಟರು. ಅವರು ಏಪ್ರಿಲ್ 3ರಂದು ಸಾಕಿವಿಹಾರ್ ರೋಡ್ ವಿಂಡ್ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ನೇಹ…

Read More

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ ಮತ್ತು ನಿಟ್ಟೆ ಪರಿಗಣಿತ ವಿ.ವಿ ಸಹಯೋಗದಲ್ಲಿ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ವಿಶ್ವ ಆರೋಗ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಕೆಎಂಸಿ ಆಸ್ಪತ್ರೆಯ ಸ್ತ್ರೀರೋಗಶಾಸ್ತ್ರ ತಜ್ಞೆ ಡಾ. ಶ್ರದ್ಧಾ ಶೆಟ್ಟಿ ಮಾತನಾಡಿ, ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆ ಕೂಡಾ ಆರಂಭಿಕ ಹಂತದಲ್ಲಿಯೇ ಪತ್ತೆಯಾದರೆ ಪರಿಣಾಮಕಾರಿ ಚಿಕಿತ್ಸೆ ನೀಡಿ ಜೀವ ಉಳಿಸಬಹುದು. ಮುಂಜಾಗ್ರತಾ ಕ್ರಮ ನಿಯಮಿತ ತಪಾಸಣೆ ರೋಗ ತಡೆಗಟ್ಟುವ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯ ರಕ್ಷಣೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುವುದು ಅಗತ್ಯ ಎಂದರು. ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಬಿ ಸಚ್ಚಿದಾನಂದ ರೈ, ಖಾಜಾಂಚಿ ಗುರುದತ್ ನಾಯಕ್, ನಿರ್ದೇಶಕರಾದ ಡಾ. ಸತೀಶ್ ರಾವ್, ಪಿ.ಬಿ ಹರೀಶ್…

Read More

ಮಹಾರಾಷ್ಟ್ರದ ಪುಣೆಯ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಪುಣೆಯ ಸಮಾಜ ಸೇವಕ ಶಿರ್ವ ಪಂಜಿಮಾರು ದೊಡ್ಡಮನೆ ಜಗದೀಶ್ ಬಿ. ಶೆಟ್ಟಿಯವರು 2026 -28 ರ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ​ಪುಣೆ ತುಳು-ಕನ್ನಡಿಗರ ವಲಯದಲ್ಲಿ ಅತ್ಯಂತ ಪ್ರೀತಿಯ ವ್ಯಕ್ತಿಯಾಗಿರುವ ಜಗದೀಶ್ ಶೆಟ್ಟಿ ಅವರು ‘ಎಲ್.ಐ.ಸಿ ಜಗ್ಗಣ್ಣೆ’ ಎಂದೇ ಮನೆಮಾತಾದವರು. ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿಯಾಗಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಇವರು, ತಮ್ಮ ಮೃದು ಸ್ವಭಾವ ಹಾಗೂ ಜನಪರ ಕಾಳಜಿಯಿಂದಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ​ ಭಾರತೀಯ ಜೀವವಿಮಾ ನಿಗಮದಲ್ಲಿ (LIC) ಸುದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿರುವ ಇವರು, ತಮ್ಮ ಕಠಿಣ ಪರಿಶ್ರಮದ ಫಲವಾಗಿ ಸತತವಾಗಿ ಅಂತರಾಷ್ಟ್ರೀಯ ಮಟ್ಟದ ‘ಮಿಲಿಯನ್ ಡಾಲರ್ ರೌಂಡ್ ಟೇಬಲ್ ಕಾನ್ಫರೆನ್ಸ್’ (MDRT – USA) ಗೆ ಆಯ್ಕೆಯಾಗುವ ಮೂಲಕ ವಿಮಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ.…

Read More