Author: admin
ರೋಟರಿ ಕ್ಲಬ್ ಕಾರ್ಕಳದ ಸುಮಾರು 30 ಮಂದಿ ಸದಸ್ಯರು ಮತ್ತು ಕುಟುಂಬ ಸದಸ್ಯರನ್ನು ಒಳಗೊಂಡ ತಂಡ ಐದು ದಿನಗಳ ಥೈಲ್ಯಾಂಡ್ ಪ್ರವಾಸವನ್ನು ಕೈಗೊಂಡಿತು. ಕಾರ್ಕಳದಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಿ ಅಲ್ಲಿಂದ ಥೈಲ್ಯಾಂಡ್ಗೆ ಪ್ರಯಾಣ ಬೆಳೆಸಿದ ತಂಡವು ಸುಂದರ ಪ್ರಕೃತಿ ಸೌಂದರ್ಯಕ್ಕೆ ಪ್ರಸಿದ್ಧವಾದ ಕೊಚಾಂಗ್ ದ್ವೀಪ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ಪ್ರವಾಸದ ಅವಧಿಯಲ್ಲಿ ಸದಸ್ಯರು ಥೈಲ್ಯಾಂಡ್ನ ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಸ್ಥಳೀಯ ವೈಶಿಷ್ಟ್ಯಗಳನ್ನು ಆನಂದಿಸಿದರು. ಈ ಪ್ರವಾಸವನ್ನು ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ಕೆ. ನವೀನ್ ಚಂದ್ರ ಶೆಟ್ಟಿ ಹಾಗೂ ರೊಟೇರಿಯನ್ ಜಾನ್ ಆರ್. ಡಿ. ಸಿಲ್ವಾ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಟಿ.ವಿ.ಎನ್ ಮೂರ್ತಿ ಅವರ ಪ್ರತಿಷ್ಠಿತ ‘Rise Tour’ ಸಂಸ್ಥೆಯ ಮೂಲಕ ಪ್ರವಾಸದ ಸಮಗ್ರ ವ್ಯವಸ್ಥೆಯನ್ನು ಮಾಡಲಾಗಿತ್ತು. ಪ್ರವಾಸದಲ್ಲಿ ಭಾಗವಹಿಸಿದ ಸದಸ್ಯರು ಉತ್ತಮ ಅನುಭವವನ್ನು ಹಂಚಿಕೊಂಡು, ಇಂತಹ ಪ್ರವಾಸಗಳು ಸದಸ್ಯರ ಮಧ್ಯೆ ಸ್ನೇಹ, ಆತ್ಮೀಯತೆ ಮತ್ತು ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮನೆ ಮನೆಯಲ್ಲೂ ರಾಮ, ಮನ ಮನದಲ್ಲೂ ರಾಮ ಎನ್ನುವ ಒಂದು ಉತ್ತಮ ಕೈಂಕರ್ಯದ ಸಂಕಲ್ಪ ಇಲ್ಲಿ ಆಯೋಜಕರು ಮಾಡಿದ್ದಾರೆ. ಅದನ್ನು ಮನೆಯಿಂದ ಆರಂಭಿಸಲು ಮನೆಯಲ್ಲಿರುವ ಹಿರಿಯರು ಮನೆಯ ಮಕ್ಕಳಿಗೆ ಕಥಾ ರೂಪದಲ್ಲಿ ಹೇಳುವ ಪರಿಪಾಠ ಬೆಳೆಸಬೇಕು. ಹಿಂದೆ ಮನೆಯಲ್ಲಿ ಅಜ್ಜಿ ಮೊಮ್ಮಕ್ಕಳಿಗೆ ಕಥೆ ಹೇಳುತ್ತಾ ನಮ್ಮ ದೈವಿಕ ಪರಂಪರೆ ಹಾಗೂ ಪುರಾಣಗಳ ಕಥೆಯನ್ನು ತಿಳಿಸುತ್ತಾ ಮಕ್ಕಳಲ್ಲಿ ಸುಜ್ಞಾನದ ಸಂಸ್ಕಾರವನ್ನು ಮೊಳಕೆ ಹೊಡೆಯಲು ಕಾರಣವಾಗುತ್ತಿದ್ದರು. ಈಗ ಅಜ್ಜ ಅಜ್ಜಿ ಮನೆಯಲ್ಲಿ ಇದ್ದರೂ ಕೂಡ ಟಿವಿ ಧಾರಾವಾಹಿಗಳನ್ನು ನೋಡುವುದರಲ್ಲಿ ತಲ್ಲಿನರಾಗಿರುತ್ತಾರೆ. ಅದು ತಪ್ಪು ಅಂತ ಹೇಳಲಾರೆ, ಕಾಲದೊಂದಿಗೆ ನಾವು ಹೋಗುತ್ತಿದ್ದೇವೆ. ಆದರೆ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯ ಅರಿವು ಮೂಡಿಸುವ ಅಗತ್ಯವಿದೆ ಎಂದು