Author: admin

ಎಲ್ಲರ ಪ್ರೀತಿಗೆ ಪಾತ್ರರಾಗಿ ಸಮಾಜದ ಸಂಘಟನೆಗೆ ಎಲ್ಲರೂ ಒಗ್ಗಟ್ಟಾಗಿ ಹೋಗುವ ನಾಯಕತ್ವವಿರುವ ಇಲ್ಲಿನ ಬಂಟರ ಸಂಘವು ಎಲ್ಲಾ ಬಂಟರ ಸಂಘಕ್ಕೆ ಮಾದರಿ ಎಂದು ಬೆಂಗಳೂರಿನ ಎಂ.ಆರ್.ಜಿ ಗ್ರೂಪ್ ನ ಸಿಎಂಡಿ ಡಾ| ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಬಜಪೆಯ ತಾರಿಕಂಬಳದ ಮುಂಡಾರಿನಲ್ಲಿ ಬಂಟರ ಸಂಘ ಬಜಪೆ ವಲಯದ 10 ಕೋಟಿ ರೂಪಾಯಿ ವೆಚ್ಚದ ನೂತನ ಬಂಟರ ಭವನದ ಶಿಲಾನ್ಯಾಸ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿ.ಕೆ ಗ್ರೂಪ್ ಆಫ್ ಕಂಪನೀಸ್ ನ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರು ಕಟ್ಟಡದ ನೀಲನಕ್ಷೆ ಅನಾವರಣಗೊಳಿಸಿದರು. ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರು ಗುತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗೈದರು. ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನ ಛೇರ್ಮನ್ ಉಪೇಂದ್ರ ಶೆಟ್ಟಿ ವಿದ್ಯಾರ್ಥಿ…

Read More

ಇವತ್ತಿನ ದಿನ ನನ್ನ ಜೀವನದ ಸೌಭಾಗ್ಯ ದಿನವಾಗಿದೆ. ನನ್ನ ಹಸ್ತಗಳಿಂದ ಪಾವಿತ್ರ್ಯತೆಯ ದೇವಸ್ಥಾನಕ್ಕೆ ಶಿಲಾನ್ಯಾಸ ನಡೆಸಿದ್ದು ನನ್ನ ಪುಣ್ಯ ಎಂದೆಣಿಸಿದ್ದೇನೆ. ಸನಾತನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೈಗೊಪ್ಪಿಸಲು ಇಂತಹ ಪಾವನ ಕ್ಷೇತ್ರಗಳ ಜೀರ್ಣೊದ್ಧಾರದ ಕಾರ್ಯಗಳು ಅಗತ್ಯವಾಗಿವೆ. ನನಗೆ ಇಲ್ಲಿ ಭಗವಂತನೂ, ಭ್ರಮರಾಂಭಿಕೆಯೇ ಕರೆದು ತಂದಂತಿದೆ. ಕಾರಣ ಶ್ರೀ ಕ್ಷೇತ್ರ ಕಟೀಲು ಭೇಟಿ ನೀಡಿ ದರ್ಶನ ಪಡೆದಿದ್ದೇನೆ. ನಾವು ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ. ಧರ್ಮವನ್ನು ಉಳಿಸಲು ಮಠ ಮಂದಿರಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಈ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭ ನನ್ನ ತಂದೆಯೂ ಮಹಾರಾಷ್ಟ್ರ ಸರ್ಕಾರದ ಮಾಜಿ ಮುಖ್ಯಮಂತ್ರಿ (ಹಾಲಿ ಉಪಮುಖ್ಯಮಂತ್ರಿ) ಏಕನಾಥ್ ಶಿಂಧೆ ಅವರನ್ನು ಕರೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಮಹಾರಾಷ್ಟ್ರ ರಾಜ್ಯದ ಕಲ್ಯಾಣ್ ಲೋಕಸಭಾ ಸಂಸದ ಡಾ. ಶ್ರೀಕಾಂತ್ ಏಕನಾಥ ಶಿಂಧೆ ನುಡಿದರು. ಕಳೆದ ಗುರುವಾರ (ಜು.೦೨) ಮಂಗಳೂರು ಮೂಡುಶೆಡ್ಡೆ ಅಲ್ಲಿನ ಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದ್ದು, ಸಂಸದ…

