Author: admin
ಬಂಟರ ಸಂಘ ಮುಂಬಯಿ ಇದರ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ವತಿಯಿಂದ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರಿಗೆ ಗುರುವಂದನೆಯನ್ನು ಜೂನ್ 28 ರಂದು ಬಂಟರ ಭವನದ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟರ ಸಂಘ ಮುಂಬಯಿಯ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ಇನ್ನಾ ಮಾತನಾಡುತ್ತಾ, ಗುರುವಿನ ಗುರುವಂದನೆ ಶಿಷ್ಯನಿಗೆ ಸಾವಿರ ಯಶಸ್ಸಿನ ಮಾರ್ಗವನ್ನು ತೋರಿಸುತ್ತದೆ. ಆದ್ದರಿಂದ ಇವತ್ತಿನ ದಿವಸ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ 15ನೇ ವರ್ಷದ ವಾರ್ಷಿಕೋತ್ಸವದ ಪರವಾಗಿ ಹಮ್ಮಿಕೊಳ್ಳಲಾದ ‘ಅಮರಶಿಲ್ಪಿ ವೀರ ಶಂಭು ಕಲ್ಕುಡ’ ಎನ್ನುವ ಯಕ್ಷಗಾನ ನಿರ್ದೇಶನ ಮಾಡಿ ಎಲ್ಲಾ ಕುರ್ಲಾ ಭಾಂಡೂಪ್ ನ ಹವ್ಯಾಸಿ ಕಲಾವಿದರಿಗೆ ಈ ಪ್ರಸಂಗವನ್ನು ಕಲಿಸಿ ಯಶಸ್ವಿಯಾಗಿ ಯಕ್ಷಗಾನ ಪ್ರದರ್ಶನವನ್ನು ಮಾಡಿಸಿದ್ದಾರೆ. ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿದ್ದು, ಎಲ್ಲರ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದೆಷ್ಟೋ ಕಲಾವಿದರು ಮೊದಲ ಬಾರಿ ವೇಷ ಹಾಕಿದರೂ ಕೂಡ ಅವರನ್ನು ಸಮರ್ಪಕವಾಗಿ ತಯಾರು ಮಾಡಿದಂತಹ ಹೆಗ್ಗಳಿಕೆ ಗುರುವಿಗೆ ಸಲ್ಲುತ್ತದೆ. ಅದಕ್ಕಾಗಿ ವಿಶೇಷವಾಗಿ…
ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲ್ಯಸುಧಾ ಕಾರ್ಯಕ್ರಮದ ೫೦ನೇ ಮಾಲಿಕೆಯ ಸುವರ್ಣ ಸಂಭ್ರಮವು ಜುಲೈ ೧೧ರ ಶನಿವಾರದಂದು ಸಂಜೆ ೦೬:೧೫ಕ್ಕೆ ನಡೆಯಲಿದೆ. ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕçತ ‘ರಾಷ್ಟçದೇವೋಭವ’ ಖ್ಯಾತಿಯ ಸನಾತನ ನಾಟ್ಯಾಲಯ, ಮಂಗಳೂರು ಇವರಿಂದ “ಸನಾತನ ರಾಷ್ಟ್ರಾಂಜಲಿ” ಎಂಬ ವಿಶೇಷ ಕಾರ್ಯಕ್ರಮವು ಪ್ರಸ್ತುತಗೊಳ್ಳಲಿದೆ. ಕಲಾಸಕ್ತರೂ ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಗಣೇಶೋತ್ಸವ ಓಂಕಾರನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ನಡೆಯುವ ಗಣೇಶೋತ್ಸವ ಆಚರಣೆಯ ಪ್ರಯುಕ್ತ ಜುಲೈ 15 ರಂದು ಬುಧವಾರ ಬೆಳಿಗ್ಗೆ 7.30 ಕ್ಕೆ ಮಂಗಳೂರು ಶರವು ದೇವಸ್ಥಾನದ ಹತ್ತಿರವಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ (ಬಾಲಮ್ ಭಟ್ ರವರ ಮನೆ) ಗಣಪತಿ ವಿಗ್ರಹದ ಮುಹೂರ್ತ ನಡೆಯಲಿದೆ. ಸಮಾಜ ಬಾಂಧವರೆಲ್ಲರೂ ಆಗಮಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಸಿದ್ದಿವಿನಾಯಕ ಪ್ರತಿಷ್ಠಾನ (ರಿ) ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಗೋವಾ ರಾಜ್ಯ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳುಕೂಟ ಗೋವಾದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಇರ್ವತ್ತೂರು ಅವರನ್ನು ನೇಮಕ ಮಾಡಲಾಗಿದೆ. ಗಣೇಶ್ ಶೆಟ್ಟಿ ಇರ್ವತ್ತೂರು ಅವರು ಹಲವು ವರ್ಷಗಳಿಂದ ಗೋವಾದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ತುಳುಕೂಟ ಗೋವಾ ಅಧ್ಯಕ್ಷರಾಗಿ ಅನೇಕ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿ, ಗೋವಾದ ತುಳುವರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗಣೇಶ್ ಶೆಟ್ಟಿಯವರ ಸಮಾಜಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ರಾಜ್ಯ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಅವರು ಗೋವಾ…
ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಮಾಡಂದೂರು ನಿವಾಸಿ ಪ್ರಶಾಂತ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಸುಪುತ್ರ ತೀರ್ಥೇಶ್ ಶೆಟ್ಟಿಯವರ ಸಾಧನೆಯ ಮುಕುಟಕ್ಕೆ ಹೊಸ ಗರಿ ಸೇರಿಕೊಂಡಿದೆ. ಚೀನಾದಲ್ಲಿ ನಡೆದ ಏಷ್ಯನ್ ರಿಲೇ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕ್ರೀಡಾ ಕೂಟದ ಮಿಶ್ರ ರಿಲೇ ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ರಜತ ಪ್ರಶಸ್ತಿ ವಿಜೇತರಾಗಿದ್ದಾರೆ. ಜೆ.ಎಸ್.ಡಬ್ಲ್ಯೂ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ ಪ್ರಸ್ತುತ ಇಂಡಿಯನ್ ಕ್ಯಾಂಪ್ ನಲ್ಲಿ ತರಬೇತಿ ಪಡೆಯುತ್ತಿರುವ ತೀರ್ಥೇಶ್ ಮುಂದಿನ ದಿನಗಳಲ್ಲಿ ತನ್ನದೇ ದಾಖಲೆಗಳನ್ನು ಮುರಿದು ಮುನ್ನುಗ್ಗಿ ವಿಶ್ವದಾಖಲೆಯನ್ನು ನಿರ್ಮಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಬೋಟ್ಸ್ವಾನಾದ ವಿಶ್ವ ರಿಲೇಸ್ ಆಯೋಜನೆಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಶೇಷ ಅನುಭವ ಹೊಂದಿದ ಇವರು ಸಾಧನೆಯ ಹಾದಿಯಲ್ಲಿ ಹಿಂದಿರುಗಿ ನೋಡಲಿಲ್ಲ. ಒಂದರ ಮೇಲೊಂದು ರಾಷ್ಟ್ರೀಯ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಅನೇಕ ಪ್ರಶಸ್ತಿ ಪತ್ರಗಳನ್ನು ಪಡೆದ ಹೆಗ್ಗಳಿಕೆ ಇವರದ್ದು. ವಿಶ್ವ ವಿದ್ಯಾಲಯ ಮಟ್ಟದಿಂದ ವಿಶ್ವ ಮಟ್ಟಕ್ಕೆ ಏರಿದ ಇವರು ಸದಾ ಪ್ರಯತ್ನ ಶೀಲರು. ಮುಂಬರುವ ಏಷ್ಯನ್ ಮತ್ತು ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ…