ವಿದ್ಯಾವಿಹಾರ್ ಗಾಂವ್ದೇವಿ ಶ್ರೀ ಅಂಬಿಕಾ ಆದಿನಾಥೆಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಪೆರ್ಣoಕಿಲ ಹರಿದಾಸ್ ಭಟ್ ನುಡಿದರು. ಅವರು ಮೇ 24ರಂದು, ವಿದ್ಯಾವಿಹಾರ್ ಗಾಂವ್ದೇವಿ ಶ್ರೀ ಅಂಬಿಕಾ ಆದಿನಾಥೆಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗದ…
ಮೇ 27 ರಂದು ಸರಕಾರಿ ಪ್ರೌಢ ಶಾಲೆ ಮೂಡಂಬೈಲುವಿನಲ್ಲಿ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ನೂತನವಾಗಿ ನಿರ್ಮಿಸಲಾದ ರಂಗಮಂದಿರದ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನೆರವೇರಿತು. “ನಾನು ಏನು ಸಾಧನೆ ಮಾಡಿದ್ದೇನೋ ಅದಕ್ಕೆ ನಾನು ಪಡೆದ ವಿದ್ಯಾಭ್ಯಾಸವೇ ಕಾರಣ. ಮೂಡಂಬೈಲು ಪ್ರೌಢ ಶಾಲೆ ನನಗೆ ಅತ್ಯಂತ ಹತ್ತಿರವಾದ ಶಾಲೆ. ನಾನು ಕುಳೂರು ಶಾಲೆಯಲ್ಲಿ ಕಲಿತಿದ್ದರೂ, ಮೂಡಂಬೈಲು ಶಾಲೆಯೊಂದಿಗೂ ನನಗೆ ಆತ್ಮೀಯ ಸಂಬಂಧವಿದೆ” ಎಂದು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಡಾ| ಕನ್ಯಾನ ಸದಾಶಿವ ಶೆಟ್ಟಿಯವರು ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕ-ರಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮವನ್ನು ಮಂಜೇಶ್ವರದ ಜನಪ್ರಿಯ ಶಾಸಕರಾದ ಎ.ಕೆ.ಎಂ ಅಶ್ರಫ್ ಅವರು ಉದ್ಘಾಟಿಸಿ ಮಾತನಾಡುತ್ತಾ, ‘ಶಾಸಕನಾಗಿ ನನಗೆ ಸಿಕ್ಕ ಮೊದಲ ಕಾರ್ಯಕ್ರಮ ಹಾಗೂ ಮೊದಲ ಸನ್ಮಾನ ಇದಾಗಿದ್ದು, ಇದು ನನಗೆ ಅಪಾರ ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಮೂಡಂಬೈಲು ಶಾಲೆಯ ಪ್ರಗತಿಗಾಗಿ ನನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರವನ್ನು ನೀಡಲು ನಾನು ಸಿದ್ಧನಿದ್ದೇನೆ’ ಎಂದರು. ಇದೇ ವೇಳೆ…
11 ನೇ ವರ್ಷದ ಪಟ್ಲ ಸಂಭ್ರಮ : ಡಾ. ಮೋಹನ ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ -2026 ಕಾರ್ಯಕ್ರಮ ಮೇ 30 ರಂದು ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು. ಬೆಳಿಗ್ಗೆ ಯಕ್ಷಧ್ರುವ ಪಟ್ಲ ಸಂಭ್ರಮ -2026 ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ಯಾಜಿ ನಿರಂಜನ ಭಟ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕರಾದ, ಉದ್ಯಮಿ ಶಶಿಧರ ಬಿ ಶೆಟ್ಟಿ ಉದ್ಘಾಟಿಸಿದರು. ಸಂಘ ಸಂಸ್ಥೆಗಳು ಬೆಳೆಯ ಬೇಕಾದರೆ ಎಲ್ಲರ ಸಹಕಾರ ಬೇಕು. ಯಕ್ಷಗಾನ ಕಲೆಯನ್ನು ಉಳಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕಾಲಮಿತಿ ಯಕ್ಷಗಾನದಿಂದ ಇವತ್ತು ಕಲಾವಿದರು ಬೇರೆ ಉದ್ಯೋಗವನ್ನೂ ಮಾಡುತ್ತಿದ್ದಾರೆ. ಕಲಾವಿದರ ಬದುಕು ಕಟ್ಟಿ ಕೊಡುವ ಕೆಲಸ ಪಟ್ಲ ಫೌಂಡೇಶನ್ ಮಾಡುತ್ತಿದೆ. ಕಲಾವಿದರ ಶ್ರೇಯೋಭಿವೃದ್ದಿಯ ನಿಟ್ಟಿನಲ್ಲಿ ದಾನಿಗಳಿಗೆ ದಾನ ಮಾಡುವ ಶಕ್ತಿ ಕೊಡಲಿ ಎಂದರು. 11 ನೇ ವರ್ಷದ ಪಟ್ಲ ಸಂಭ್ರಮದಲ್ಲಿ ಡಾ. ಎಂ ಮೋಹನ ಆಳ್ವ ಅವರಿಗೆ 2026 ರ ಯಕ್ಷಧ್ರುವ…
ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ಇದರ ಸಿಬ್ಬಂದಿಗಳಿಗೆ ಒಂದು ದಿನದ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ಹೊಟೇಲ್ ಮಣಿಪಾಲ್ ಇನ್ (ರಂಜಿತಾ ಪ್ಯಾಲೇಸ್) ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಶಿರ್ವ ಸಹಕಾರಿ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಕುತ್ಯಾರ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಬಿಂದು ನಾಯರ್ (ಪ್ರೊಫೆಸರ್ – ಕರ್ನಾಟಕ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮೂಡಬಿದ್ರೆ) ಇವರು ಸಿಬ್ಬಂದಿಗಳಿಗೆ ಟೋಟಲ್ ಕ್ವಾಲಿಟಿ ಆಫ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಯೂನಿಯನ್ ನ ಕಾರ್ಯದರ್ಶಿ ಶ್ರೀಮತಿ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗ, ಸಂಸ್ಥೆಯ ಅಧ್ಯಕ್ಷರಾದ ಅರುಣ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಎಂ. ಗಣೇಶ್ ಕಿಣಿ, ಹಿರಿಯ ನಿರ್ದೇಶಕರಾದ ನಾರಾಯಣ ಬಲ್ಲಾಳ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳು…
ಎಲ್ಐಸಿ ಕಾರ್ಪೊರೇಟ್ ಕ್ಲಬ್ ಸದಸ್ಯರಾಗಿ ಜಪಾನ್ನ ಟೋಕಿಯೊದಲ್ಲಿ ನಡೆಯುವ ಶೈಕ್ಷಣಿಕ ಸಮ್ಮೇಳನಕ್ಕೆ ಅನಿಲ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಅನಿಲ್ ಶೆಟ್ಟಿಯವರಿಗೆ ಜಪಾನ್ ಪ್ರವಾಸವು ಅತ್ಯಂತ ಯಶಸ್ವಿಯಾಗಲಿ ಮತ್ತು ವೃತ್ತಿಜೀವನಕ್ಕೆ ಮತ್ತಷ್ಟು ಮೆರುಗನ್ನು ನೀಡಲಿ ಎಂದು ಹಾರೈಸೋಣ.