Read More

ತುಳುನಾಡಿನ ಕಾಲಜ್ಞಾನವು ಕೇವಲ ತಿಂಗಳುಗಳ ಲೆಕ್ಕಾಚಾರವಲ್ಲ. ಅದು ಪ್ರಕೃತಿ, ಕೃಷಿ, ಆಹಾರ, ಆರೋಗ್ಯ ಮತ್ತು ಮಾನವ ಜೀವನಶೈಲಿಯನ್ನು ಒಂದೇ ವ್ಯವಸ್ಥೆಯಾಗಿ ನೋಡುವ ಜೀವನದರ್ಶನವಾಗಿದೆ. ಈ ವ್ಯವಸ್ಥೆಯಲ್ಲಿ ಆಟಿ ಮತ್ತು ಸೋಣ ಎರಡು ಪ್ರಮುಖ ಅಧ್ಯಾಯಗಳಾಗಿವೆ. ಒಂದು ದೇಹವನ್ನು ಪ್ರಕೃತಿಯೊಂದಿಗೆ ಹೊಂದಿಸಿಕೊಳ್ಳುವ ಕಾಲವಾದರೆ, ಇನ್ನೊಂದು ದೇಹಕ್ಕೆ ಹೊಸ ಶಕ್ತಿ ಮತ್ತು ಸಮೃದ್ಧಿಯನ್ನು ತುಂಬುವ ಕಾಲವಾಗಿದೆ. ಮಲಯಾಳದಲ್ಲಿ ಇದೇ ತಿಂಗಳನ್ನು ಕರ್ಕಟಕಂ ಮತ್ತು ಚಿಂಗಂ ಎಂದು ಕರೆಯುತ್ತಾರೆ. ತುಳುನಾಡಿನ ಆಟಿ ಮತ್ತು ಕೇರಳದ ಕರ್ಕಟಕಂ ಒಂದೇ ಸೌರ ಮಾಸವಾಗಿದ್ದು, ಎರಡೂ ಪ್ರದೇಶಗಳಲ್ಲಿ ಇದನ್ನು ಋತುಬದಲಾವಣೆಗೆ ಹೊಂದಿಕೊಳ್ಳುವ ಅವಧಿಯಾಗಿ ಪರಿಗಣಿಸಲಾಗಿದೆ. ತುಳುನಾಡಿನಲ್ಲಿ ಆಟಿ ಗಂಜಿ, ಆಟಿ ಕಷಾಯ ಮತ್ತು ಋತುಸಹಜ ಸೊಪ್ಪುಗಳಿಗೆ ಮಹತ್ವವಿದ್ದರೆ, ಕೇರಳದಲ್ಲಿ ಕರ್ಕಟಕ ಗಂಜಿ ಮತ್ತು ಆಯುರ್ವೇದದ ಋತುಚರ್ಯೆ ಬೆಳವಣಿಗೆಯಾಯಿತು. ದಕ್ಷಿಣ ಪಶ್ಚಿಮ ಮಾರುತ ಮಳೆಯ ಸಮಯದಲ್ಲಿ ಪ್ರಕೃತಿಯಲ್ಲಿ ಮಹತ್ತರ ಬದಲಾವಣೆಗಳು ನಡೆಯುತ್ತವೆ. ಇದೇ ಅವಧಿಯಲ್ಲಿ ಖಗೋಳಶಾಸ್ತ್ರದ ಪ್ರಕಾರ ಭೂಮಿಯು ತನ್ನ ಕಕ್ಷೆಯಲ್ಲಿ ಸೂರ್ಯನಿಂದ ಅತ್ಯಂತ ದೂರದ ಸ್ಥಾನವಾದ ಅಪ್ಹೀಲಿಯನ್ (Aphelion) ಸಮೀಪದಲ್ಲಿರುತ್ತದೆ.…

Read More

ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸುಧೀಕ್ಷಾ ಎಸ್ ಶೆಟ್ಟಿ (290) ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಿಎ ಫೌಂಡೇಶನ್‌ ನಿಂದ ಸಿಎ ಇಂಟರ್‌ಮೀಡಿಯೇಟ್ ಹಾಗೂ ಸಿಎ ಫೈನಲ್‌ವರೆಗೆ ನಿರಂತರ ಮತ್ತು ಸಮಗ್ರ ತರಬೇತಿ ವ್ಯವಸ್ಥೆ ರೂಪಿಸಲಾಗಿದೆ. ದೇಶದ ವಿವಿಧ ಭಾಗಗಳ ಅನುಭವಿ ಹಾಗೂ ಪರಿಣತ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವಿಷಯ ತಜ್ಞರಿಂದ ಗುಣಮಟ್ಟದ ಬೋಧನೆ, ನಿಯಮಿತ ಮೌಲ್ಯಮಾಪನ, ವೈಯಕ್ತಿಕ ಮಾರ್ಗದರ್ಶನ ಹಾಗೂ ಪರಿಕಲ್ಪನಾ ಆಧಾರಿತ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ. ಈ ಶೈಕ್ಷಣಿಕ ಮಾದರಿಯೇ ವಿದ್ಯಾರ್ಥಿಗಳ ನಿರಂತರ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ ಎಂದು ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ವಾಣಿಜ್ಯ ವಿಭಾಗದ ಡೀನ್ ಅಭಿನಂದಿಸಿದ್ದಾರೆ.

