Author: admin

ಪರ‍್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಉಡುಪಿ, ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಪರಮಪೂಜ್ಯ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ದಶಂಬರ್ 13, ಶನಿವಾರದಂದು ಸಂಜೆ 5:45 ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಹಿಸಲಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರುಳಿ ಕಡೆಕಾರ್ ತಿಳಿಸಿದರು. ಅವರು ಉಡುಪಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ‍್ಯಕ್ರಮವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರಮಪೂಜ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರೆ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕರ‍್ಯಕ್ರಮದಲ್ಲಿ…

Read More

ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಡಿಸೆಂಬರ್ ೧೨ ರಂದು ಚಿಣ್ಣರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ರಾಷ್ಟçಮಟ್ಟದ ಚೆಸ್ ಆಟಗಾರ ಪೂರ್ಣೇಶ್‌ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಜಿ ಎಮ್ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅಮೋಘ ಸಾಧನೆಯನ್ನು ಮಾಡಿರುತ್ತಾರೆ. ಪೋಷಕರು ತಮ್ಮ ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸಬೇಕೆ0ದು ಕರೆ ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಪುಟಾಣಿ ಮಕ್ಕಳಿಗೆ ಶುಭಹಾರೈಸಿ ಮಾತನಾಡಿ ಪೋಷಕರು ಚಿಕ್ಕ ಮಕ್ಕಳ ಶಾಲಾ ಚಟುವಟಿಕೆಗಳನ್ನು ವೀಕ್ಷಿಸಲು, ಪ್ರೋತ್ಸಾಹಿಸಲು ಎಲ್ಲಾ ಕಾರ್ಯಕ್ರಮಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಾರೆ ಆದರೆ ಅದೇ ಮಕ್ಕಳು ದೊಡ್ಡವರಾದಾಗ ಪೋಷಕರು ಮೊದಲಿನ ಆಸಕ್ತಿಯನ್ನು ತೋರಿಸುವುದಿಲ್ಲ. ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳ ಜೊತೆಗೆ ಕ್ರೀಡೆ ಕೂಡ ತುಂಬಾ ಮುಖ್ಯ. ಜಿ ಎಮ್ ಸಂಸ್ಥೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರುತ್ತಿದೆ, ಇದಕ್ಕೆ ಪೋಷಕರು ನಿರಂತರ ಪ್ರೋತ್ಸಾಹಿಸಬೇಕೆಂದರು.ಶಾಲಾ ಪ್ರಾಂಶುಪಾಲರಾದ ಜಾರ್ಜ್…

Read More

ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ 2025-26ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ್ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 19ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್.ವಿ ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 16ನೇ ಬಾರಿ ಪಡೆದು ಅವಳಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 17-3 ಅಂಕಗಳ ಅಂತರದಿಂದ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ವಿರುದ್ಧ 14 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ 17-2 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿ.ಎಫ್.ಜಿ.ಸಿ ಕಾಲೇಜು ವಿರುದ್ಧ 15 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ “ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್ ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಯನ್ನು ಆಳ್ವಾಸ್ ಕಾಲೇಜಿನ…

Read More

ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಸ್ಥಾಪಿಸಲ್ಪಟ್ಟ ಯಕ್ಷಧ್ರುವ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ದೇರಳಕಟ್ಟೆ ಕಂಫರ್ಟ್ಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಈ ಶಾಖೆಯನ್ನು ದೇರಳಕಟ್ಟೆಯ ಮುಖ್ಯಪೇಟೆಗೆ ಸ್ಥಳಾಂತರಿಸಲಾಯಿತು. ಶಾಖೆಯ ಉದ್ಘಾಟನೆಯನ್ನು ಕಂಫರ್ಟ್ಸ್ ಬಿಲ್ಡಿಂಗ್ ಮಾಲಕರಾದ ಲ| ಚಂದ್ರಹಾಸ ಶೆಟ್ಟಿ ನೆರವೇರಿಸಿದರು. ದೇರಳಕಟ್ಟೆಯಲ್ಲಿ ಪ್ರಥಮ ಶಾಖೆಯನ್ನು ತೆರೆದು ಮಂಗಳೂರಿನ ಪಂಪ್ ವೆಲ್ ನಲ್ಲಿ ಎರಡನೇ ಶಾಖೆಯನ್ನು ಸ್ಥಾಪಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಯಕ್ಷಧ್ರುವ ಸೌಹಾರ್ದ ಸೊಸೈಟಿಗೆ ಶುಭವನ್ನು ಹಾರೈಸಿದರು. ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದ, ಪಟ್ಲ ಫೌಂಡೇಶನ್ನಿನ ಸಂಘಟನಾ ಕಾರ್ಯದರ್ಶಿಯಾಗಿರುವ ಪ್ರದೀಪ್ ಆಳ್ವ ಕದ್ರಿ ದೀಪ ಬೆಳಗಿಸಿದರು. ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರು ಸಂಸ್ಥೆಯು ಕಳೆದ ಒಂದು ವರ್ಷದ ಅವಧಿಯಲ್ಲಿ ನಮ್ಮ ನಿರೀಕ್ಷೆಯನ್ನು ಮೀರಿ ಲಾಭವನ್ನು ಗಳಿಸಿರುತ್ತದೆ. ಇದಕ್ಕೆ ಸಂಘದ ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಕಾರಣಕರ್ತರಾಗಿರುತ್ತಾರೆ. ಮುಂದಕ್ಕೂ ಸರ್ವ ಸಹಕಾರವು ಇದೇ ರೀತಿ ಮುಂದುವರೆಯಲಿ ಎಂದರು. ಕರ್ನಾಟಕ ಸರಕಾರದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ…