ಉಡುಪಿ ಜಿಲ್ಲೆಯ ಪುಟ್ಟ ಹಳ್ಳಿಯೊಂದರ ಬಡ ಕುಟುಂಬವೊಂದರಲ್ಲಿ ಜನಿಸಿದ ರಾಜೇಂದ್ರ ವಿ ಶೆಟ್ಟಿಯವರು ಬಾಲ್ಯದಲ್ಲೇ ಬಡತನದ ಬೇಗೆ ಅನುಭವಿಸಿದರು. ಅವರ ತಂದೆ ತಾಯಿ ಕುಟುಂಬದೊಂದಿಗೆ ಉಡುಪಿಯಿಂದ ಹುಬ್ಬಳ್ಳಿಗೆ ವಲಸೆ ಬಂದಾಗ ರಾಜೇಂದ್ರ ಶೆಟ್ಟಿಯವರು ಬಾಲಕನಾಗಿದ್ದರು. ಹೇಗೋ ಕಷ್ಟಪಟ್ಟು 8ನೇ ತರಗತಿಯವರೆಗೆ ಓದಿದ ಅವರು ಉದ್ಯೋಗಕ್ಕಾಗಿ ಮನೆಯಲ್ಲಿ ಯಾರಿಗೂ ಹೇಳದೆ ರೈಲು ಹತ್ತಿದರು. ಅದು ಹೋಗಿ ನಿಂತದ್ದು ಮುಂಬೈಯಲ್ಲಿ. ಅಲ್ಲಿ ರೈಲ್ವೇ ಸ್ಟೇಷನ್ ಅಕ್ಕಪಕ್ಕದಲ್ಲಿ ಚಹಾ ಮಾರುವ ಕೆಲಸ ಮಾಡಿದರು. ಆರಂಭದಲ್ಲಿ ಬೀದಿ ಬದಿಯಲ್ಲಿ ಮಲಗಿ ಕೆಲಸ ಹುಡುಕುತ್ತಾ, ಅಲ್ಲಿನ ಹೊಟೇಲ್ಗಳಿಗೆ ಕೆಲಸಕ್ಕಾಗಿ ಅಲೆದಾಡಿದರು. ಮುಂದೆ ಅವರಿಗೆ ಹೊಟೇಲ್ನಲ್ಲಿ ಕ್ಲೀನರ್ ಕೆಲಸ ಸಿಗುತ್ತದೆ. ವಿವಿಧ ಹೋಟೆಲ್ಗಳಲ್ಲಿ ಅಡುಗೆ ಮನೆಯ ಕೆಲಸ, ಕ್ಲೀನರ್, ವೈಟರ್, ಕ್ಯಾಪ್ಟನ್ನಂತಹ ನಾನಾ ತರಹದ ಕೆಲಸಗಳನ್ನು ಮಾಡಿದರು. ಆ ಬಳಿಕ ದೇವತಾ ಮನುಷ್ಯರಂಥ ಮಾಲಕರೊಬ್ಬರು ಸಿಕ್ಕಿದ್ದರಿಂದ ಅವರ ಹೊಟೇಲ್ನಲ್ಲಿ 12 ವರ್ಷಗಳ ಕಾಲ ಮ್ಯಾನೇಜರ್ ಆಗಿ ದುಡಿದರು. ಮುಂಬೈಗೆ ಬಂದಾಗ ಅವರಿಗೆ 13ರಿಂದ 14 ವರ್ಷ ಆಗಿತ್ತು. ಅಲ್ಲಿ 18…
ಬೆಳಿಯೂರು ಗುತ್ತು ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ವಿಲೇಜ್ ಬಾಯ್ಸ್’ ಕನ್ನಡ ಚಲನಚಿತ್ರದ ಮುಹೂರ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನ ಅನುವಂಶಿಕ ಪ್ರಧಾನ ಅರ್ಚಕರಾದ ಶ್ರೀ ಹರಿ ಅಸ್ರಣ್ಣರು ದೇವರ ಸಾನಿಧ್ಯದಲ್ಲಿ ಕ್ಯಾಮೆರಾ ಪೂಜೆ ಸಲ್ಲಿಸಿ, ಸಿನಿಮಾ ಕ್ಲಾಪ್ ಬೋರ್ಡ್ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಸಿನಿಮಾ ತಂಡಕ್ಕೆ ಆಶೀರ್ವಾವಚನ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತುಳು ರಂಗಭೂಮಿಯ ಖ್ಯಾತ ರಂಗ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್, ನಿವೃತ್ತ ಸೇನಾಧಿಕಾರಿ ರಂಗನಾಥ್ ಎಸ್ ರೈ, ಬನ ಸಿನಿಮಾ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ಬನ ಸಿನಿಮಾದ ನಿರ್ಮಾಪಕ ಮನೋಹರ್ ರೈ, ಅನಾರ್ಕಲಿ ಸಿನಿಮಾದ ನಿರ್ದೇಶಕ ಹರ್ಷಿತ್ ಸೋಮೇಶ್ವರ, ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿ ಇದರ ಅಧ್ಯಕ್ಷರಾದ ಪುಷ್ಪರಾಜ್ ಇರ್ದೆ ಮತ್ತು ಕಾರ್ಯದರ್ಶಿಗಳಾದ ಚಂದ್ರಶೇಖರ್ ಮೂರೂರು, ಆನಂದ್ ಶೆಟ್ಟಿ ಕುಕ್ಕುಂದೂರು ಅಥಿತಿಗಳಾಗಿ ಉಪಸ್ಥಿತರಿದ್ದು ಚಿತ್ರೀಕರಣಕ್ಕೆ ಶುಭ ಹಾರೈಸಿದರು. ವಿಲೇಜ್ ಬಾಯ್ಸ್ ಕನ್ನಡ ಸಿನಿಮಾಕ್ಕೆ ನಿರ್ಮಾಪಕರಾಗಿ…