ಪ್ರತಿಷ್ಠಿತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ರಾಷ್ಟ್ರೀಯ ಉಪ ಕಮಿಷನರ್ ಆಗಿ ನೇಮಕಗೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಯುವ ಬಂಟರ ಸಂಘ ಮೂಡುಬಿದಿರೆಯ ಗೌರವಾಧ್ಯಕ್ಷರಾದ ವಿವೇಕ್ ಆಳ್ವ ಅವರನ್ನು ಸಂಘದ ವತಿಯಿಂದ ಅಭಿನಂದಿಸಿ ಶುಭ ಹಾರೈಸಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಬೆಳುವಾಯಿ, ಉಪಾಧ್ಯಕ್ಷ ಸಂದೀಪ್ ಎಂ ಶೆಟ್ಟಿ ತೋಡಾರು, ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಮಿಜಾರು, ಕೋಶಾಧಿಕಾರಿ ಭರತ್ ಶೆಟ್ಟಿ ಇರುವೈಲು, ಜೊತೆ ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಧನಂಜಯ ಹಾಗೂ ಆಳ್ವಾಸ್ ಸಂಸ್ಥೆಯ ತಿಲಕ್ ಉಪಸ್ಥಿತರಿದ್ದರು
ಬಂಟರ ಸಂಘ ಹೈದರಾಬಾದ್ ವತಿಯಿಂದ ಬಂಟ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜುಲೈ 5 ರಂದು ಸಂಜೆ 6 ಗಂಟೆಗೆ ಹೈದರಾಬಾದ್ ಲಕ್ಡಿಕಪುಲ್ ನಲ್ಲಿರುವ ಹೋಟೆಲ್ ಅಬೋಡೆಯಲ್ಲಿ ಸಂಘದ ಅಧ್ಯಕ್ಷ ಎಚ್ ಚಂದ್ರಶೇಖರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ಶಿರೂರು ಶಂಕರ್ ಶೆಟ್ಟಿ ಹಾಗೂ ಮುಖ್ಯ ಅತಿಥಿ ಕುಂದಾಪುರ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಹಿರಿಯ ಉದ್ಯಮಿ, ಸಮಾಜ ಸೇವಕರಾದ ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ರತ್ನಾಕರ ರೈ ಹಾಗೂ ಗೀತಾ ರೈ ದಂಪತಿಗಳನ್ನು ಹಾಗೂ ಮುಖ್ಯ ಅತಿಥಿ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಿದರು. ಘನ ವೇದಿಕೆಯಲ್ಲಿ ಅಧ್ಯಕ್ಷರಾದ ಎಚ್ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷ ಅಲ್ತಾರು ಜಯರಾಮ್ ಶೆಟ್ಟಿ, ಉಪಾಧ್ಯಕ್ಷೆ ಮಮತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿತಾ ಪಿ ಶೆಟ್ಟಿ, ಕೋಶಾಧಿಕಾರಿ ರವಿ…
ಸೂರಿ ಮಾರ್ನಾಡ್ ಎಂದೇ ಖ್ಯಾತರಾಗಿರುವ ಪಡು ಮಾರ್ನಾಡಿನ ಸುರೇಂದ್ರ ಶೆಟ್ಟಿ ಮಾರ್ನಾಡುರವರು ‘ಕರ್ನಾಟಕ ಸಂಘ ಅಂಧೇರಿ’ ಇವರು ನೀಡುವ ‘ಶ್ರೇಷ್ಠ ಹೊರನಾಡ ಕನ್ನಡಿಗ’ ಪ್ರಶಸ್ತಿಗೆ ಆಯ್ಕೆಯಾಗಿ ಪ್ರಶಸ್ತಿ ಪಡೆದಿದ್ದಾರೆ. ಅಮನೊಟ್ಟು ಮಹಾವೀರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಜೈನ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪಡೆದ ಬಳಿಕ ಮುಂಬಯಿಯತ್ತ ತೆರಳಿದ ಅವರು ಉಳಿದ ವಿದ್ಯಾಭ್ಯಾಸವನ್ನು ಮುಂಬಯಿಯಲ್ಲಿ ಪೂರೈಸಿದರು. ಕಲಾವಿದರಾಗಿ, ನಿರ್ದೇಶಕರಾಗಿ, ಕಲಾ ಪೋಷಕರಾಗಿ ಸಾಕಷ್ಟು ಕಲಾ ಕಾರ್ಯಕ್ರಮಗಳನ್ನು ಸಂಘಟಿಸಿರುವ ಸೂರಿ ಮಾರ್ನಾಡು ಅವರ ಕಲಾ ಸೇವೆಯನ್ನು ಗುರುತಿಸಿ ಅಂಧೇರಿಯ ಕರ್ನಾಟಕ ಸಂಘವು ಈ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಈ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಪಡು ಮಾರ್ನಾಡು ಮೂಡುಬಿದಿರೆಗೆ ಕೀರ್ತಿ ತಂದಿರುವ ಸೂರಿ ಮಾರ್ನಾಡು ಅವರಿಗೆ ಅವರ ಸನ್ಮಿತ್ರ ರಮೇಶ್ ಶೆಟ್ಟಿ ಪಡು ಮಾರ್ನಾಡು ಅವರು ಅಭಿನಂದನೆ ಸಲ್ಲಿಸಿದ್ದಾರೆ.