Read More

2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಪುತ್ತೂರು ವಲಯದ ಸಂಚಾಲಕರಾಗಿ ಮನೋಹರ ರೈ ಅವರನ್ನು ನೇಮಕ ಮಾಡಲಾಗಿದೆ. ಮನೋಹರ ರೈ ಅವರು ಪ್ರಸ್ತುತ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮಂಗಳೂರು ಇಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು ತಾಯ್ನಾಡಿನ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕ ವಿಶ್ವನಾಥ ಆಚಾರ್ಯ ಪೆರ್ಡೂರು ಅವರು ಪುತ್ತೂರು ವಲಯ ಸಂಚಾಲಕರಾಗಿ ನೇಮಕಗೊಳಿಸಿದ್ದಾರೆ. 2028ರ ಶತಮಾನೋತ್ಸವದ ಅಂಗವಾಗಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ, ತುಳುವ ನಾಗರಿಕತೆಯ ವೈಭವವನ್ನು ಮರು ಸ್ಥಾಪಿಸುವುದು, ತುಳು ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ ದೊರಕಿಸುವ…

Read More

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಉದ್ಯಮಿ ಕೆದೂರು ಸದಾನಂದ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ನೇಮಕಗೊಳಿಸಿ ಆದೇಶಿದ್ದಾರೆ. ಕೆದೂರು ಸದಾನಂದ ಶೆಟ್ಟಿಯವರು ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026 -28ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನ್ ನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಸಂಘದ ಪಥ ಹಾಗೂ ಸಾಧನೆಗಳ ಕುರಿತು ಸತೀಶ್ ಪೂಜಾರಿ ಅವರು ಮಾಹಿತಿ ನೀಡಿದರು. ಬಳಿಕ ಸಂಘದ ಬೈಲಾ ಕುರಿತು ಗಣೇಶ್ ರೈ ಅವರು ಸದಸ್ಯರಿಗೆ ವಿವರಿಸಿದರು. ನಂತರ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪರಿಚಯ ನಡೆಯಿತು. ಕರ್ನಾಟಕ ಸಂಘ ಶಾರ್ಜಾದ ಪೂರ್ವಾಧ್ಯಕ್ಷ ಗಣೇಶ್ ರೈಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಅಧಿಕೃತವಾಗಿ ಪದಗ್ರಹಣ ಪ್ರಮಾಣ ವಚನ ಬೋಧಿಸಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಅವರು ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಸಂಘದ ಅಭಿವೃದ್ಧಿ, ಕನ್ನಡ ಭಾಷೆ ಮತ್ತು…

Read More

ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ನಿಹಾರಿಕಾ ಜೆ ಶೆಟ್ಟಿ (231) ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಿಎ ಫೌಂಡೇಶನ್‌ ನಿಂದ ಸಿಎ ಇಂಟರ್‌ಮೀಡಿಯೇಟ್ ಹಾಗೂ ಸಿಎ ಫೈನಲ್‌ವರೆಗೆ ನಿರಂತರ ಮತ್ತು ಸಮಗ್ರ ತರಬೇತಿ ವ್ಯವಸ್ಥೆ ರೂಪಿಸಲಾಗಿದೆ. ದೇಶದ ವಿವಿಧ ಭಾಗಗಳ ಅನುಭವಿ ಹಾಗೂ ಪರಿಣತ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವಿಷಯ ತಜ್ಞರಿಂದ ಗುಣಮಟ್ಟದ ಬೋಧನೆ, ನಿಯಮಿತ ಮೌಲ್ಯಮಾಪನ, ವೈಯಕ್ತಿಕ ಮಾರ್ಗದರ್ಶನ ಹಾಗೂ ಪರಿಕಲ್ಪನಾ ಆಧಾರಿತ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ. ಈ ಶೈಕ್ಷಣಿಕ ಮಾದರಿಯೇ ವಿದ್ಯಾರ್ಥಿಗಳ ನಿರಂತರ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ ಎಂದು ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ.