ವನಸುಮದೋಲ್ ಎನ್ನ ಜೀವನವು ವಿಕಸಿಸುವಂತೆ ಮನವನನು ಗೊಳಿಸು ಗುರುವೆ’ ಎಂಬ ಸದಾಶಯ ವಾಕ್ಯಕ್ಕೆ ಒಪ್ಪುವ ಜೀವನ ಶೈಲಿಯನ್ನು ಅನುಸರಿಸಿಕೊಂಡು ಕಾನನದ ಸುಮವೊಂದು ಮೌನದಿಂ ಬಿರಿದು ನಿಜ ಸೌರಭವ ಸೂಸಿ ತಾನೆಲೆಯ ಪಿಂತಿರ್ದು ದೀನತೆಯ ತೋರಿ ಅಭಿಮಾನವನು ತೊರೆದು ಕೃತಕೃತ್ಯೆಯನು ಪಡೆವಂತೆ ಬಾಳನ್ನು ರೂಪಿಸಿಕೊಂಡ ಸಜ್ಜನ ಸಂಘಟಕ ಬಲು ಪ್ರತಿಷ್ಠಿತ ಚೇಳ್ಯಾರು ಗುತ್ತು ಮೂಲದ ದಿವಾಕರ ಸಾಮಾನಿ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಜನರ ಜೀವನಕ್ಕೆ ಹತ್ತಿರವಾಗುವ ಸಮಾಜಬಂಧು ಸಾಮಾನಿ ಯಾವುದೇ ಪ್ರತಿಫಲಾಪೇಕ್ಷೆ ಅಥವಾ ಕೀರ್ತಿಕಾಂಕ್ಷೆಯನ್ನು ಹೊಂದಿದವರಲ್ಲ. ಬಂಟ ಸಮುದಾಯದ ಮೂಲ ಸಂಘಟನೆಯಾದ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಮೂಲ ಘಟಕದ ಜೊತೆಗೆ ತನ್ನನ್ನು ತೊಡಗಿಸಿಕೊಂಡು ಹಲವು ಮಜಲುಗಳ ಮುಂದಾಳು ಎನಿಸಿ ಸಮುದಾಯಪರ ಚಟುವಟಿಕೆಗಳಿಂದ ಜನಪ್ರಿಯತೆ ಪಡೆದ ಸಾಮಾನಿ ಯಾವುದೆ ಅಧಿಕಾರ ಲಾಲಸೆಯಿಂದ ಕಾರ್ಯ ಎಸಗಿಕೊಂಡು ಬಂದಿಲ್ಲವಾದರೂ ಅವರ ಯೋಗ್ಯತೆಗೆ ಅರ್ಹವಾದ ಉತ್ತಮ ಜವಾಬ್ದಾರಿಯುತ ಸ್ಥಾನಮಾನಗಳು ಲಭ್ಯವಾಗಿವೆ. ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಕಾರ್ಯಕಾರಿ ಸಮಿತಿ ಸಂಚಾಲಕರಾಗಿ ಮಹತ್ವದ…
ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ. ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 2 (ಎ) ಯಲ್ಲಿ ಸೇರಲು ಅರ್ಹವಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಬಂಟರು ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತವಾಗಿ ಬಂಟ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಬಳಿ ಇರುವ ಶ್ರೀಮತಿ ಎಸ್.ಎಮ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಇದರ 105 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿದ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ ಸಮಾಜವನ್ನು ಕೇಂದ್ರ ಸರಕಾರದ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಹಾಗೂ ರಾಜ್ಯದ ಮೀಸಲಾತಿ…