ದೇರಳಕಟ್ಟೆ ಸಮೀಪ ಪೆಲತ್ತಡಿಯಲ್ಲಿರುವ ಅನಾಥ ಹೆಂಗಳೆಯರ ಸೇವಾಶ್ರಮದಲ್ಲಿ ಅಲ್ಲಿಯ ನಿವಾಸಿಗಳಿಗೆ ಮನರಂಜನೆ ನೀಡುವ ಸಲುವಾಗಿ ಜೂನ್ 28 ರಂದು ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು. ಪ್ರವೀಣ್ ರೈ ಎಲಿಯಾರ್ ಪದವು ಮತ್ತು ಬಳಗದವರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಕಳೆದ 14 ವರ್ಷಗಳಿಂದ ಸಮಾಜ ಸೇವಕರಾದ ಜಿ.ಆರ್ ಶೆಟ್ಟಿ ಮತ್ತು ಗೀತಾ ಆರ್ ಶೆಟ್ಟಿ ದಂಪತಿಗಳು ಬೆಳ್ಮ ಪಂಚಾಯತಿಗೆ ಸೇರಿದ ಪೆಲತ್ತಡಿಯಲ್ಲಿ ನಡೆಸುತ್ತಿರುವ ಮಾತೆಯರ ಸೇವಾಶ್ರಮದಲ್ಲಿ ಸುಮಾರು 70 ರಷ್ಟು ಅನಾಥ ಮಹಿಳೆಯರಿದ್ದಾರೆ. ಅವರಿಗಾಗಿ ವಿವಿಧ ಸೇವಾ ಸಂಸ್ಥೆಗಳು ಆಯ್ದ ಕೆಲವು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಆಶ್ರಮವಾಸಿಗಳಿಗೆ ಮನಶ್ಯಾಂತಿ ನೀಡುತ್ತಿರುವುದು ವಾಡಿಕೆಯಾಗಿದೆ. ಅದರಂತೆ ಪ್ರಬುದ್ಧ ಕಲಾವಿದರನ್ನು ಕಲೆ ಹಾಕಿ ಮಹಾಭಾರತದೊಳಗಣ ‘ಕರ್ಣಾರ್ಜುನ’ ಪ್ರಸಂಗದ ತಾಳಮದ್ದಳೆಯನ್ನು ಏರ್ಪಡಿಸಲಾಗಿತ್ತು. ಯಕ್ಷಗಾನ ರಂಗದ ಪ್ರಬುದ್ಧ ಕಲಾವಿದರಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ (ಕರ್ಣ), ಗಣೇಶ ಕಾವ ಅಂಡಾಲಬೀಡು (ಅರ್ಜುನ), ವಿದ್ಯಾಧರ ಶೆಟ್ಟಿ ಪೊಸಕುರಲ್ (ಶಲ್ಯ), ಪ್ರವೀಣ್ ರೈ ಎಲಿಯಾರ್ (ಶ್ರೀ ಕೃಷ್ಣ), ಹರಿಶ್ಚಂದ್ರ ಮಾಡೂರು (ಅಶ್ವಸೇನ) ಮತ್ತು…
ಆಳ್ವಾಸ್ ಕಾಲೇಜು (ಸ್ವಾಯತ್ತ) ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಂಗಭೂಮಿ, ಸಿನಿಮಾ, ಧಾರಾವಾಹಿ ಮತ್ತು ಕಿರುಚಿತ್ರಗಳಲ್ಲಿ ಅಭಿನಯಿಸಲು ಆಸಕ್ತಿ ಹೊಂದಿರುವವರಿಗಾಗಿ ಆಯೋಜಿಸಲಾದ ಎರಡು ದಿನಗಳ ಅಭಿನಯ ಸೂಕ್ಷ್ಮತೆಗಳ ತರಬೇತಿ ಕಾರ್ಯಾಗಾರಕ್ಕೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ಚಾಲನೆ ದೊರೆಯಿತು. ಕೇಂದ್ರದ ನಿರ್ದೇಶಕ ಡಾ| ಜೀವನ್ರಾಮ್ ಸುಳ್ಯರವರ ಮಾರ್ಗದರ್ಶನದಲ್ಲಿ ಜುಲೈ 6 ಮತ್ತು 7ರಂದು ನಡೆಯಲಿರುವ ಈ ಕಾರ್ಯಾಗಾರದಲ್ಲಿ ಅಭಿನಯದ ವಿವಿಧ ಆಯಾಮಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಅಭಿನಯವು ಕೇವಲ ರಂಗಭೂಮಿ ಅಥವಾ ಸಿನಿಮಾಕ್ಕೆ ಸೀಮಿತವಾಗಿಲ್ಲ. ಶಿಕ್ಷಕರು, ವೃತ್ತಿಪರರು, ಆಡಳಿತಗಾರರು ಸೇರಿದಂತೆ ಪ್ರತಿಯೊಬ್ಬರ ಬದುಕಿನಲ್ಲೂ ಪರಿಣಾಮಕಾರಿ ಅಭಿವ್ಯಕ್ತಿಗೆ ಅಭಿನಯದ ಕೌಶಲ್ಯ ಅತ್ಯಗತ್ಯ. ಇಂದಿನ ಯುವ ಜನರಲ್ಲಿ ದೇಹದ ಚಲನವಲನವು ಸಹಜತೆಯನ್ನು ಕಳೆದುಕೊಂಡು ಬಿಗಿತ ಹೆಚ್ಚಾಗಿದೆ. ಅದನ್ನು ನಿವಾರಿಸಿ ದೇಹಭಾಷೆ, ಆತ್ಮವಿಶ್ವಾಸ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗುತ್ತವೆ. ಯಾವುದೇ ಕ್ಷೇತ್ರದಲ್ಲಿ ಯಶಸ್ಸು…