Read More

ಪ್ರಪಂಚದಾದ್ಯಂತ ನಿರೀಕ್ಷೆ ಮೂಡಿಸಿರುವ ಬಂಟ್ಸ್ ನೌ ಚಾನೆಲ್‌ ಗುರುವಾರ (ಡಿಸೆಂಬರ್ 11) ಲೋಕಾರ್ಪಣೆಗೊಂಡಿತು. ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ ಅವರು ಚಾನೆಲ್‌ ಲೋಕಾರ್ಪಣೆ ಮಾಡಿದರು. ಬಂಟ್ಸ್ ನೌ ದೇಶಾದ್ಯಂತ ಮನೆ ಮಾತಾಗಿರುವ ಸಂಸ್ಥೆ. ಸುದ್ದಿ ಜಗತ್ತಿನಲ್ಲಿ ಹೊಸ ಹೊಸ ಪ್ರಯೋಗಗಳು, ವಿಭಿನ್ನ ಮತ್ತು ವಿಶೇಷ ವಸ್ತುನಿಷ್ಠ ಕಾರ್ಯಕ್ರಮಗಳ ಮೂಲಕ ಜನರ ನಂಬಿಕೆಗೆ ಪಾತ್ರವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಬಂಟ್ಸ್ ನೌ ಡಿಜಿಟಲ್‌ ಮಾಧ್ಯಮ ಆರಂಭವಾಗಿ ಹದಿನಾರು ವರ್ಷ ಕಳೆದಿದ್ದು, ಬಂಟ ಸಮಾಜದ ಮೂವರು ಮಹಾನ್ ದಾನಿಗಳ ಸಹಕಾರದಿಂದ ಈಗ ಚಾನೆಲ್‌ ಲೋಕಾರ್ಪಣೆಯಾಗಿ ಎಲ್ಲರ ಮನೆಮನಗಳಿಗೆ ಬರಲಿವೆ. ಚಾನೆಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಧ್ಯಮ ಸಂಸ್ಥೆಯ ಸ್ಥಾಪಕ ಆರ್ ವಿ ಶೆಟ್ಟಿ, ಸುಕೇಶ್ ಭಂಡಾರಿ, ಉಮೇಶ್ ಶೆಟ್ಟಿ, ಮೋಹನ್ ಶೆಟ್ಟಿ, ರವಿರಾಜ್ ರೈ, ನೇಮಿರಾಜ್ ಶೆಟ್ಟಿ, ದಿನಕರ್ ರೈ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಕಾಲ ಎಷ್ಟು ಬದಲಾಯ್ತು ಎಂದರೆ, ಮಹಾ ಕಾಲನೇ ಬೆಚ್ಚಿಬೀಳುವಂತೆ!. ಯಾರಿಗೂ ಸಾವಿನ ಭಯವಿಲ್ಲ. ಆರೋಗ್ಯದ ಕಾಳಜಿಯೇ ಇಲ್ಲ. ಸಮಾಜದ ಹೆದರಿಕೆ ಇಲ್ಲವೇ ಇಲ್ಲ. ಮನೆಯವರ ಗೌರವ, ಕಾಳಜಿ, ಹೆದರಿಕೆ ಎಲ್ಲವೂ ಮಂಗಮಾಯ. ಎಲ್ಲೆಲ್ಲೂ ದುಡ್ಡು ಅಂತಸ್ತು, ಪ್ರಭಾವ ಇದು ಕೆಲಸ ಮಾಡುವ ಕಲಿಕಾಲವನ್ನು ನಾವೇ ಸೃಷ್ಟಿಸಿಕೊಂಡಾಗಿದೆ!. ಎಲ್ಲರೂ ಎಲ್ಲದಕ್ಕೂ ಸ್ವತಂತ್ರರು. ಇದು ಪ್ರಸ್ತುತ ಸಮಾಜದ ಪರಿಸ್ಥಿತಿ. ಇದರ ಪ್ರಭಾವ ಎಲ್ಲಿಯವರೆಗೆ ಮುಟ್ಟಿದೆ ಅಂದರೆ ಒಂದು ಕಾಲದಲ್ಲಿ ಸಾರ್ವಜನಿಕವಾಗಿ ಮಾಡಬಾರದ ಕೆಲವಷ್ಟು ಸಂಗತಿಗಳು ಈಗ ಲಂಗುಲಗಾಮು ಇಲ್ಲದೆ ನಡೆಯುತ್ತಿದೆ. ಅದನ್ನು ಪ್ರಶ್ನಿಸಿದರೆ ಇಲ್ಲವೇ ಸರಿಯಲ್ಲ ಎಂದು ಆಕ್ಷೇಪ ಮಾಡಿದರೆ ಹಾಗೆ ಮಾಡುವವನೇ ಸಂಸ್ಕಾರ ವಿಹೀನ, ಅನಾಗರಿಕ, ಗಾಂಧೀ ಮೊದಲಾದ ಬಿರುದು ಪಡೆಯುವಂತಾಗಿದೆ!. ಬಾಕಿ ಎಲ್ಲಾ ಬದಿಗಿಟ್ಟು “ಕುಡಿತ”ದ ವಿಚಾರವನ್ನು ಹೇಳುವುದಾದರೆ ಇದರಲ್ಲಿ ಎರಡು ವಿಭಾಗ. ಒಂದು ಸ್ಟ್ಯಾಂಡರ್ಡ್ ಅಂದ್ರೆ “ಸೋಶಿಯಲ್ ಕುಡಿತ” ಇನ್ನೊಂದು ದಿನವೂ ಕುಡಿಯವ “ಕುಡುಕ” ಹೊಸ ಸೇರ್ಪಡೆ “ಕುಡುಕಿ”!!!. ಇದು ಎರಡೂ ಸರಿಯಲ್ಲ. ಆದರೆ ಯಾವತ್ತಾದರೂ ಒಮ್ಮೆ ಯಾರದ್ದೋ ಸಮಾಧಾನಕ್ಕೆ…

Read More

ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಭರತ್ ಶೆಟ್ಟಿ, ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2 ಗಂಟೆ 5 ನಿಮಿಷಗಳ ಅವಧಿಯಲ್ಲಿ ಸಿನಿಮಾ ಇರಲಿದ್ದು, ಪ್ರೇಕ್ಷಕರಿಗೆ ಯಾವುದೇ ರೀತಿಯಲ್ಲಿ ಬೋರ್ ಆಗದಂತೆ ಸಿನಿಮಾ ಮೂಡಿ ಬಂದಿದೆ. ಸಿನಿಮಾಕ್ಕೆ ರಾತ್ರಿಯ ಸನ್ನಿವೇಶ ಅಗತ್ಯವಿದ್ದ ಕಾರಣ ಹೆಚ್ಚಿನ ಶೂಟಿಂಗ್ ರಾತ್ರಿಯ ವೇಳೆ ಮಾಡಲಾಗಿದೆ. ಕಲಾವಿದರು ನಿರ್ಮಾಪಕರು ಸಿನಿಮಾಕ್ಕೆ ಸಾಕಷ್ಟು ಶ್ರಮವಹಿಸಿ ದುಡಿದಿದ್ದಾರೆ. ಎಲ್ಲರೂ ಡಿ.12ರಂದು ಥಿಯೇಟರ್ ನಲ್ಲಿ ಸಿನಿಮಾ ನೋಡಿ ಎಂದರು. ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್,…

Read More

ಮೂಡುಬಿದಿರೆಯ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರೀಸರ್ಚ್ ಸೆಂಟರ್ ನ ಡೀನ್ ಆಗಿರುವ ಡಾ. ಮಹಾಬಲೇಶ್ ಶೆಟ್ಟಿ ಅವರು ಫೋರೋನಿಕ್ಸ್ ಮೆಡಿಸಿನ್ ಮತ್ತು ಮೆಡಿಕಲ್ ಕ್ಷೇತ್ರದಲ್ಲಿ ಸಲ್ಲಿಸಿದ ಅಸಾಧಾರಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮೆಡಿಕೋಲಿಗಲ್ ಸೊಸೈಟಿಯು ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ಬಾಗಲಕೋಟೆಯ ಎಸ್.ಆರ್ ಪರ್ಡಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ರಾಜ್ಯ ಸಮಾವೇಶದಲ್ಲಿ ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರಾದ ರವಿ ವಿ ಹೊಸ್ಮಾನಿ ಹಾಗೂ ಮಾಜಿ ಸಚಿವ ಎಸ್ ಆರ್ ಪಾಟೀಲ್ ಅವರು ಪ್ರಶಸ್ತಿಯನ್ನು ಪ್ರದಾನಿಸಿದರು.