Read More

ಭಕ್ತಿಯ ಶಿಖರ, ನಂಬಿಕೆಯ ನೆಲೆ, ಶಕ್ತಿಯ ಸಂಕೇತ, ಸಂಸ್ಕೃತಿಯ ಸಿರಿತನ ಹಾಗೂ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ವೈಭವವನ್ನು ಸಾರುವ ಪವಿತ್ರ ಕ್ಷೇತ್ರವೇ ಶ್ರೀ ಕ್ಷೇತ್ರ ಮಂದಾರ್ತಿ. ಮಂದಾರ್ತಿ ಕೇವಲ ಒಂದು ದೇವಾಲಯವಲ್ಲ. ಅದು ಭಕ್ತಿಯ ಅನುಭವ, ಶಕ್ತಿಯ ಆರಾಧನೆ, ಸಂಸ್ಕೃತಿಯ ಸಂರಕ್ಷಣೆ ಮತ್ತು ಕರಾವಳಿ ಜನರ ಜೀವನದ ಅವಿಭಾಜ್ಯ ಅಂಗವಾಗಿ ಶತಮಾನಗಳಿಂದ ಬೆಳಗುತ್ತಿರುವ ದಿವ್ಯ ಶಕ್ತಿಪೀಠವಾಗಿದೆ. ಇಂತಹ ಶ್ರೀ ದುರ್ಗೆಯ ಪದತಲದಲ್ಲಿ ಜನಿಸಿ ಬೆಳೆದ ಅಮರನಾಥ ಶೆಟ್ಟಿ ಹೆಗ್ಗುಂಜೆಯವರು 2026 –29ನೇ ಸಾಲಿನ ಅವಧಿಗೆ ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು ಅಣಿಯಾಗಿದ್ದಾರೆ. ಅಮರನಾಥ ಶೆಟ್ಟಿಯವರು 2014 -16 ಹಾಗೂ 2016 -18 ರವರೆಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಮಾಜಸೇವಾ ಸಮಿತಿಯ ಕಾರ್ಯಾಧ್ಯಕ್ಷರಾಗಿ ವಿದ್ಯಾರ್ಥಿವೇತನ ಸಮಿತಿಯ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿ, 2022 ರಿಂದ 2024 ರವರೆಗೆ ಖಜಾಂಚಿಯಾಗಿ ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ನಿಷ್ಪಕ್ಷಪಾತತೆಯಿಂದ ಕಾರ್ಯ ನಿರ್ವಹಿಸಿ ಸದಸ್ಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಬಂಟರ…

Read More

ಹೊಸದಿಲ್ಲಿಯ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಎಚ್ ಪೆರ್ಗಡೆ ಅವರು ಒಟ್ಟು 406 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ 47 ನೇ ರ‍್ಯಾಂಕ್ ಪಡೆದಿದ್ದಾರೆ. ಬಂಟ್ವಾಳ ಪರಂಗಿಪೇಟೆ ಮೇರೆಮಜಲು ಎಂಬಲ್ಲಿ ಅಸಹಾಯಕ, ಅನಾಥ, ನಿರ್ಲಕ್ಷಿತ ಮಂದಿಯ ಸೇವೆಯಲ್ಲಿ, ‘ಶ್ರೀ ಮಾತಾ ಲಕ್ಷಣಿ ಆಶ್ರಯ ಧಾಮ’ ಸಂಸ್ಥೆಯ ಮೂಲಕ ಸಮಾಜಮುಖಿಯಾಗಿ ಪ್ರಸ್ತುತ ಪಡಿಸಿಕೊಂಡಿರುವ ಕಾಂತಾಡಿಗುತ್ತು ಹರೀಶ್ ಪೆರ್ಗಡೆ ಮತ್ತು ಶಶಿಕಲಾ ಪೆರ್ಗಡೆ ದಂಪತಿಯ ಪುತ್ರರಾದ ಇವರು ಪ್ರತಿಭಾವಂತ ಸಾಧಕ. ಸಿಎ ಫೌಂಡೇಶನ್ ಮತ್ತು ಸಿಎ ಇಂಟರ್ ಮೀಡಿಯೆಟ್ ತರಬೇತಿ ಜೊತೆಗೆ ಪದವಿ ಶಿಕ್ಷಣವನ್ನು ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ಪಡೆದಿದ್ದಾರೆ. ಆರ್ಟಿಕಲ್ ಶಿಪ್ ಅನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕ ಸಂಸ್ಥೆ ಗಣೇಶ ಮತ್ತು ಸುಧೀರ್ ಅವರಲ್ಲಿ ಪೂರೈಸಿದ್ದಾರೆ.

Read More