Read More

ದೇವಾಸ್ಥಾನ ದ ಜೀರ್ಣೋದ್ಧಾರ, ಬೆಳ್ಳಿ ಮುಚ್ಚಳಿಕೆ, ಬಂಗಾರ ಮುಚ್ಚಳಿಕೆ, ಬ್ರಹ್ಮಕಲಶ, ಯಾಗ ಯಜ್ಞ, ದಾನ ಧರ್ಮ ಹೀಗೆ ಎಲ್ಲಾ ವೈದಿಕ ಆಚಾರ ವಿಚಾರದಲ್ಲಿ ಬಂಟರು ಮೊದಲಿಗರು. ಆದುದರಿಂದ ದೈವಾನುಗ್ರಹ ಬಂಟರ ಮೇಲೆ ಅತೀ ಹೆಚ್ಚು. ಎಲ್ಲಿಯವರೆಗೆ ಹೆಚ್ಚೆಂದರೆ ಕರ್ನಾಟಕದಲ್ಲೇ ಡಿವೋರ್ಸ್ ಪ್ರಕರಣದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯು ಪೈಪೋಟಿಯಲ್ಲಿದೆ. ಉಡುಪಿಯಲ್ಲಿ ಯಾವ ಸಮಾಜ ನಂ 1 ಎಂದು ಕೇಳಿದರೆ ಅದು ನಮ್ಮ ಬಂಟ ಸಮಾಜ. ಅಖಂಡ ಕರ್ನಾಟಕದಲ್ಲಿ ಡಿವೋರ್ಸ್ ಪ್ರಕರಣದಲ್ಲಿ ಬಂಟರು ನಂ 1 ..! ನಮ್ಮ ಸಮಾಜದ ಶ್ರೀಮಂತರ ದಾನ ಧರ್ಮದ ಫಲ ಶ್ರುತಿ ಇದೆನ್ನಬಹುದು ..!! ಒಬ್ಬ ದೇವಾಸ್ಥಾನದ ಅರ್ಚಕ ದಾನ ಧರ್ಮದ ಸೇವೆ ನೀಡುವವನಿಗಿಂತ ಹೆಚ್ಚು ಶ್ರೀಮಂತನಿರಬಹುದು..! ಆದರೆ ಆತ ಒಂದು ರೂಪಾಯಿ ಕೂಡಾ ದಾನ ಮಾಡಲಾರ. ದಾನ ಧರ್ಮಕ್ಕೆ ಬಂಟರಿದ್ದಾರೆ. ಒಂದು ದೇವಸ್ಥಾನ ಊರಿಗೆ ಸಂಬಂಧ ಪಟ್ಟದ್ದು ಅದು ಕೇವಲ ಬಂಟರಿಗೆ ಸೀಮಿತವೇ ..? ಅದೇ ದಾನ ಧರ್ಮ ಮಾಡುವವನಿಗೆ ಆತನ…

Read More

ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾಗಿ ಮೂರನೇ ಅವಧಿಗೆ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ಪುನರಾಯ್ಕೆಗೊಂಡಿದ್ದಾರೆ. ಸಂಘದ ಅಧ್ಯಕ್ಷರಾಗಿ ಈ ಹಿಂದಿನ ಅವಧಿಗಳಲ್ಲಿ ಇವರು ಸಂಘದ ಸಭಾಭವನಗಳಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಸಿರಿಮುಡಿ ಕೋ ಆಪರೇಟಿವ್ ಸೊಸೈಟಿ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿದ್ದರು. ಈ ಅವಧಿಯಲ್ಲಿ ಸಂಘದ 15 ಕೋಟಿಗಳ ಮಹತ್ವಾಕಾಂಕ್ಷೆಯ ಬಂಟಾಶ್ರಯ ಯೋಜನೆಗೆ ಮುಂದಿನ ತಿಂಗಳಿನಲ್ಲಿ ಭೂಮಿ ಪೂಜೆ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಡಾ| ಶೆಟ್ಟಿ ಅವರು ರಾಜಕೀಯ, ಸಹಕಾರಿ, ಕಂಬಳ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನೂತನ ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪಲ್ಲವಿ, ಶ್ರೀನಾಥ ಹೆಗ್ಡೆ ನಡ್ಸಾಲು ಗುತ್ತು, ಅನಿತ ವಿಶುಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿಯಾಗಿ ರವಿ ಶೆಟ್ಟಿ ಗುಂಡ್ಲಾಡಿ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಪಲಿಮಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನವೀನ್ ಎನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಿವಿಧ ಉಪ ಸಮಿತಿಗಳನ್ನು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಸಂಘದ…

Read More